ಕಾಶ್ಮೀರದಾದ್ಯಂತ ಪ್ರತಿಭಟನೆ
Team Udayavani, Aug 6, 2018, 9:34 AM IST
ಶ್ರೀನಗರ: ಸಂವಿಧಾನದ 35-ಎ ವಿಧಿಯ ಮಾನ್ಯತೆಯನ್ನು ಸುಪ್ರೀಂ ಕೋರ್ಟ್ನಲ್ಲಿ ಪ್ರಶ್ನಿಸಿದ್ದನ್ನು ಖಂಡಿಸಿ ಪ್ರತ್ಯೇಕತಾವಾದಿಗಳು ಕರೆ ನೀಡಿದ್ದ ಬಂದ್ನಿಂದಾಗಿ ರವಿವಾರ ಜಮ್ಮು-ಕಾಶ್ಮೀರದಲ್ಲಿ ಜನಜೀವನ ಸಂಪೂರ್ಣ ಅಸ್ತವ್ಯಸ್ತ ಗೊಂಡಿತು. ಬಂದ್ನಿಂದಾಗಿ ಕಣಿವೆ ರಾಜ್ಯ ಸಂಪೂರ್ಣ ಸ್ತಬ್ಧಗೊಂಡಿದ್ದು, ಹಲವೆಡೆ ಪ್ರತಿಭಟನೆಗಳು, ರ್ಯಾಲಿಗಳು ನಡೆದವು. ವ್ಯಾಪಾರಿಗಳೂ ಅಂಗಡಿ ಗಳನ್ನು ಮುಚ್ಚಿ ಬಂದ್ಗೆ ಬೆಂಬಲ ನೀಡಿದರು. ಕೆಲವೆಡೆ ಸಣ್ಣಪುಟ್ಟ ಕಲ್ಲು ತೂರಾ ಟದಂಥ ಘಟನೆಗಳೂ ವರದಿಯಾದವು.
ಜಮ್ಮು-ಕಾಶ್ಮೀರದಲ್ಲಿ ಹೊರಗಿನವರು ಸ್ಥಿರ ಆಸ್ತಿ ಖರೀದಿಸುವುದಕ್ಕೆ ನಿರ್ಬಂಧ ಹೇರುವಂಥ 35-ಎ ವಿಧಿಯ ಮಾನ್ಯತೆ ಪ್ರಶ್ನಿಸಿ ಸಲ್ಲಿಸಲಾಗಿರುವ ಅರ್ಜಿಯ ವಿಚಾರಣೆ ಸೋಮವಾರ ಸುಪ್ರೀಂನಲ್ಲಿ ನಡೆಯ ಲಿದೆ. ಈ ವಿಧಿಯು ಭಾರತದ ನಾಗರಿಕರ ಮೂಲಭೂತ ಹಕ್ಕುಗಳನ್ನು ಉಲ್ಲಂಸುತ್ತದೆ, ದೇಶದ ಯಾವುದೇ ಭಾಗದಲ್ಲಾದರೂ ವಾಸಿಸುವ ಮತ್ತು ಆಸ್ತಿ ಖರೀದಿಸುವ ಹಕ್ಕನ್ನು ಕಿತ್ತುಕೊಂಡಂತಾಗು ತ್ತದೆ ಎಂದು ಎನ್ಜಿಒವೊಂದು ಅರ್ಜಿಯಲ್ಲಿ ಉಲ್ಲೇಖೀಸಿತ್ತು.
ಏತನ್ಮಧ್ಯೆ, ಈ ವಿಧಿಗೆ ಸಂಬಂಧಿಸಿ ಸುಪ್ರೀಂ ಕೋರ್ಟ್ನಲ್ಲೇನಾದರೂ ವ್ಯತಿರಿಕ್ತ ತೀರ್ಪು ಬಂದರೆ, ಕಣಿವೆ ರಾಜ್ಯದ ಪೊಲೀಸರೇ ಬಂಡೇಳುವ ಹಾಗೂ ಭಾರೀ ಹಿಂಸಾಚಾರ ಸಂಭವಿಸುವ ಸಾಧ್ಯತೆಗಳಿವೆ ಎಂದು ಗುಪ್ತಚರ ಸಂಸ್ಥೆಗಳು ಮಾಹಿತಿ ನೀಡಿವೆ.
ಯಾತ್ರೆ ಸ್ಥಗಿತ
ರವಿವಾರ, ಸೋಮವಾರ ಬಂದ್ ಹಿನ್ನೆಲೆಯಲ್ಲಿ ಅಮರನಾಥ ಯಾತ್ರೆ ಯೂ ಸ್ಥಗಿತಗೊಂಡಿದೆ. ರವಿವಾರ ಜಮ್ಮುವಿನಿಂದ ಯಾತ್ರಿಗಳ ತಂಡ ಹೊರ ಡಬೇಕಿತ್ತು. ಆದರೆ, ಮಂಗಳ ವಾರದ ನಂತರ ತೆರಳುವಂತೆ ಸೂಚನೆ ನೀಡಲಾ ಗಿದೆ. ಇದೇ ವೇಳೆ, ರಾಜ್ಯಾ ದ್ಯಂತ ರೈಲು ಸಂಚಾರವನ್ನೂ ರದ್ದು ಮಾಡಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಕೈಗೆ ಪಿತ್ರೋಡಾರ್ಜಿತ ಸಂಕಟ! ಬಿಜೆಪಿಗೆ ಸಿಕ್ಕಿದ ಹೊಸ ಅಸ್ತ್ರ ; ಕಂಗೆಟ್ಟ ಕಾಂಗ್ರೆಸ್
Madhya Pradesh Rally; ಕೈಯಿಂದ ಮೀಸಲಾತಿ ಕಸಿಯುವ ಯತ್ನ: ಪ್ರಧಾನಿ ಮೋದಿ
Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್ ಗಾಂಧಿ
Rajveer Diler: ಹೃದಯಾಘಾತದಿಂದ ಬಿಜೆಪಿ ಸಂಸದ ರಾಜ್ವೀರ್ ದಿಲೇರ್ ನಿಧನ
Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್
MUST WATCH
ಹೊಸ ಸೇರ್ಪಡೆ
ಅನಂತಸ್ವಾಮಿ ಧಾಟಿಯಲ್ಲೇ ನಾಡಗೀತೆ; ರಾಜ್ಯ ಸರಕಾರದ ಆದೇಶ ಎತ್ತಿಹಿಡಿದ ಹೈಕೋರ್ಟ್
ಕೈಗೆ ಪಿತ್ರೋಡಾರ್ಜಿತ ಸಂಕಟ! ಬಿಜೆಪಿಗೆ ಸಿಕ್ಕಿದ ಹೊಸ ಅಸ್ತ್ರ ; ಕಂಗೆಟ್ಟ ಕಾಂಗ್ರೆಸ್
Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ
Exam; ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆ-2ಕ್ಕೆ 1.49 ಲಕ್ಷ ವಿದ್ಯಾರ್ಥಿಗಳ ನೋಂದಣಿ
ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್ ಬ್ರಿಜೇಶ್ ಚೌಟ