ಕಾವೇರಿ: ಯುವಕನ ಆತ್ಮಹತ್ಯೆ ಯತ್ನ
Team Udayavani, Apr 13, 2018, 7:00 AM IST
ಚೆನ್ನೈ: ಕಾವೇರಿ ನೀರು ನಿರ್ವಹಣಾ ಮಂಡಳಿ ರಚನೆಗೆ ಒತ್ತಾಯಿಸಿ ತಮಿಳುನಾಡಿನಲ್ಲಿ ಪ್ರತಿಭಟನೆ ಮುಂದುವರಿದಿರುವಂತೆಯೇ 25 ವರ್ಷದ ಯುವಕನೊಬ್ಬ ಗುರುವಾರ ಆತ್ಮಹತ್ಯೆಗೆ ಯತ್ನಿಸಿದ್ದಾನೆ. “ಕಾವೇರಿ ವಿಚಾರದಲ್ಲಿ ಕೇಂದ್ರ ಮತ್ತು ರಾಜ್ಯ ನಿರ್ಲಕ್ಷ್ಯ ವಹಿಸು ತ್ತಿದ್ದು, ಪ್ರಧಾನಿ ಮೋದಿ ಅವರ ತಮಿಳುನಾಡು ಭೇಟಿ ಯನ್ನು ನಾನು ಖಂಡಿಸುತ್ತೇನೆ’ ಎಂದು ಮನೆಯ ಗೋಡೆಯಲ್ಲಿ ಬರೆದಿಟ್ಟು, ಸೀಮೆಎಣ್ಣೆ ಸುರಿದು ಕೊಂಡು ಬೆಂಕಿ ಹಚ್ಚಿಕೊಂಡಿದ್ದಾನೆ. ಪರಿಣಾಮ ಶೇ.90 ರಷ್ಟು ಸುಟ್ಟ ಗಾಯಗಳಿಂದ ಆಸ್ಪತ್ರೆಗೆ ದಾಖಲಾಗಿದ್ದು, ಪರಿಸ್ಥಿತಿ ಗಂಭೀರವಾಗಿ ಎಂದು ವೈದ್ಯರು ತಿಳಿಸಿದ್ದಾರೆ.
ಮತ್ತೂಂದೆಡೆ, ಪ್ರಧಾನಿ ಮೋದಿ ತಮಿಳುನಾಡು ಭೇಟಿ ಖಂಡಿಸಿ ವಿವಿಧ ತಮಿಳು ಸಂಘಟನೆಗಳು ಚೆನ್ನೈ ಏರ್ಪೋರ್ಟ್ನಲ್ಲೇ ಕಪ್ಪುಬಾವುಟ ಪ್ರದರ್ಶಿಸಿ, ಪ್ರತಿಭಟನೆ ನಡೆಸಿವೆ. ಜತೆಗೆ, “ಗೋ ಬ್ಯಾಕ್ ಮೋದಿ’ ಎಂದು ಘೋಷಣೆಗಳನ್ನೂ ಕೂಗಿವೆ. ಡಿಎಂಕೆ ನೇತೃತ್ವದಲ್ಲಿ ವಿವಿಧ ಪಕ್ಷಗಳ ನಾಯಕರು, ಕಾರ್ಯಕರ್ತರು ಕಪ್ಪು ಬಟ್ಟೆಗಳನ್ನು ಧರಿಸಿ ಪ್ರತಿಭಟನೆಯಲ್ಲಿ ಪಾಲ್ಗೊಂಡವು. ಡಿಎಂಕೆ ನಾಯಕ ಮನೆಗಳ ಮೇಲೆಯೂ ಕಪ್ಪು ಬಾವುಟಗಳನ್ನು ಹಾರಿಸಲಾಗಿತ್ತು. ಗಾಲಿ ಕುರ್ಚಿಯಲ್ಲಿರುವ ಡಿಎಂಕೆ ವರಿಷ್ಠ ಕರುಣಾನಿಧಿ ಅವರೂ ಪ್ರತಿಭಟನಾ ಸೂಚಕವಾಗಿ ಕಪ್ಪು ಶರ್ಟ್ ಧರಿಸಿದ್ದರು. ಇದೇ ವೇಳೆ, ಮಂಡಳಿ ರಚಿಸುವಂತೆ ಒತ್ತಾಯಿಸಿ ಪ್ರಧಾನಿ ಮೋದಿಗೆ ಸಿಎಂ ಪಳನಿಸ್ವಾಮಿ ಅವರು ಮನವಿ ಪತ್ರ ನೀಡಿದ್ದಾರೆ. ಜತೆಗೆ, ಕಾವೇರಿ ನದಿ ಮುಖಜ ಭೂಮಿಯ ರೈತರು ನೀರಾವರಿಗೆ ಕಾವೇರಿ ನದಿಯನ್ನೇ ಅವಲಂಬಿಸಿದ್ದಾರೆ ಎಂದ ಇದೇ ವೇಳೆ ತಿಳಿಸಿದ್ದಾರೆ.
ಕೂಡಲೇ ಪ್ರಧಾನಿ ಮೋದಿ ಅವರು ಕಾವೇರಿ ನಿರ್ವಹಣಾ ಮಂಡಳಿ ರಚಿಸಬೇಕು. ಆ ಮೂಲಕ ಕರ್ನಾಟಕ ಚುನಾವಣೆಗಾಗಿಯೇ ಸರಕಾರ ಮಂಡಳಿ ರಚನೆಗೆ ವಿಳಂಬ ಮಾಡುತ್ತಿದೆ ಎಂಬ ಆರೋಪವನ್ನು ಸುಳ್ಳಾಗಿಸಬೇಕು.
ಕಮಲ್ ಹಾಸನ್, ಮಕ್ಕಳ್ ನೀಧಿ ಮಯ್ಯಂ ಸ್ಥಾಪಕ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಕಾಂಗ್ರೆಸ್ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ
Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು
ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು
ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ
Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ
MUST WATCH
ಹೊಸ ಸೇರ್ಪಡೆ
T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ
ಕಾಂಗ್ರೆಸ್ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ
Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ
Davanagere; ಸಮಾವೇಶ ನಡೆದ ಮೈದಾನ ಸ್ವಚ್ಛಗೊಳಿಸಿದ ಗಾಯಿತ್ರಿ ಸಿದ್ದೇಶ್ವರ
Belagavi; ಪ್ರಧಾನಿ ಮೋದಿ ಯಾಕೆ ಪ್ರಜ್ವಲ್ ವರ್ತನೆ ಖಂಡಿಸಲಿಲ್ಲ…: ಲಕ್ಷ್ಮೀ ಹೆಬ್ಬಾಳ್ಕರ್