ನರ್ಸಿಂಗ್ ಮಾಡುವವರಿಗೂ ವೈದ್ಯ ಶಿಕ್ಷಣಕ್ಕೆ ಅವಕಾಶ ಕೊಡಿ
Team Udayavani, Jun 6, 2019, 6:10 AM IST
ಹೊಸದಿಲ್ಲಿ: ಕೇಂದ್ರ ಸರಕಾರಕ್ಕೆ ಇಸ್ರೋ ಮಾಜಿ ಅಧ್ಯಕ್ಷ ಡಾ.ಕೆ.ಕಸ್ತೂರಿ ರಂಗನ್ ನೇತೃತ್ವದ ಸಮಿತಿ ಸಲ್ಲಿಸಿದ ರಾಷ್ಟ್ರೀಯ ಶಿಕ್ಷಣ ನೀತಿಯಲ್ಲಿ ವೈದ್ಯಕೀಯ ಶಿಕ್ಷಣದಲ್ಲೂ ಆಮೂಲಾಗ್ರ ಬದಲಾವಣೆಗೆ ಶಿಫಾರಸು ಮಾಡಲಾಗಿದೆ. ವೈದ್ಯ ಶಿಕ್ಷಣ ಕೋರ್ಸ್ಗೆ ದಂತ ವೈದ್ಯ, ನರ್ಸಿಂಗ್ ಕೋರ್ಸ್ ಮಾಡುವವ ರಿಗೆ ಲ್ಯಾಟರಲ್ ಎಂಟ್ರಿಗೆ (ನೇರಪ್ರವೇಶ)ಅವಕಾಶ ಮಾಡಿಕೊಡಬಹುದು ಎಂದು ಸಲಹೆ ಮಾಡಲಾಗಿದೆ.
ಶಿಕ್ಷಣ ನೀತಿಯ ಪ್ರಕಾರ ನರ್ಸಿಂಗ್, ದಂತ ವೈದ್ಯ, ವೈದ್ಯಕೀಯ ಕೋರ್ಸ್ಗಳಿಗೆ ಪ್ರವೇಶ ಪಡೆವ ಮುನ್ನ ಮೊದಲ 2 ವರ್ಷಗಳಲ್ಲಿ ಸಮಾನವಾಗಿರುವ ಶಿಕ್ಷಣ ಇರಬೇಕು. ಅನಂತರ ಅವರಿಗೆ ಬೇಕಾದ ಕ್ಷೇತ್ರ ಆಯ್ಕೆ ಮಾಡಿಕೊಳ್ಳಬಹುದು ಎಂದು ಹೇಳಲಾಗಿದೆ.
ಇದರ ಜತೆಗೆ ಎಂಬಿಬಿಎಸ್ ಪದವಿ ಮುಕ್ತಾಯಕ್ಕಾಗಿ ಇರುವ ಪರೀಕ್ಷೆ (ಎಕ್ಸಿಟ್ ಎಕ್ಸಾಮ್), ಸ್ನಾತಕೋತ್ತರ ವೈದ್ಯ ಕೋರ್ಸ್ಗೆ ಪ್ರವೇಶ ಪಡೆಯಲು ಇರುವ ಪರೀಕ್ಷೆಯೂ ಆಗಬೇಕು ಎಂದು ಸಲಹೆ ಮಾಡಲಾಗಿದೆ. ನಾಲ್ಕನೇ ವರ್ಷದ ಮುಕ್ತಾಯದಲ್ಲಿ ಈ ಪರೀಕ್ಷೆ ನಡೆಸಬೇಕು. ಈ ಮೂಲಕ ಪ್ರತ್ಯೇಕವಾಗಿ ಪರೀಕ್ಷೆಗೆ ಸಿದ್ಧತೆ ನಡೆಸುವ ಹೊರೆ ತಪ್ಪಿಸಿದಂತಾಗುತ್ತದೆ. ಈ ಅವಧಿಯನ್ನು ಪ್ರಾಯೋಗಿಕ ತರಬೇತಿ ಪಡೆಯಲು ಬಳಕೆ ಮಾಡಬಹುದು. ದೇಶದಲ್ಲಿ ವೈದ್ಯರ ಕೊರತೆ ಹಿನ್ನೆಲೆಯಲ್ಲಿ ಈ ಅಂಶವನ್ನು ಸಮಿತಿ ಸಲಹೆ ಮಾಡಿದೆ. ಶಿಕ್ಷಣ ಸಂಸ್ಥೆಗಳು ಸರಕಾರ ಸಿದ್ಧಪಡಿಸಿದ ಸೂಚಿಗೆ ಅನುಗುಣವಾಗಿ ತಮ್ಮದೇ ಆಗಿರುವ ಪಠ್ಯಕ್ರಮ ಸಿದ್ಧಪಡಿಸಲೂ ಅನುಮತಿ ನೀಡಬಹುದಾಗಿದೆ ಎಂದು ‘ದ ಟೈಮ್ಸ್ ಆಫ್ ಇಂಡಿಯಾ’ ವರದಿ ಮಾಡಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ
Mangaluru;ಮನೆಯಲ್ಲೇ ಅಕ್ರಮ ಕಸಾಯಿಖಾನೆ:ಗೋಮಾಂಸ ಸಹಿತ ಮೂವರ ಬಂಧನ
Kolkata ವಿಮಾನ ನಿಲ್ದಾಣದಲ್ಲಿ ಸ್ವಯಂ ಗುಂಡಿಟ್ಟುಕೊಂಡು ಯೋಧ ಆತ್ಮಹತ್ಯೆ
Rameshwaram Cafe case: ಎನ್ಐಎಯಿಂದ ಸಹ ಸಂಚುಕೋರನ ಬಂಧನ
Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ
MUST WATCH
ಹೊಸ ಸೇರ್ಪಡೆ
Congress candidate: ನಾನು ಹುಟ್ಟಿದಾಗ ಒಕ್ಕಲಿಗ, ಬೆಳೆಯುತ್ತ ವಿಶ್ವಮಾನವ: ಲಕ್ಷ್ಮಣ್
Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ
Dinesh Gundu Rao: ಕ್ಷಯ ರೋಗ ನಿಯಂತ್ರಣ ಔಷಧ ಪೂರೈಕೆಗೆ ಕೇಂದ್ರಕ್ಕೆ ಮನವಿ; ದಿನೇಶ್
Lok Sabha elections: ಸಂಸದ ಬಸವರಾಜುಗೆ “ಗೋ ಬ್ಯಾಕ್’ ಎಂದ ಬಿಜೆಪಿಗರು!
Narayan Gowda: ಹೆಚ್ಚಿನ ಮತಗಳಿಂದ ಎಚ್ಡಿಕೆ ಗೆಲ್ಲಿಸುತ್ತೇವೆ: ನಾರಾಯಣ ಗೌಡ