ಅಸ್ಸಾಂ ಕ್ಷೇತ್ರ ಮರುವಿಂಗಡನೆ: ಮುಂದುವರಿದ ಪ್ರತಿಭಟನೆ
Team Udayavani, Jun 25, 2023, 7:50 AM IST
ಗುವಾಹಟಿ: ಅಸ್ಸಾಂ ಲೋಕಸಭೆ ಹಾಗೂ ವಿಧಾನಸಭಾ ಸ್ಥಾನಗಳ ಮರು ವಿಂಗಡಣೆ ಕರಡು ಪ್ರಸ್ತಾಪದ ವಿರುದ್ಧ ಶನಿವಾರವೂ ಅಸ್ಸಾಂನಲ್ಲಿ ಪ್ರತಿಭಟನೆಗಳು ಮುಂದುವರಿದಿವೆ. ಚುನಾವಣೆ ಆಯೋಗವು ಬಿಜೆಪಿ ಪರವಾಗಿ ಕಾರ್ಯನಿರ್ವಹಿಸುತ್ತಿದೆ ಎಂದು ವಿಪಕ್ಷಗಳು ಆರೋಪಿಸಿವೆ.
ಅಲ್ಲದೇ, ಪ್ರಸ್ತಾಪವು ಜನರ ಭಾವನೆಗಳನ್ನು ಧಿಕ್ಕರಿಸಿ, ಧಾರ್ಮಿಕ ನೆಲೆಯ ಆಧಾರದಲ್ಲಿ ಮತದಾರರನ್ನು ವಿಭಜಿಸುವ ಬಿಜೆಪಿಯ ಪ್ರಯತ್ನವಾಗಿದೆ.
ಈ ಹಿನ್ನೆಲೆ ಜನರ ಕುಂದುಕೊರತೆಗಳನ್ನು ಆಯೋಗದ ಮುಂದೆ ತೆರೆದಿಡಲು ವಿಪಕ್ಷಗಳು ನಿರ್ಧರಿಸಿವೆ. ಈ ನಿಟ್ಟಿನಲ್ಲಿ 12 ವಿಪಕ್ಷಗಳ ಆಯೋಗವು ಶಿವಸಾಗರ ಜಿಲ್ಲೆಗೆ ಜೂ.30ರಂದು ಭೇಟಿ ನೀಡಿ, ಜನರೊಟ್ಟಿಗೆ ಸಂವಾದ ನಡೆಸಲು ತೀರ್ಮಾನಿಸಿವೆ ಎಂದು ಕಾಂಗ್ರೆಸ್ ರಾಜ್ಯಾಧ್ಯಕ್ಷ ಭುಪೇನ್ ಕುಮಾರ್ ಬೋರ್Ø ಹೇಳಿದ್ದಾರೆ. ಆಯೋಗದ ಪ್ರಸ್ತಾಪದಲ್ಲಿ ಲೋಕಸಭೆ ಹಾಗೂ ವಿಧಾನಸಭೆ ಸ್ಥಾನಗಳನ್ನು ಕ್ರಮವಾಗಿ 14 ಹಾಗೂ 126ರ ರೀತಿ ನಿರ್ವಹಿಸಿ, ಪರಿಶಿಷ್ಟ ಜಾತಿಗೆ ಮೀಸಲಿರುವ ವಿಧಾನಸಭಾ ಕ್ಷೇತ್ರಗಳ ಸಂಖ್ಯೆಯನ್ನು 8ರಿಂದ 9ಕ್ಕೆ ಹಾಗೂ ಪರಿಶಿಷ್ಟ ಪಂಗಡಕ್ಕೆ ಮೀಸಲಿರುವ ಕ್ಷೇತ್ರವನ್ನು 16ರಿಂದ 19ಕ್ಕೆ ಏರಿಸಲು ಪ್ರಸ್ತಾಪಿಸಲಾಗಿದೆ. ಇದರಲ್ಲಿ ವಿಪಕ್ಷಗಳ ಹಲವು ಭದ್ರಕೋಟೆಗಳು ವಿಲೀನವಾಗುವ ಸಾಧ್ಯತೆಗಳಿವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Goldy Brar: ಸಿಧು ಮೂಸೆವಾಲಾ ಹತ್ಯೆಯ ಮಾಸ್ಟರ್ ಮೈಂಡ್; ಗೋಲ್ಡಿ ಬ್ರಾರ್ ಶೂಟೌಟ್ – ವರದಿ
ಸಲ್ಮಾನ್ ನಿವಾಸದ ಮೇಲೆ ಗುಂಡಿನ ದಾಳಿ: ಪೊಲೀಸ್ ಕಸ್ಟಡಿಯಲ್ಲಿದ್ದ ಆರೋಪಿ ಆತ್ಮಹತ್ಯೆ – ವರದಿ
Panaji: ವಿಮಾನ ನಿಲ್ದಾಣದಲ್ಲಿ ಬಾಂಬ್! ಇ-ಮೇಲ್ ಮೂಲಕ ಬೆದರಿಕೆ
Rupali Ganguly : ʼಅನುಪಮಾʼ ಧಾರಾವಾಹಿ ಖ್ಯಾತಿಯ ನಟಿ ರೂಪಾಲಿ ಗಂಗೂಲಿ ಬಿಜೆಪಿ ಸೇರ್ಪಡೆ
ಧ್ರುವ್ ರಾಠಿ ಮುಸ್ಲಿಂ, ಆತನ ಪತ್ನಿ ಪಾಕಿಸ್ತಾನಿ: ವೈರಲ್ ಪೋಸ್ಟ್ನ ಸತ್ಯಾಸತ್ಯತೆ ಏನು?
MUST WATCH
ಹೊಸ ಸೇರ್ಪಡೆ
BJP-JDS ಒಟ್ಟಾಗಿ ಹೋಗುವುದರಲ್ಲಿ ಎರಡು ಮಾತಿಲ್ಲ… : ಬಿಎಸ್ ವೈ
Goldy Brar: ಸಿಧು ಮೂಸೆವಾಲಾ ಹತ್ಯೆಯ ಮಾಸ್ಟರ್ ಮೈಂಡ್; ಗೋಲ್ಡಿ ಬ್ರಾರ್ ಶೂಟೌಟ್ – ವರದಿ
Gangolli: ಸ್ವಯಂ ಪ್ರೇರಣೆಯಿಂದ ಚಿತ್ರ ಕಲಾವಿದೆಯಾದ ತುಳಸಿ
ಸತ್ಯ ಆದಷ್ಟು ಬೇಗ ಹೊರಬರಲಿದೆ… ವಿಚಾರಣೆಗೆ ಕಾಲಾವಕಾಶ ಕೋರಿದ ಪ್ರಜ್ವಲ್ ರೇವಣ್ಣ
ಗುಲ್ವಾಡಿ: ಗುಜಿರಿ ಅಂಗಡಿಯಲ್ಲಿ ಅರಳಿದ ಗ್ರಂಥಾಲಯ-ತರಂಗ ವಾರಪತ್ರಿಕೆ ಪ್ರೇರಣೆ