ಕೋವಿಡ್ ಲಸಿಕೆಗೆ ಅನುಮತಿ; ಆತ್ಮನಿರ್ಭರ ಯೋಜನೆಗೆ ಸಂದ ಗೆಲುವು ಎಂದ ಪ್ರಧಾನಿ ಮೋದಿ
Team Udayavani, Jan 3, 2021, 1:53 PM IST
ನವದೆಹಲಿ: ದೇಶದ ಮೊಟ್ಟಮೊದಲ ಸ್ವದೇಶಿ ನಿರ್ಮಿತ ಎರಡು ಕೊವಿಡ್ ಲಸಿಕೆಗಳಿಗೆ ಡ್ರಗ್ ಕಂಟ್ರೋಲರ್ ಜನರಲ್ ಆಫ್ ಇಂಡಿಯಾ (ಡಿಸಿಜಿಐ) ಅನುಮತಿ ನೀಡಿದೆ. ಈ ಕುರಿತಾಗಿ ಪ್ರಧಾನಿ ನರೇಂದ್ರ ಮೋದಿಯವರು ಸಂತಸ ವ್ಯಕ್ತಪಡಿದ್ದು, ಇದು ಪ್ರತಿಯೊಬ್ಬ ಭಾರತೀಯರೂ ಹೆಮ್ಮೆಪಡುವ ಕ್ಷಣವಾಗಿದೆ ಎಂದಿದ್ದಾರೆ.
ಆಕ್ಸ್ ಫರ್ಡ್- ಆಸ್ಟ್ರಾಜನಿಕಾ ಕೊವಿಡ್ ಲಸಿಕೆ ಹಾಗೂ ಹೈದರಾಬಾದ್ ನ ಭಾರತ್ ಬಯೋಟೆಕ್ ಸಂಸ್ಥೆಯ ಕೋವ್ಯಾಕ್ಸಿನ್ ಲಸಿಕೆಗಳ ಸಾರ್ವತ್ರಿಕ ಬಳಕೆಗೆ ಅನುಮತಿ ನೀಡಿರುವ ಡಿಸಿಜಿಐ, ಶೀಘ್ರದಲ್ಲಿಯೇ ಈ ಲಸಿಕೆಗಳ ಹಂಚಿಕೆ ಪ್ರಾರಂಭಿಸಬಹುದು ಎಂದಿದ್ದು, ಆದರೆ ಈ ಲಸಿಕೆಗಳನ್ನು ತುರ್ತು ಬಳಕೆಗೆ ಮಾತ್ರ ಬಳಕೆ ಮಾಡಬಹುದು ಎಂದು ತಿಳಿಸಿದೆ.
ಈ ಕುರಿತಾಗಿ ಟ್ಟೀಟ್ ಮಾಡಿರುವ ಪ್ರಧಾನಿ ನರೇಂದ್ರ ಮೋದಿ ಅವರು ಇದೊಂದು ಐತಿಹಾಸಿಕ ಕ್ಷಣವಾಗಿದೆ. ದೇಶವಾಸಿಗಳು ಬಹುದಿನಗಳಿಂದ ಕಾತರದಿಂದ ಕಾಯುತ್ತಿದ್ದ ಕ್ಷಣ ಈಗ ಒದಗಿ ಬಂದಿದೆ. ಈ ಲಸಿಕೆಯ ಲಭ್ಯತೆಗಾಗಿ ಶ್ರಮಿಸಿರುವ ನಮ್ಮ ಹೆಮ್ಮೆಯ ವಿಜ್ಞಾನಿಗಳ ಶ್ರಮವನ್ನು ದೇಶ ಸದಾ ಸ್ಮರಿಸುತ್ತದೆ ಎಂದು ನುಡಿದಿದ್ದಾರೆ.
ಇದನ್ನೂ ಓದಿ:ತ್ರಾಸಿ: ಅವೈಜ್ಞಾನಿಕ ಕಾಮಗಾರಿಯಿಂದ ಹೆಚ್ಚುತ್ತಿರುವ ಅಪಘಾತ
ಸದ್ಯ ಡಿಸಿಜಿಐ ಅನುಮತಿ ನೀಡಿರುವ ಲಸಿಕೆಗಳು ಸಂಪೂರ್ಣವಾಗಿ ಸ್ವದೇಶಿ ನಿರ್ಮಿತವಾಗಿದ್ದು, ನಮ್ಮ ಹೆಮ್ಮೆಯ ವಿಜ್ಞಾನಿಗಳು ಆತ್ಮನಿರ್ಭರ ಭಾರತದ ಪರಿಕಲ್ಪನೆಗೆ ಬದ್ಧರಾಗಿದ್ದಾರೆ ಎಂಬುವುದಕ್ಕೆ ಇದೊಂದು ಅದ್ಭುತ ನಿದರ್ಶನವಾಗಿದೆ ಎಂದು ಹರ್ಷ ವ್ಯಕ್ತಪಡಿಸಿದ್ದಾರೆ.
ಇಷ್ಟು ಕಾಲ ದೇಶವನ್ನು ಆವರಿಸಿಕೊಂಡಿದ್ದ ಕೋವಿಡ್ ಮಹಾಮಾರಿಯನ್ನು ಹೊಡೆದೋಡಿಸುವ ಸಮಯ ಇದೀಗ ಬಂದಿದ್ದು, ಈ ಸಂದರ್ಭದಲ್ಲಿ ನಾನು ನಮ್ಮ ಕೋವಿಡ್ ವಾರಿಯರ್ಸ್ ಗಳಾಗಿರುವ ವೈದ್ಯಕೀಯ ಸಮುದಾಯ, ಪೊಲೀಸ್ ಮುಂತಾದವರಿಗೆ ಧನ್ಯವಾದಗಳನ್ನು ಸಲ್ಲಿಸುತ್ತಿದ್ದೇನೆ ಎಂದಿದ್ದಾರೆ.
ಇದನ್ನೂ ಓದಿಜ.16ರಂದು ಅಮಿತ್ ಶಾ ಬೆಂಗಳೂರಿಗೆ: ಜ.17ರಂದು ಜನ ಸೇವಕ್ ಸಮಾವೇಶದಲ್ಲಿ ಭಾಗಿ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..
IPL ಅಕ್ರಮ ಪ್ರಸಾರ ಕೇಸ್; ನಟಿ ತಮನ್ನಾಗೆ ಸಂಕಷ್ಟ: ಸೈಬರ್ ಸೆಲ್ ನೋಟಿಸ್
Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ
ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್, ತರೂರ್, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ
BJP 2025ರಲ್ಲಿ ಹಿಂದುಳಿದ ಸಮುದಾಯಗಳ ಮೀಸಲಾತಿ ತೆಗೆದು ಹಾಕಲಿದೆ: ರೇವಂತ್ ರೆಡ್ಡಿ
MUST WATCH
ಹೊಸ ಸೇರ್ಪಡೆ
Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!
Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ
Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..
T20 World Cup; ಯಾರಿಲ್ಲ.. ಯಾರಿಲ್ಲ.. ವಿಶ್ವಕಪ್ ಗೆ ವೇಗದ ಬೌಲರ್ ಗಳು ಯಾರೆಲ್ಲಾ?
ನರಗುಂದ: ಸಮಾಜದಲ್ಲಿ ದೇವಸ್ಥಾನಗಳು ಭಕ್ತಿಯ ಸಂಗಮ- ಶಾಂತಲಿಂಗ ಸ್ವಾಮೀಜಿ