ಮನೆಗೇ ಬಂದು ತಲುಪುತ್ತೆ ಪಿಂಚಣಿ!
Team Udayavani, Nov 11, 2017, 6:00 AM IST
ಹೊಸದಿಲ್ಲಿ: ಹಿರಿಯ ನಾಗರಿಕರು ಹಾಗೂ ಪಿಂಚಣಿದಾರರ ಮೊಗದಲ್ಲಿ ಮಂದಹಾಸ ತರುವಂಥ ಕೆಲವು ನಿರ್ಧಾರಗಳನ್ನು ಭಾರತೀಯ ರಿಸರ್ವ್ ಬ್ಯಾಂಕ್ (ಆರ್ಬಿಐ) ಕೈಗೊಂಡಿದ್ದು, ಎಪ್ಪತ್ತು ವರ್ಷ ದಾಟಿದ ಹಿರಿಯ ನಾಗರಿಕರಿಗೆ ಕೆಲವು ಅತ್ಯಗತ್ಯ ಬ್ಯಾಂಕಿಂಗ್ ಸೌಲಭ್ಯವನ್ನು ಅವರ ಮನೆ ಬಾಗಿಲಿಗೆ ತಲುಪಿಸಲು ಎಲ್ಲ ಬ್ಯಾಂಕ್ಗಳಿಗೆ ಆರ್ಬಿಐ ಆದೇಶಿಸಿದೆ.
ಇದರ ಜತೆಗೆ, ಹಿರಿಯ ನಾಗರಿಕರಿಗೆ ಚೆಕ್ ಬುಕ್ ನೀಡುವ ನಿಯಮಗಳಲ್ಲಿ ಬದಲಾವಣೆ, ಲೈಫ್ ಸರ್ಟಿಫಿಕೇಟ್ಗೆ ಸಹಿ ಹಾಕುವಲ್ಲಿ ಮತ್ತಷ್ಟು ಉಪಯೋಗ ಕಲ್ಪಿಸಿ, ಈವರೆಗಿನ ಸಾಂಪ್ರದಾಯಿಕ ಪದ್ಧತಿಗಳಲ್ಲಿ ತಿದ್ದುಪಡಿ ತರಲಾಗಿದೆ. ಡಿ. 31ರಿಂದ ಈ ಆದೇಶ ಅಧಿಕೃತವಾಗಿ ಜಾರಿಗೆ ಬರಲಿದ್ದು, ಜನವರಿಯಿಂದ ಎಲ್ಲರಿಗೂ ಈ ಸೇವೆ ಲಭ್ಯವಾಗಲಿದೆ.
ಮನೆ ಬಾಗಿಲಿಗೆ ಸೇವೆಗಳು: ಹಿರಿಯ ನಾಗರಿಕರು ಬಯಸಿದಲ್ಲಿ ಪಿಂಚಣಿ ಅಥವಾ ಅವರ ಇತರ ಖಾತೆಗಳ ಹಣ, ಚೆಕ್ ಬುಕ್, ಡಿಮ್ಯಾಂಡ್ ಡ್ರಾಫ್ಟ್, ನೋ ಯುವರ್ ಕಸ್ಟಮರ್ (ಕೆವೈಸಿ) ಅರ್ಜಿಗಳನ್ನು ಮನೆಗೇ ತಲುಪಿಸುವಂತೆ ಆದೇಶಿಸಲಾಗಿದೆ. ಇದರಿಂದ ಪಿಂಚಣಿಗಾಗಿ ಬ್ಯಾಂಕ್, ಎಟಿಎಂಗಳಲ್ಲಿ ಕ್ಯೂ ನಿಲ್ಲುವುದು ತಪ್ಪಲಿದೆ.
ಇದಲ್ಲದೆ, ವರ್ಷಕ್ಕೆ 25 ಚೆಕ್ಲೀಫ್ಗಳುಳ್ಳ ಚೆಕ್ ಬುಕ್ಗಳನ್ನು ನೀಡು ವಂತೆ ಸೂಚಿಸಲಾಗಿದೆ. ಇಷ್ಟೇ ಅಲ್ಲದೆ, ಬ್ಯಾಂಕ್ಗಳಿಗೆ ತೆರಳಲೇಬೇಕಾದ ಹಿರಿಯ ನಾಗರಿಕರಿಗೆ ಬ್ಯಾಂಕ್ಗಳ ವತಿಯಿಂದಲೇ ಪಿಕ್-ಅಪ್ ಸೌಲಭ್ಯ ನೀಡಬೇಕೆಂದು ಆರ್ಬಿಐ ತಿಳಿಸಿದೆ.
ಇದೇ ವೇಳೆ, ಹಿರಿಯ ನಾಗರಿಕರಿಗೆ ಚೆಕ್ ಬುಕ್ ವಿತರಿಸುವಾಗ ಅವರ ಉಪಸ್ಥಿತಿ ಇರಲೇಬೇಕೆಂಬ ನಿಯಮವನ್ನು ತೆಗೆದುಹಾಕಿದೆ.
ಪಿಂಚಣಿದಾರರು ಪ್ರತಿ ವರ್ಷ ನವೆಂಬರ್ನಲ್ಲಿ ತಮ್ಮ ಪಿಂಚಣಿ ಖಾತೆ ಇರುವ ಬ್ಯಾಂಕ್ ಶಾಖೆಗಳಿಗೆ ಹೋಗಿ ಲೈಫ್ ಸರ್ಟಿಫಿಕೇಟ್ಗೆ ಸಹಿ ಮಾಡುವ ಪದ್ಧತಿಗೆ ಇತಿಶ್ರೀ ಹಾಡಿರುವ ಆರ್ಬಿಐ, ಪಿಂಚಣಿ ನೀಡುವ ಯಾವುದೇ ಬ್ಯಾಂಕ್ ಶಾಖೆಗೆ ತಮ್ಮ ಬ್ಯಾಂಕ್ ಖಾತೆ ಸಂಖ್ಯೆ, ಆಧಾರ್ ಸಂಖ್ಯೆ ನೀಡಿ ಲೈಫ್ ಸರ್ಟಿಫಿಕೇಟ್ಗೆ ಸಹಿ ಹಾಕಬಹುದೆಂದು ಹೇಳಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Madhya Pradesh Rally; ಕೈಯಿಂದ ಮೀಸಲಾತಿ ಕಸಿಯುವ ಯತ್ನ: ಪ್ರಧಾನಿ ಮೋದಿ
Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್ ಗಾಂಧಿ
Rajveer Diler: ಹೃದಯಾಘಾತದಿಂದ ಬಿಜೆಪಿ ಸಂಸದ ರಾಜ್ವೀರ್ ದಿಲೇರ್ ನಿಧನ
Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್
LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ
MUST WATCH
ಹೊಸ ಸೇರ್ಪಡೆ
ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್ ಬ್ರಿಜೇಶ್ ಚೌಟ
ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್ ಬೆಂಬಲಿಸಿ: ಪದ್ಮರಾಜ್ ಪೂಜಾರಿ
ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ
ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ
Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