ಪೊಲೀಸರೆದುರೇ ಬಿಜೆಪಿ ಶಾಸಕನ ಮೇಲೆ ಹಲ್ಲೆ ನಡೆಸಿ ಬಟ್ಟೆ ಹರಿದು ಹಾಕಿದ ರೈತರ ಗುಂಪು!
Team Udayavani, Mar 28, 2021, 8:22 AM IST
ಮುಕ್ತ್ಸಾರ್: ಉದ್ರಿಕ್ತ ರೈತರ ಗುಂಪೊಂದು ಬಿಜೆಪಿ ಶಾಸಕನ ಮೇಲೆ ಮುತ್ತಿಗೆ ಹಾಕಿ ಬಟ್ಟೆ ಹಾರಿದು ಹಾಕಿದ ಘಟನೆ ಪಂಜಾಬ್ ರಾಜ್ಯದ ಮುಕ್ತ್ಸಾರ್ ಜಿಲ್ಲೆಯ ಮಾಲೌಟ್ ನಲ್ಲಿ ಶನಿವಾರ ನಡೆದಿದೆ.
ಅಬೋಹರ್ ಬಿಜೆಪಿ ಶಾಸಕ ಅರುಣ್ ನಾರಂಗ್ ಹಲ್ಲೆಗೊಳಗಾದವರು. ಮಲೌಟ್ ನಲ್ಲಿ ಪತ್ರಿಕಾಗೋಷ್ಠಿ ನಡೆಸಲು ಶಾಸಕ ಹೋದಾಗ ರೈತರ ಗುಂಪು ಹಲ್ಲೆ ನಡೆಸಿದೆ.
ಪ್ರತಿಭಟನಾ ನಿರತ ರೈತರು, ಶಾಸಕ ಅರುಣ್ ನಾರಂಗ್ ಗಾಗಿ ಬಿಜೆಪಿ ಕಚೇರಿಯ ಮುಂದೆ ಕಾದು ಕುಳಿತಿದ್ದರು. ಅರುಣ್ ನಾರಂಗ್ ಬರುತ್ತಿದ್ದಂತೆ ರೈತರ ಗುಂಪು ಅವರತ್ತ ಕಪ್ಪು ಶಾಯಿ ಎರಚಿತು. ಕೂಡಲೇ ಸ್ಥಳದಲ್ಲಿದ್ದ ಪೊಲೀಸರು ಮತ್ತು ಸ್ಥಳೀಯ ನಾಯಕರು ಶಾಸಕರನ್ನು ಹತ್ತಿರದ ಅಂಗಡಿಯೊಂದರ ಒಳಗೆ ಕರೆದೊಯ್ದರು.
ಇದನ್ನೂ ಓದಿ:ಕೇರಳದಲ್ಲಿ ಎಡಪಕ್ಷಗಳು, ಕಾಂಗ್ರೆಸ್ ವಿರುದ್ಧ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರ ಟೀಕೆ
ಆದರೆ ಸ್ವಲ್ಪ ಸಮಯದ ಬಳಿಕ ಶಾಸಕರು ಅಂಗಡಿಯಿಂದ ಹೊರಬರುತ್ತಿದ್ದಂತೆ ಮತ್ತೆ ಮುಗಿಬಿದ್ದ ಗುಂಪು ಹಲ್ಲೆ ನಡೆಸಿ ಶಾಸಕರ ಬಟ್ಟೆಯನ್ನು ಹರಿದು ಹಾಕಿದೆ. ಪೊಲೀಸರು ಕೂಡಲೇ ಮಧ್ಯ ಪ್ರವೇಶಿಸಿ ಶಾಸಕರನ್ನು ಸುರಕ್ಷಿತ ಸ್ಥಳಕ್ಕೆ ಕರೆದೊಯ್ದರು ಎಂದು ವರದಿಯಾಗಿದೆ.
250-300 ಅಪರಿಚಿತ ಪ್ರತಿಭಟನಾಕಾರರ ವಿರುದ್ಧ ಸೆಕ್ಷನ್ 307ರ ಅಡಿಯಲ್ಲಿ ( ಕೊಲೆ ಯತ್ನ) ಪ್ರಕರಣ ದಾಖಲಿಸಲಾಗಿದೆ.
ಇದನ್ನೂ ಓದಿ: ಅಚ್ಛೇ ದಿನ್ ಬರುತ್ತದೆ ಎಂದು ಕಾಯುತ್ತಾ ಕೂರಬೇಡಿ, ಅಚ್ಛೇ ದಿನ್ ಬರುವುದಿಲ್ಲ: ಸಿದ್ದರಾಮಯ್ಯ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
India ಆರ್ಥಿಕ ಬೆಳವಣಿಗೆಗೆ ಅನವಶ್ಯಕ ಪ್ರಚಾರ: ರಾಜನ್ ಹೇಳಿಕೆಗೆ ಆಕ್ರೋಶ
Bullet train ಮೊದಲ ಬಾರಿಗೆ ಬ್ಯಾಲೆಸ್ಟ್ಲೆಸ್ ಟ್ರ್ಯಾಕ್: ರೈಲ್ವೇ ಸಚಿವ ವೈಷ್ಣವ್
Ex-IPS officer ಸಂಜೀವ್ ಭಟ್ಗೆ 1996 ರ ಡ್ರಗ್ಸ್ ಕೇಸ್ ನಲ್ಲಿ 20 ವರ್ಷ ಜೈಲು ಶಿಕ್ಷೆ
Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ
Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ
MUST WATCH
ಹೊಸ ಸೇರ್ಪಡೆ
Politics: ಟಿಕೆಟ್ ಹಂಚಿಕೆ ಮರುಪರಿಶೀಲಿಸಿ ಎಂದ ವೀಣಾ ಬೆಂಬಲಿಗರಿಗೆ ಸಿಎಂ ತಿರುಗೇಟು
Sullia;ಕೂಜಿಮಲೆ ಪ್ರದೇಶದಲ್ಲಿ ಕಾಣಿಸಿಕೊಂಡಾಕೆ ನಕ್ಸಲ್ ಅಲ್ಲ: ರಾಜಸ್ಥಾನಿ ಮಹಿಳೆ !
Kolkata Raiders ಕೋಚ್ ಬಗ್ಗೆ ಆಟಗಾರ ಡೇವಿಡ್ ವೀಸ್ ಆರೋಪ
India ಆರ್ಥಿಕ ಬೆಳವಣಿಗೆಗೆ ಅನವಶ್ಯಕ ಪ್ರಚಾರ: ರಾಜನ್ ಹೇಳಿಕೆಗೆ ಆಕ್ರೋಶ
North Karnataka; ಹಲವು ಜಿಲ್ಲೆಗಳಲ್ಲಿ ಎರಡು ದಿನ ಉಷ್ಣ ಅಲೆ ಸಾಧ್ಯತೆ