ಪ್ರವಾದಿ ಮೊಹಮ್ಮದ್ ಮಾಂಸ ಸೇವಿಸುತ್ತಿರಲಿಲ್ಲ, ಇಂದ್ರೇಶ್ ಸಲಹೆ ಏನು?
Team Udayavani, Jun 6, 2017, 3:16 PM IST
ನವದೆಹಲಿ:ಭಾರತದಲ್ಲಿರುವ ಮುಸ್ಲಿಮರು ಮಾಂಸ ತಿನ್ನುವುದನ್ನು ಬಿಟ್ಟುಬಿಡಬೇಕು. ಯಾಕೆಂದರೆ ಇಸ್ಲಾಂ ಧರ್ಮಗುರು ಪ್ರವಾದಿ ಮೊಹಮ್ಮದ್ ಪೈಗಂಬರ್ ಅವರಾಗಲಿ, ಅವರ ಅನುಯಾಯಿಗಳು ಯಾವತ್ತೂ ಮಾಂಸ ಸೇವನೆ ಮಾಡಿಲ್ಲ. ಮಾಂಸ ಸೇವನೆಯಿಂದ ಖಾಯಿಲೆ ಬರುತ್ತದೆ ಎಂದು ಅವರು ನಂಬಿರುವುದಾಗಿ ಆರ್ಎಸ್ಎಸ್ ಮುಖಂಡ ಇಂದ್ರೇಶ್ ಕುಮಾರ್ ಹೇಳಿದ್ದಾರೆ!
ಆರ್ ಎಸ್ ಎಸ್ ನ ಮುಸ್ಲಿಂ ಘಟಕದ ಮುಸ್ಲಿಂ ರಾಷ್ಟ್ರೀಯ ಮಂಚ್ (ಎಂಆರ್ಎಂ) ಆಯೋಜಿಸಿದ್ದ ಇಫ್ತಾರ್ ಕೂಟದಲ್ಲಿ ಇಂದ್ರೇಶ್ ಕುಮಾರ್ ಈ ಹೇಳಿಕೆ ನೀಡಿದ್ದಾರೆ ಎಂದು ಇಂಡಿಯನ್ ಎಕ್ಸ್ ಪ್ರೆಸ್ ವರದಿ ಮಾಡಿದೆ.
ಈ ಸಂದರ್ಭದಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಅವರು, ಮುಸ್ಲಿಂ ರಾಷ್ಟ್ರೀಯ ಮಂಚ್ ಭಾರತೀಯ ಮುಸ್ಲಿಮರಲ್ಲಿ ಮೂರು ಪ್ರಾಥಮಿಕ ಮನವಿಯನ್ನು ಮಾಡಿಕೊಂಡಿದೆ ಎಂದು ತಿಳಿಸಿದರು.
ಮೊದಲನೆಯದಾಗಿ ಮಸೀದಿ, ದರ್ಗಾ ಹಾಗೂ ತಮ್ಮ ಪ್ರದೇಶದ ಸುತ್ತಮುತ್ತ ಗಿಡ, ಮರಗಳನ್ನು ಬೆಳೆಸಬೇಕು.
ಇದರಿಂದ ಮಾಲಿನ್ಯ ತಡೆಗಟ್ಟಲು ಸಾಧ್ಯ. ಅಷ್ಟೇ ಅಲ್ಲ ಪರಿಸರವನ್ನು ರಕ್ಷಿಸಿದಂತಾಗುತ್ತದೆ. ಎರಡನೇಯದು ಮುಸ್ಲಿಮರು ತಮ್ಮ ಮನೆಯ ಮುಂಭಾಗದಲ್ಲಿ ತುಳಸಿ ಗಿಡವನ್ನು ಬೆಳೆಸಬೇಕು. ಮೂರನೇಯದಾಗಿ ಪ್ರವಾದಿ ಮೊಹಮ್ಮದ್ ಹಾಗೂ ಅವರ ಅನುಯಾಯಿಗಳು ಮಾಂಸಹಾರ ಸೇವಿಸುತ್ತಿರಲಿಲ್ಲ. ಮಾಂಸ ಸೇವನೆ ರೋಗಕಾರಕ, ಹಾಲು ಸೇವನೆ ಆರೋಗ್ಯಕರ ಎಂದು ಹೇಳಿದರು.
