ಭಗವದ್ಗೀತೆಯ ಎಲೆಕ್ಟ್ರಾನಿಕ್ ಪ್ರತಿಯೊಂದಿಗೆ ಬಾಹ್ಯಾಕಾಶಕ್ಕೆ ಜಿಗಿದ ಇಸ್ರೋ ರಾಕೆಟ್..!   

PSLVಯ 53ನೇ ಮಿಷನ್ ಯಶಸ್ವಿ ಉಡಾವಣೆ

Team Udayavani, Feb 28, 2021, 1:04 PM IST

PSLV-C51/Amazonia-1 mission successful, Isro places 19 satel

ಚೆನ್ನೈ : ಇಸ್ರೋದ ಪೋಲಾರ್ ಸ್ಯಾಟಲೈಟ್ ಲಾಂಚ್ ವೆಹಿಕಲ್ ಈ ಬಾರಿ ಉಪಗ್ರಹದ ಜೊತೆಗೆ ಭಗವದ್ಗೀತೆಯ ಎಲೆಕ್ಟ್ರಾನಿಕ್ ಪ್ರತಿಯೊಂದಿಗೆ ಬಾಹ್ಯಾಕಾಶಕ್ಕೆ ಜಿಗಿದಿದೆ.

ಇದರ ಒಂದು ನ್ಯಾನೋ ಉಪಗ್ರಹದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ಭಾವಚಿತ್ರವೂ ಇದೆ. ಪಿಎಸ್‌ಎಲ್‌ವಿ-ಸಿ 51 / ಅಮೆಜೋನಿಯಾ -1 ಅನ್ನು ಬೆಳಿಗ್ಗೆ 10.24 ಕ್ಕೆ ಶ್ರೀಹರಿಕೋಟದಿಂದ ಯಶಸ್ವಿ ಉಡಾವಣೆ ಮಾಡಲಾಗಿದೆ. ಇದು 2021 ರಲ್ಲಿ ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ISRO) ಮೊದಲ ಉಡಾವಣೆಯಾಗಿದೆ.


PSLVಯ 53ನೇ ಮಿಷನ್ ಯಶಸ್ವಿ ಉಡಾವಣೆ :

ಇದು ಪಿ ಎಸ್‌ ಎಲ್‌ ವಿ-ಸಿ 51 ಪಿ ಎಸ್‌ ಎಲ್‌ ವಿಯ 53 ನೇ ಮಿಷನ್ ಆಗಿದ್ದು,  ಈ ರಾಕೆಟ್‌ ನೊಂದಿಗೆ ಬ್ರೆಜಿಲ್‌ ನ ಅಮೆಜೋನಿಯಾ -1 ಉಪಗ್ರಹದೊಂದಿಗೆ ಇತರ 18 ಉಪಗ್ರಹಗಳನ್ನು ಸಹ ಬಾಹ್ಯಾಕಾಶಕ್ಕೆ ಕಳುಹಿಸಲಾಗಿದೆ. ಚೆನ್ನೈನಿಂದ ಸುಮಾರು 100 ಕಿ.ಮೀ ದೂರದಲ್ಲಿರುವ ಶ್ರೀಹರಿಕೋಟದ, ಡಾ. ಸತೀಶ್ ಧವನ್ ಬಾಹ್ಯಾಕಾಶ ಕೇಂದ್ರದಿಂದ ಈ ರಾಕೆಟ್ ಅನ್ನು ಉಡಾವಣೆ ಮಾಡಲಾಗಿದೆ.

ಈ ರಾಕೆಟ್ ನ  ಉಪಗ್ರಹಗಳಲ್ಲಿ ಚೆನ್ನೈನ ಸ್ಪೇಸ್ ಕಿಡ್ಸ್ ಇಂಡಿಯಾದ (SKI) ಸತೀಶ್ ಧವನ್ ಎಸ್‌ ಎ ಟಿ (SDSAT) ಶಾಮೀಲಾಗಿವೆ. ಪ್ರಧಾನಿ ನರೇಂದ್ರ ಮೋದಿ ಅವರ ಭಾವಚಿತ್ರದ ಕೆಳಗಡೆ ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ISRO) ಅಧ್ಯಕ್ಷ ಡಾ.ಕೆ.ಶಿವನ್ ಮತ್ತು ವೈಜ್ಞಾನಿಕ ಕಾರ್ಯದರ್ಶಿ ಡಾ.ಆರ್.ಉಮಾ ಮಹೇಶ್ವರನ್ ಅವರ ಹೆಸರನ್ನು ಫಲಕದಲ್ಲಿ ಬರೆಯಲಾಗಿದೆ.

ಇದನ್ನು ‘ಪ್ರಧಾನಿ ಆತ್ಮನಿರ್ಭರ್ ಭಾರತ್ ಉಪಕ್ರಮ ಮತ್ತು ಬಾಹ್ಯಾಕಾಶ ಖಾಸಗೀಕರಣಕ್ಕೆ ಒಗ್ಗಟ್ಟು ಮತ್ತು ಕೃತಜ್ಞತೆಯನ್ನು ವ್ಯಕ್ತಪಡಿಸುವ ಸಂಕೇತವಾಗಿದೆ ‘  ಎಂದು ಎಸ್ ಕೆ ಐ ಹೇಳಿದೆ.

ಈ ಮಿಷನ್ ಮೂಲಕ ಎಸ್ ಕೆ ಐ ಡಿಜಿಟಲ್ ಭಗವದ್ಗೀತೆಯನ್ನು ಎಸ್‌ ಡಿ ಕಾರ್ಡ್‌ನಲ್ಲಿ ಹಾಕಿ ಬಾಹ್ಯಾಕಾಶಕ್ಕೆ ಕಳುಹಿಸಿದೆ. ಹಾಗೆಯೇ ಈ ಉಪಗ್ರಹವು 25 ಸಾವಿರ ಭಾರತೀಯ ಜನರ ಹೆಸರುಗಳನ್ನು ಕೂಡ ಬಾಹ್ಯಾಕಾಶಕ್ಕೆ ಹೊತ್ತೊಯ್ದಿದೆ.

