ಬೇನಾಮಿ ಆಸ್ತಿಗೆ ಏಳು ವರ್ಷ ಜೈಲು; ಐಟಿ ಇಲಾಖೆಯ ಕಠಿಣ ಎಚ್ಚರಿಕೆ


Team Udayavani, Mar 4, 2017, 3:50 AM IST

tax.jpg

ಕಟಕ್‌/ನವದೆಹಲಿ: ಕಪ್ಪುಹಣದ ಬಳಿಕ ಬೇನಾಮಿ ಆಸ್ತಿಯ ಮೇಲೆ ಕಣ್ಣಿಟ್ಟಿರುವ ಆದಾಯ ತೆರಿಗೆ ಇಲಾಖೆಯು, ಬೇನಾಮಿ ವಹಿವಾಟು ನಡೆಸದಂತೆ ನಾಗರಿಕರಿಗೆ ಎಚ್ಚರಿಕೆಯ ಸಂದೇಶ ರವಾನಿಸಿದೆ.

ಬೇನಾಮಿ ವಹಿವಾಟುಗಳನ್ನು ಮಾಡುವವರಿಗೆ 7 ವರ್ಷಗಳ ಕಠಿಣ ಶಿಕ್ಷೆ ವಿಧಿಸಲಾಗುತ್ತದೆ ಎಂಬುದನ್ನು ಮತ್ತೂಮ್ಮೆ ದೇಶದ ಜನತೆಗೆ ನೆನಪಿಸಿದೆ. ಈ ಕುರಿತು ಶುಕ್ರವಾರ ಪ್ರಮುಖ ಪತ್ರಿಕೆಗಳಲ್ಲಿ ಜಾಹೀರಾತು ನೀಡಿರುವ ಇಲಾಖೆ, “ಬೇನಾಮಿ ವಹಿವಾಟು ಮಾಡಬೇಡಿ. 2016ರ ನ.1ರಿಂದಲೇ ಬೇನಾಮಿ ಆಸ್ತಿ ವಹಿವಾಟು ಕಾಯ್ದೆ, 1988 ಚಾಲ್ತಿಯಲ್ಲಿದೆ. ಕಪ್ಪುಹಣ ಎಂಬುವುದು ಮಾನವತೆಯ ವಿರುದ್ಧದ ಅಪರಾಧ. ಇದನ್ನು ನಿರ್ಮೂಲನೆ ಮಾಡುವಲ್ಲಿ ಎಲ್ಲ ಪ್ರಜ್ಞಾವಂತ ನಾಗರಿಕರು ಕೈಜೋಡಿಸಬೇಕು,’ ಎಂದು ಹೇಳಿದೆ.

ಹೊಸ ಕಾಯ್ದೆಯ ಗುಣವಿಶೇಷಗಳನ್ನೂ ಜಾಹೀರಾತಿನಲ್ಲಿ ಪ್ರಸ್ತಾಪಿಸಲಾಗಿದ್ದು, ನಿಯಮ ಉಲ್ಲಂ ಸಿದವರಿಗೆ 7 ವರ್ಷ ಜೈಲು ಶಿಕ್ಷೆ ವಿಧಿಸಲಾಗುತ್ತದೆ. ಜತೆಗೆ, ಬೇನಾಮಿ ಆಸ್ತಿಯ ಮಾರುಕಟ್ಟೆ ದರದ ಶೇ.25ರಷ್ಟನ್ನು ದಂಡವಾಗಿ ಪಾವತಿಸಬೇಕಾಗುತ್ತದೆ ಎಂದಿದೆ.