ಇಸ್ಲಾಂ ಅನ್ನು ಸುಂದರ ಧರ್ಮವನ್ನಾಗಿಸಲು ಭಾರತೀಯ ಮುಸ್ಲಿಮರು ಶ್ರಮ ಪಡಬೇಕಾಗಿದೆ ವಿನಃ ಅದರಿಂದ ವಿಮುಖರನ್ನಾಗಿಸಬಾರದು ಎಂದು ಇಂದ್ರೇಶ್ ಸಲಹೆ ನೀಡಿದ್ದಾರೆ. ಏತನ್ಮಧ್ಯೆ ಆರ್ಎಸ್ಎಸ್ ನ ಇಂದ್ರೇಶ್ ಕುಮಾರ್ ಅವರನ್ನು ಆಹ್ವಾನಿಸಿದ್ದಕ್ಕೆ ಯೂನಿರ್ವಸಿಟಿ ಕ್ಯಾಂಪಸ್ ನಲ್ಲಿ ವಿದ್ಯಾರ್ಥಿಗಳು ಮತ್ತು ಪೊಲೀಸರ ನಡುವೆ ಘರ್ಷಣೆಗೆ ಎಡೆಮಾಡಿಕೊಟ್ಟಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Gujarat ಕರಾವಳಿಯಲ್ಲಿ ಪಾಕ್ ಬೋಟ್ ನಿಂದ 600 ಕೋಟಿ ಮೌಲ್ಯದ ಹೆರಾಯಿನ್ ವಶ
ಕಾಂಗ್ರೆಸ್ ಗೆ ಆಘಾತ; ರಾಜೀನಾಮೆ ನೀಡಿದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ
Mahadev Betting App Case; ಮುಂಬೈ ಪೊಲೀಸರಿಂದ ನಟ ಸಾಹಿಲ್ ಖಾನ್ ಬಂಧನ
Gyani Uncle; ಪ್ರಧಾನಿ ಮೋದಿಯನ್ನು ಉಪದೇಶ ನೀಡುವ ಅಂಕಲ್ ಎಂದ ಪ್ರಿಯಾಂಕಾ ಗಾಂಧಿ
Congress ಗೆದ್ದರೆ ದೇಶದಲ್ಲಿ ಗೋ ಹತ್ಯೆ ಖಚಿತ: ಯೋಗಿ ಆದಿತ್ಯನಾಥ್
MUST WATCH
ಹೊಸ ಸೇರ್ಪಡೆ
Hosapete; ಕೆಲವು ದೇಶಗಳು ಭಾರತ ಸರ್ಕಾರ ದುರ್ಬಲವಾಗಿರಲು ಬಯಸುತ್ತಿವೆ: ಮೋದಿ
Sirsi ; ಪ್ರಧಾನಿ ಮುಡಿಗೇರಿದ ಬೇಡರ ವೇಷದ ಕಿರೀಟ!
Strike rate; ಜನರು ಏನು ಬೇಕಾದರೂ ಮಾತನಾಡಬಹುದು.. : ವಿರಾಟ್ ಕೊಹ್ಲಿ
Gujarat ಕರಾವಳಿಯಲ್ಲಿ ಪಾಕ್ ಬೋಟ್ ನಿಂದ 600 ಕೋಟಿ ಮೌಲ್ಯದ ಹೆರಾಯಿನ್ ವಶ
Mangaluru Airport; ಗುದನಾಳದಲ್ಲಿ ಬಚ್ಚಿಟ್ಟ 54 ಲಕ್ಷ ರೂ. ಮೌಲ್ಯದ ಅಕ್ರಮ ಚಿನ್ನ ಪತ್ತೆ !