ಇಸ್ರೋ ಪ್ರಧಾನ ಕಚೇರಿ ಬೆಂಗಳೂರಿನಲ್ಲಿದೆ. ಪಿ ಎಸ್‌ ಎಲ್‌ ವಿ (ಪೋಲಾರ್ ಸ್ಯಾಟಲೈಟ್ ಲಾಂಚ್ ವೆಹಿಕಲ್) ಸಿ 51 / ಅಮೆಜೋನಿಯಾ -1 ಯು ಎಸ್‌ ನಲ್ಲಿ ಸಿಯಾಟಲ್‌ ನ ಸ್ಯಾಟಲೈಟ್ ರೈಡ್‌ ಶೇರ್ ಮತ್ತು ಮಿಷನ್ ಮ್ಯಾನೇಜ್‌ ಮೆಂಟ್ ಪ್ರೊವೈಡರ್ ಸ್ಪೇಸ್‌ ಪ್ಲೈಟ್ ಇಂಕ್‌ ನ ವಾಣಿಜ್ಯ ನಿರ್ವಹಣೆಯಡಿಯಲ್ಲಿ ಪ್ರಾರಂಭಿಸಲಾಗುವ ಎನ್‌ ಎಸ್‌ ಐ ಎಲ್‌ ನ ಮೊದಲ ಮೀಸಲಾದ ಕಮರ್ಷಿಯಲ್ ಮಿಷನ್ ಇದಾಗಿದೆ.

ಬ್ರೆಜಿಲ್‌ನಲ್ಲಿ ನಿರ್ಮಿಸಲಾದ ಮೊದಲ ಉಪಗ್ರಹವನ್ನು ಉಡಾಯಿಸುವುದು ನಮಗೆ ಹೆಮ್ಮೆಯ ವಿಷಯವಾಗಿದೆ ಎಂದು ಎನ್‌ ಎಸ್‌ ಐ ಎಲ್ ಅಧ್ಯಕ್ಷ ಮತ್ತು ವ್ಯವಸ್ಥಾಪಕ ನಿರ್ದೇಶಕ ಜಿ ನಾರಾಯಣ್ ಹೇಳಿದ್ದಾರೆ.

ಇನ್ನು, 637 ಕೆಜಿ ತೂಕದ ಅಮೆಜೋನಿಯಾ -1 ಭಾರತದಿಂದ ಉಡಾಯಿಸಲ್ಪಡುವ ಬ್ರೆಜಿಲ್‌ ನ ಮೊದಲ ಉಪಗ್ರಹವಾಗಿದೆ. ಇದು ರಾಷ್ಟ್ರೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆಯ (INPI) ಆಪ್ಟಿಕಲ್ ಭೂ ವೀಕ್ಷಣಾ ಉಪಗ್ರಹವಾಗಿದೆ. ಅಮೆಜೋನಿಯಾ -1  ಮೂಲಕ ಅಮೆಜಾನ್ ಪ್ರದೇಶದಲ್ಲಿನ ಅರಣ್ಯನಾಶದ ಮೇಲ್ವಿಚಾರಣೆ ಮತ್ತು ಬ್ರೆಜಿಲ್ ಭಾಗದ ವೈವಿಧ್ಯಮಯ ಕೃಷಿಯ ವಿಶ್ಲೇಷಣೆ ಮತ್ತು ಅಸ್ತಿತ್ವದಲ್ಲಿರುವ ಮೂಲಸೌಕರ್ಯಗಳನ್ನು ಮತ್ತಷ್ಟು ಬಲಪಡಿಸಲು ಉಪಗ್ರಹವು ಬಳಕೆದಾರರಿಗೆ ರಿಮೋಟ್ ಸೆನ್ಸಿಂಗ್ ಡೇಟಾ ಒದಗಿಸಲಿದೆ ಎಂದು ಇಸ್ರೋ ಹೇಳಿಕೆ ನೀಡಿದೆ.

ಟಾಪ್ ನ್ಯೂಸ್

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ

Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ

pramod-muthalik

Neha Hiremath Case; ಕೊಲೆಗಡುಕನನ್ನು ಎನ್ ಕೌಂಟರ್ ಮಾಡಿ: ಪ್ರಮೋದ್ ಮುತಾಲಿಕ್ ಆಗ್ರಹ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ

Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ

Stones Pelted: ಪಶ್ಚಿಮ ಬಂಗಾಳ: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ

Stones Pelted: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ

Gujarat Lok Sabha Constituency: ಗುಜರಾತ್‌ ಎಂಬ ಕೇಸರಿ ಕೋಟೆಗೆ ಲಗ್ಗೆ ಸಾಧ್ಯವೇ?

Gujarat Lok Sabha Constituency: ಗುಜರಾತ್‌ ಎಂಬ ಕೇಸರಿ ಕೋಟೆಗೆ ಲಗ್ಗೆ ಸಾಧ್ಯವೇ?

Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ

Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

14-fusion

Women: ಸ್ತ್ರೀ ಎಂದರೆ ಅಷ್ಟೇ ಸಾಕೇ

13-

Woman: ಸದಾಕಾಲ ಸಾಧಕಿ ಹೆಣ್ಣು

12-

Sirsi Festival: ನಾವು ಬಂದೇವ ಶಿರಸಿ ಜಾತ್ರೆ ನೋಡಲಿಕ್ಕೆ !

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.