ಸರ್ಕಾರಕ್ಕಿದೆ ಸ್ವಾಧೀನಪಡಿಸುವ ಅಧಿಕಾರ
ಬೇನಾಮಿದಾರ(ಬೇನಾಮಿ ಆಸ್ತಿಯು ಯಾರ ಹೆಸರಲ್ಲಿದೆಯೋ ಆ ವ್ಯಕ್ತಿ), ಫ‌ಲಾನುಭವಿ ಮತ್ತು ಬೇನಾಮಿ ವಹಿವಾಟಿಗೆ ಪ್ರಚೋದಿಸುವ ವ್ಯಕ್ತಿಯ ವಿರುದ್ಧ ಐಟಿ ಕಾಯ್ದೆಯಡಿಯಲ್ಲೇ ಪ್ರಕರಣ ದಾಖಲಿಸಿ, 7 ವರ್ಷ ಕಠಿಣ ಶಿಕ್ಷೆಗೊಳಪಡಿಸಲಾಗುತ್ತದೆ. ಇದೇ ವೇಳೆ, ಅಧಿಕಾರಿಗಳಿಗೆ ಸುಳ್ಳು ಮಾಹಿತಿಯನ್ನು ನೀಡುವಂಥ ವ್ಯಕ್ತಿಗಳನ್ನು ವಿಚಾರಣೆಗೊಳಪಡಿಸಿ, 5 ವರ್ಷ ಜೈಲುಶಿಕ್ಷೆ ಹಾಗೂ ಆಸ್ತಿಯ ಮಾರುಕಟ್ಟೆ ಮೌಲ್ಯದ ಶೇ.10ರಷ್ಟು ದಂಡವನ್ನು ವಿಧಿಸಲಾಗುತ್ತದೆ. ಇವೆಲ್ಲದರ ಹೊರತಾಗಿ, ಬೇನಾಮಿ ಆಸ್ತಿಯನ್ನು ಸ್ವಾಧೀನಪಡಿಸಿಕೊಳ್ಳುವ ಅಧಿಕಾರವೂ ಸರ್ಕಾರಕ್ಕಿರುತ್ತದೆ ಎಂದು ಇಲಾಖೆ ಮಾಹಿತಿ ನೀಡಿದೆ.

ಕಳೆದ ವರ್ಷ ಕಾಯ್ದೆ ಅನುಷ್ಠಾನಗೊಂಡ ಬಳಿಕ ಈವರೆಗೆ ಐಟಿ ಇಲಾಖೆಯು 230 ಪ್ರಕರಣಗಳನ್ನು ದಾಖಲಿಸಿಕೊಂಡಿದ್ದು, ದೇಶಾದ್ಯಂತ 55 ಕೋಟಿ ರೂ. ಮೌಲ್ಯದ ಆಸ್ತಿಪಾಸ್ತಿಗಳನ್ನು ಮುಟ್ಟುಗೋಲು ಹಾಕಿಕೊಂಡಿದೆ. 200 ಕೋಟಿ ರೂ.ಗಳ ಬೇನಾಮಿ ಆಸ್ತಿಗೆ ಸಂಬಂಧಿಸಿ 140 ಮಂದಿಗೆ ಷೋಕಾಸ್‌ ನೋಟಿಸ್‌ ಜಾರಿ ಮಾಡಲಾಗಿದೆ.

ಕಳೆದ ನವೆಂಬರ್‌ನಲ್ಲಿ ನೋಟುಗಳ ಅಪನಗದೀಕರಣ ಘೋಷಣೆಯಾದ ಬಳಿಕ ಜಾಹೀರಾತು ನೀಡಿದ್ದ ಐಟಿ ಇಲಾಖೆ, ಯಾರೂ ಯಾವುದೇ ಕಾರಣಕ್ಕೂ ಇನ್ನೊಬ್ಬರ ಲೆಕ್ಕವಿಲ್ಲದ ಅಮಾನ್ಯಗೊಂಡ ನೋಟುಗಳನ್ನು ತಮ್ಮ ಖಾತೆಗಳಲ್ಲಿ ಠೇವಣಿಯಿಡಬೇಡಿ ಎಂದು ಸೂಚಿಸಿತ್ತು. ಪ್ರಧಾನಿ ನರೇಂದ್ರ ಮೋದಿ ಅವರೂ, ಕಪ್ಪುಹಣದ ಬಳಿಕ ನನ್ನ ಮುಂದಿನ ಟಾರ್ಗೆಟ್‌ ಬೇನಾಮಿ ಆಸ್ತಿ ಎಂದು ಘೋಷಿಸಿದ್ದರು.

