ಶಬರಿಮಲೆ; ನ್ಯೂಯಾರ್ಕ್ ಟೈಮ್ಸ್ ಪತ್ರಕರ್ತೆಯನ್ನು ಕೆಳಗಟ್ಟಿದ ಭಕ್ತರು
Team Udayavani, Oct 18, 2018, 11:52 AM IST
ತಿರುವನಂತಪುರಂ:ಶಬರಿಮಲೆ ದೇವಾಲಯಕ್ಕೆ ಮಹಿಳೆಯರ ಪ್ರವೇಶ ವಿಚಾರ ತೀವ್ರ ಸ್ವರೂಪ ಪಡೆದುಕೊಳ್ಳುತ್ತಿರುವ ನಡುವೆಯೇ ಗುರುವಾರ ಬೆಳಗ್ಗೆ ನ್ಯೂಯಾರ್ಕ್ ಟೈಮ್ಸ್ ನ ಮಹಿಳಾ ಪತ್ರಕರ್ತೆ ಶಬರಿಮಲೆ ಪ್ರವೇಶಿಸಲು ಬೆಟ್ಟ ಹತ್ತಲು ಶುರು ಮಾಡಿದ್ದು, ಈ ಸಂದರ್ಭದಲ್ಲಿ ಭಾರೀ ವಿರೋಧ, ಪ್ರತಿಭಟನೆ ವ್ಯಕ್ತವಾಗಿದ್ದು, ಇಬ್ಬರನ್ನೂ ಬಲವಂತವಾಗಿ ವಾಪಸ್ ಕಳುಹಿಸಿರುವ ಘಟನೆ ನಡೆದಿದೆ.
ನ್ಯೂಯಾರ್ಕ್ ಟೈಮ್ಸ್ ನ ಭಾರತದ ಪ್ರತಿನಿಧಿ ದೆಹಲಿ ಮೂಲದ ಸುಹಾಸಿನಿ ರಾಜ್ ಮತ್ತು ಆಕೆಯ ಸಹೋದ್ಯೋಗಿ(ವಿದೇಶಿ ಪತ್ರಕರ್ತ) ಪಂಪಾ ದಾರಿಯನ್ನು ದಾಟುವಲ್ಲಿ ಯಶಸ್ವಿಯಾಗಿದ್ದರು. ಏತನ್ಮಧ್ಯೆ ಶಬರಿಮಲೆ ದೇಗುಲ ಸೇರುವ ಮುನ್ನ ಸಿಗುವ ಬೆಟ್ಟ ಹತ್ತಲು ಆರಂಭಿಸಿದ ವೇಳೆ ಆಕ್ರೋಶಿತಗೊಂಡ ಪ್ರತಿಭಟನಾಕಾರರು ಅಡ್ಡಿಪಡಿಸಿದ್ದರು. ಅಲ್ಲದೇ ಬಲವಂತವಾಗಿ ಇಬ್ಬರು ಮಹಿಳಾ ಪತ್ರಕರ್ತರನ್ನು ವಾಪಸ್ ಕಳುಹಿಸಿರುವುದಾಗಿ ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ.
ನಾನು ಶಬರಿಮಲೆ ದೇಗುಲ ಪ್ರವೇಶಿಸಿ ಪ್ರಾರ್ಥನೆ ಸಲ್ಲಿಸಲು ಬಂದಿಲ್ಲ, ನನ್ನ ಕೆಲಸ ಮಾಡಲು ಬಂದಿದ್ದೇನೆ ಎಂದು ಸುಹಾಸಿನಿ ರಾಜ್ ವಿನಂತಿಸಿಕೊಂಡಿದ್ದರು. ಆದರೆ ಅಯ್ಯಪ್ಪ ಸ್ವಾಮಿ ಭಕ್ತರು ಭಾರೀ ಪ್ರತಿಭಟನೆ ನಡೆಸಿ ದಾರಿ ಮಧ್ಯೆ ಕುಳಿತು ಪತ್ರಕರ್ತೆಯರ ವಿರುದ್ಧ ಘೋಷಣೆ ಕೂಗಿದ್ದರು. ಬೇರೆ ದಾರಿ ಕಾಣದೇ ಇಬ್ಬರು ವಾಪಸ್ ಹೋಗಿರುವುದಾಗಿ ವರದಿ ವಿವರಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kidnapped: ಹಾಡ ಹಗಲೇ ಮಹಿಳೆಯಿಂದ ಹೋಟೆಲ್ ಮಾಲೀಕನ ಮಗನ ಅಪಹರಣ: CCTVಯಲ್ಲಿ ದೃಶ್ಯ ಸೆರೆ
Rahul Gandhiಯನ್ನು ಭಾರತದ ಪ್ರಧಾನಿ ಮಾಡಲು ಪಾಕ್ ಉತ್ಸುಕವಾಗಿದೆ: ಪ್ರಧಾನಿ ಮೋದಿ
Delhi ಮಹಿಳಾ ಆಯೋಗದ 223 ಉದ್ಯೋಗಿಗಳ ವಜಾ: ಲೆ.ಗವರ್ನರ್ ಆದೇಶದಲ್ಲೇನಿದೆ?
Video: Gymನಲ್ಲಿ ವರ್ಕ್ ಔಟ್ ಮಾಡುತ್ತಿದ್ದ ವ್ಯಕ್ತಿ ಇದ್ದಕಿದ್ದಂತೆ ಕುಸಿದು ಬಿದ್ದು ಮೃತ್ಯು
LS Polls: ಇನ್ನು 24 ಗಂಟೆಯಲ್ಲಿ ಅಮೇಥಿ, ರಾಯ್ಬರೇಲಿ ಕಾಂಗ್ರೆಸ್ ಅಭ್ಯರ್ಥಿಗಳ ಹೆಸರು ಫೈನಲ್
MUST WATCH
ಹೊಸ ಸೇರ್ಪಡೆ
Dharwad; ಗುಜರಾತ್ ನಿಂದ ಓಡಿ ಹೋದ 12 ಉದ್ಯಮಿಗಳ ಬಗ್ಗೆ ಮಾತನಾಡಿ: ಮೋದಿಗೆ ಲಾಡ್ ಸವಾಲು
Kidnapped: ಹಾಡ ಹಗಲೇ ಮಹಿಳೆಯಿಂದ ಹೋಟೆಲ್ ಮಾಲೀಕನ ಮಗನ ಅಪಹರಣ: CCTVಯಲ್ಲಿ ದೃಶ್ಯ ಸೆರೆ
Jasti Preethi; ಫೇಸ್ ಬುಕ್ ಪೋಸ್ಟ್ ಸಿನಿಮಾವಾಯಿತು..
Eco-friendly Bio Plastic: ಪರಿಸರ ಸ್ನೇಹಿ ಮೆಕ್ಕೆಜೋಳದ ಬಯೋ ಪ್ಲಾಸ್ಟಿಕ್
Aranthodu: ವಾಹನಗಳ ಮಧ್ಯೆ ಸರಣಿ ಅಪಘಾತ; ಬೈಕ್ ಸವಾರ ಗಂಭೀರ ಗಾಯ