ತೂತುಕುಡಿ: ವೇದಾಂತ ಘಟಕಕ್ಕೆ ವಿರೋಧ; ಪೊಲೀಸ್ ಗೋಲಿಬಾರಿಗೆ 1 ಬಲಿ
Team Udayavani, May 22, 2018, 4:11 PM IST
ತೂತುಕುಡಿ/ಚೆನ್ನೈ : ಪರಿಸರ ಮಾಲಿನ್ಯದ ಕಾರಣಕ್ಕೆ ತೂತುಕುಡಿಯಲ್ಲಿನ ವೇದಾಂತ ಕಂಪೆನಿಯ ಸ್ಟೆರಲೈಟ್ ತಾಮ್ರದ ಘಟವನ್ನು ಮುಚ್ಚಬೇಕೆಂದು ಆಗ್ರಹಿಸಿ ಕಳೆದ ಒಂದು ತಿಂಗಳಿಂದ ನಡೆಯುತ್ತಿರುವ ಪ್ರತಿಭಟನೆಯು ಇಂದು ಹಿಂಸೆಗೆ ತಿರುಗಿದಾಗ ಅನಿವಾರ್ಯಗೊಂಡ ಪೊಲೀಸ್ ಫೈರಿಂಗ್ಗೆ ಒಬ್ಬ ವ್ಯಕ್ತಿ ಬಲಿಯಾದ ಘಟನೆ ನಡೆದಿದೆ.
ಪ್ರತಿಭಟನಕಾರರು ಇಂದು ಪೊಲೀಸರ ಮೇಲೆ ಕಲ್ಲೆಸೆದು ಸರಕಾರಿ ವಾಹನಗಳು ಮತ್ತು ಸಾರ್ವಜನಿಕ ಸೊತ್ತುಗಳಿಗೆ ಬೆಂಕಿ ಹಚ್ಚಿದಾಗ ಉದ್ರಿಕ್ತರನ್ನು ನಿಯಂತ್ರಿಸಲು ಪೊಲೀಸರು ಗೋಲಿಬಾರ್ ನಡೆಸಿದರು. ಈ ಗೋಲಿಬಾರಿಗೆ ಒಬ್ಬ ವ್ಯಕ್ತಿ ಬಲಿಯಾದ ಎಂದು ವರದಿಗಳು ತಿಳಿಸಿವೆ.
ಇಂದು ಸುಮಾರು 5,000 ಪ್ರತಿಭಟನಕಾರರು ಸ್ಥಳೀಯ ಚರ್ಚ್ ಮುಂದೆ ಜಮಾಯಿಸಿದ್ದರು. ಜಿಲ್ಲಾ ಕಲೆಕ್ಟೋರೇಟ್ಗೆ ಅವರು ಪ್ರತಿಭಟನ ಮೆರವಣಿಗೆ ನಡೆಸಲು ಉದ್ದೇಶಿಸಿದ್ದರು. ಆದರೆ ಅವರಿಗೆ ಅನುಮತಿ ನಿರಾಕರಿಸಲಾಯಿತು. ಇದರಿಂದ ಕೋಪೋದ್ರಿಕ್ತರಾದ ಪ್ರತಿಭಟನಕಾರರು ಪೊಲೀಸರ ಮೇಲೆ ಕಲ್ಲೆಸೆದು ಅವರ ವಾಹನಗಳು ಹಾಗೂ ಸಾರ್ವಜನಿಕ ಸೊತ್ತುಗಳಿಗೆ ಬೆಂಕಿ ಹಚ್ಚಲು ಮುಂದಾದರು. ಕಲ್ಲೆಸೆತದಿಂದಾಗಿ ಹಲವರು ಗಾಯಗೊಂಡರು. ಆಗ ಪೊಲೀಸರು ಅನಿವಾರ್ಯವಾಗಿ ಗೋಲಿಬಾರ್ ನಡೆಸಿದರು ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಡಿಎಂಕೆ ಕಾರ್ಯಾಧ್ಯಕ್ಷ ಎಂ ಕೆ ಸ್ಟಾಲಿನ್ ಅವರು ಪೊಲೀಸ್ ಗೋಲಿಬಾರನ್ನು ಖಂಡಿಸಿದರು. ರಾಜ್ಯ ಸರಕಾರ ಈ ವಿವಾದವನ್ನು ಸಾಕಷ್ಟು ಮೊದಲೇ ಪ್ರತಿಭಟನಕಾರರೊಂದಿಗೆ ಮಾತುಕತೆ ನಡೆಸಿ ಬಗೆಹರಿಸಬೇಕಿತ್ತು ಎಂದವರು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Award: ಅಮಿತಾಬ್ ಬಚ್ಚನ್, ಎಆರ್ ರೆಹಮಾನ್ ಗೆ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಗೌರವ
Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ
Ramakrishna Mission: ರಾಮಕೃಷ್ಣ ಮಠ, ಮಿಷನ್ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ
Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್
Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…
MUST WATCH
ಹೊಸ ಸೇರ್ಪಡೆ
Modi ಕಲ್ಪನೆಯ ವಿಕಸಿತ ಭಾರತಕ್ಕಾಗಿ ಕೋಟ ಅವರನ್ನು ಗೆಲ್ಲಿಸೋಣ: ಅಣ್ಣಾ ಮಲೈ
Award: ಅಮಿತಾಬ್ ಬಚ್ಚನ್, ಎಆರ್ ರೆಹಮಾನ್ ಗೆ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಗೌರವ
LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ
33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್ ಗುಂಡೂರಾವ್
Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