70 ಸಾವಿರ ಕೋಟಿ ರೂ. ಕಪ್ಪುಹಣ ಪತ್ತೆ
ಕೇಂದ್ರ ಸರ್ಕಾರ ಜಾರಿಗೆ ತಂದ ವಿವಿಧ ಯೋಜನೆಗಳಲ್ಲಿ ಒಟ್ಟಾರೆಯಾಗಿ 70 ಸಾವಿರ ಕೋಟಿ ರೂ. ಮೌಲ್ಯದ ಕಪ್ಪುಹಣ ಪತ್ತೆಯಾಗಿದೆ. ಹೀಗೆಂದು, ಕಪ್ಪುಹಣಕ್ಕೆ ಸಂಬಂಧಿಸಿ ತನಿಖೆ ನಡೆಸಲು ಸುಪ್ರೀಂ ಕೋರ್ಟ್‌ ನೇಮಕ ಮಾಡಿದ್ದ ವಿಶೇಷ ತನಿಖಾ ತಂಡ(ಎಸ್‌ಐಟಿ)ದ ಉಪಾಧ್ಯಕ್ಷ ನ್ಯಾ.ಅರಿಜಿತ್‌ ಪಸಾಯತ್‌ ಸ್ಪಷ್ಟಪಡಿಸಿದ್ದಾರೆ. ಏಪ್ರಿಲ್‌ನಲ್ಲಿ ಈ ಕುರಿತ 6ನೇ ಮಧ್ಯಂತರ ವರದಿಯನ್ನು ಸುಪ್ರೀಂ ಕೋರ್ಟ್‌ಗೆ ತಂಡವು ಸಲ್ಲಿಸಲಿದೆ. ವಿದೇಶಗಳಲ್ಲಿ ಭಾರತೀಯರು ಇಟ್ಟಿರುವ ಮೊತ್ತದ ಕುರಿತು ಜಾಗತಿಕ ಮಟ್ಟದಲ್ಲಿ ಆದ ಮಾಹಿತಿ ಸೋರಿಕೆಗೆ ಸಂಬಂಧಿಸಿ ನಡೆದ ತನಿಖೆಯಲ್ಲಿ 16 ಸಾವಿರ ಕೋಟಿ ರೂ. ಪತ್ತೆಯಾಗಿದೆ. ಕಠಕ್‌ನಲ್ಲಿ ಶುಕ್ರವಾರ ಹಣಕಾಸಿಗೆ ಸಂಬಂಧಿಸಿದ ವಿಚಾರಗಳನ್ನು ನೋಡಿಕೊಳ್ಳುತ್ತಿರುವ ವಿವಿಧ ಸರ್ಕಾರಿ ಸಂಸ್ಥೆಗಳ ಅಧಿಕಾರಿಗಳ ಜತೆ ನಡೆಸಿದ ಸಭೆಯಲ್ಲಿ ನ್ಯಾ.ಪಸಾಯತ್‌ ಈ ವಿಷಯ ತಿಳಿಸಿದ್ದಾರೆ.

“ಕಪ್ಪುಹಣದ ಸೃಷ್ಟಿಯನ್ನು ತಡೆಯಲು ಕ್ರಮ ಕೈಗೊಳ್ಳುವಂತೆ ನಾವು ಕಳೆದ 2 ವರ್ಷಗಳಲ್ಲಿ ಸರ್ಕಾರಕ್ಕೆ ಹಲವು ಬಾರಿ ಶಿಫಾರಸು ಮಾಡಿದ್ದೇವೆ. ಬಹುತೇಕ ಶಿಫಾರಸುಗಳನ್ನು ಸರ್ಕಾರ ಒಪ್ಪಿಕೊಂಡಿದೆ. ಇನ್ನೂ ಕೆಲವು ಪರಿಗಣನೆಯ ಹಂತದಲ್ಲಿವೆ. 15 ಲಕ್ಷ ರೂ.ಗಿಂತ ಹೆಚ್ಚಿನ ನಗದನ್ನು ಅಕ್ರಮ ಆಸ್ತಿ ಎಂದು ಪರಿಗಣಿಸುವಂತೆ ಕೇಳಿಕೊಂಡಿದ್ದೇವೆ. ಅದರ ಬಗ್ಗೆ ಗಂಭೀರವಾಗಿ ಚಿಂತನೆ ನಡೆಸಲಾಗುತ್ತಿದೆ,’ ಎಂದೂ ನ್ಯಾ.ಪಸಾಯತ್‌ ಹೇಳಿದ್ದಾರೆ.

ಟಾಪ್ ನ್ಯೂಸ್

police crime

Chitradurga: ಅನ್ಯಕೋಮಿನ ಯುವತಿಗೆ ಡ್ರಾಪ್ ನೀಡಿದ್ದಕ್ಕೆ ಹಲ್ಲೆ

1-wewq-eqwe

IPL; ರೋಚಕ ಪಂದ್ಯದಲ್ಲಿ ಪಂಜಾಬ್‌ ಎದುರು 9 ರನ್ ಜಯ ಸಾಧಿಸಿದ ಮುಂಬೈ

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

1-qwwqeqw

Thirthahalli;ಮಳೆಯ ಅಬ್ಬರಕ್ಕೆ ಮೊದಲ ಬಲಿ: ಆಗುಂಬೆ ಘಾಟಿಯಲ್ಲಿ ಟ್ರಾಫಿಕ್ ಜಾಮ್

Politics: ಡಿ.ಕೆ.ಶಿವಕುಮಾರ್‌ ಸಿಎಂ ಆಗುತ್ತಾರೆ: ಎಚ್‌.ವಿಶ್ವನಾಥ್‌

Politics: ಡಿ.ಕೆ.ಶಿವಕುಮಾರ್‌ ಸಿಎಂ ಆಗುತ್ತಾರೆ: ಎಚ್‌.ವಿಶ್ವನಾಥ್‌

13

Politics: ಸಿದ್ದರಾಮಯ್ಯ ಸರಕಾರ ಬಂದ ಬಳಿಕ ಮುಸ್ಲಿಂ ಮೂಲಭೂತವಾದಿಗಳು ಹೆಚ್ಚಳ; ಅಶೋಕ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Chattisgarh: ಕಳೆದ 4 ತಿಂಗಳಲ್ಲಿ 80 ನಕ್ಸಲೀಯರ ಸಾವು, 125 ಮಂದಿ ಬಂಧನ; 150 ಶರಣಾಗತಿ!

Chattisgarh: ಕಳೆದ 4 ತಿಂಗಳಲ್ಲಿ 80 ನಕ್ಸಲೀಯರ ಸಾವು, 125 ಮಂದಿ ಬಂಧನ; 150 ಶರಣಾಗತಿ!

ದ. ಭಾರತದಲ್ಲಿ ಬಿಜೆಪಿ ಎಷ್ಟು ಸ್ಥಾನಗಳಲ್ಲಿ ಜಯಗಳಿಸಬಹುದು? ರೇವಂತ್‌ ರೆಡ್ಡಿ ಲೆಕ್ಕಚಾರವೇನು!

ದ. ಭಾರತದಲ್ಲಿ ಬಿಜೆಪಿ ಎಷ್ಟು ಸ್ಥಾನಗಳಲ್ಲಿ ಜಯಗಳಿಸಬಹುದು? ರೇವಂತ್‌ ರೆಡ್ಡಿ ಲೆಕ್ಕಚಾರವೇನು!

1-asasa

Delhi ; ಬಿಕಿನಿಯಲ್ಲೇ ಬಸ್ ಹತ್ತಿದ ಮಹಿಳೆ; ವಿಡಿಯೋ ವೈರಲ್

EVM VVPAT case:  ಚುನಾವಣಾ ಪ್ರಕ್ರಿಯೆಯಲ್ಲಿ ಪಾವಿತ್ರ್ಯತೆ ಇರಬೇಕು: ಆಯೋಗಕ್ಕೆ ಸುಪ್ರೀಂ

EVM VVPAT case:  ಚುನಾವಣಾ ಪ್ರಕ್ರಿಯೆಯಲ್ಲಿ ಪಾವಿತ್ರ್ಯತೆ ಇರಬೇಕು: ಆಯೋಗಕ್ಕೆ ಸುಪ್ರೀಂ

kejriwal 2

Diabetes ಇದ್ದರೂ ಕೇಜ್ರಿವಾಲ್ ಸಿಹಿ ಹೆಚ್ಚೆಚ್ಚು ತಿನ್ನುತ್ತಿದ್ದಾರೆ!: ಕೋರ್ಟ್ ಗೆ ಇಡಿ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-weqwewq

Belur: ದೈತ್ಯ ‘ಕರಡಿ’ ಆನೆ ಕೊನೆಗೂ ಸೆರೆ

police crime

Chitradurga: ಅನ್ಯಕೋಮಿನ ಯುವತಿಗೆ ಡ್ರಾಪ್ ನೀಡಿದ್ದಕ್ಕೆ ಹಲ್ಲೆ

1-wewq-eqwe

IPL; ರೋಚಕ ಪಂದ್ಯದಲ್ಲಿ ಪಂಜಾಬ್‌ ಎದುರು 9 ರನ್ ಜಯ ಸಾಧಿಸಿದ ಮುಂಬೈ

1aaa

Austria Marathon: ಭಾರತವನ್ನು ಪ್ರತಿನಿಧಿಸಲಿರುವ ಕೊಡಗಿನ ಅಪ್ಪಚಂಗಡ ಬೆಳ್ಯಪ್ಪ

ಮೊಣಕಾಲಿನ ಗಾಯಕ್ಕೆ ಶಸ್ತ್ರಚಿಕಿತ್ಸೆ ಅಗತ್ಯ ಒಲಿಂಪಿಕ್ಸ್‌ನಿಂದ ಹೊರಬಿದ್ದ ಶ್ರೀಶಂಕರ್‌

ಮೊಣಕಾಲಿನ ಗಾಯಕ್ಕೆ ಶಸ್ತ್ರಚಿಕಿತ್ಸೆ ಅಗತ್ಯ ಒಲಿಂಪಿಕ್ಸ್‌ನಿಂದ ಹೊರಬಿದ್ದ ಶ್ರೀಶಂಕರ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.