ಪುಲ್ವಾಮಾ ದಾಳಿ: 100 ತಾಸೊಳಗೆ ಕಾಶ್ಮೀರದ ಎಲ್ಲ ಜೈಶ್ ನಾಯಕರ ಹತ್ಯೆ
Team Udayavani, Feb 19, 2019, 6:30 AM IST
ಹೊಸದಿಲ್ಲಿ : ಕಳೆದ ಫೆ.14ರಂದು ಪುಲ್ವಾಮಾದಲ್ಲಿ ಆತ್ಮಾಹುತಿ ಬಾಂಬಿಂಗ್ ನಡೆದ 100 ತಾಸಿನೊಳಗೆ ಕಾಶ್ಮೀರದಲ್ಲಿ ಕಾರ್ಯಾಚರಿಸುತ್ತಿದ್ದ ಜೈಶ್ ಎ ಮೊಹಮ್ಮದ್ ಸಂಘಟನೆಯ ಎಲ್ಲ ಉನ್ನತ ಉಗ್ರ ನಾಯಕರನ್ನು ಹತ್ಯೆಗೈಯಲಾಗಿದೆ ಎಂದು ಲೆಫ್ಟಿನೆಂಟ್ ಜನರಲ್ ಕನ್ವಲ್ಜಿತ್ ಸಿಂಗ್ ಧಿಲ್ಲೋನ್ ಅವರು ಇಂದು ಮಂಗಳವಾರ ಸೇನೆ, ಜಮ್ಮು ಕಾಶ್ಮೀರ ಪೊಲೀಸ್ ಮತ್ತು ಸಿಆರ್ಪಿಎಫ್ ಇದರ ಜಂಟಿ ಪತ್ರಿಕಾಗೋಷ್ಠಿಯಲ್ಲಿ ಹೇಳಿದರು.
ಕಾಶ್ಮೀರದಲ್ಲಿ ಜೈಶ್ ಉಗ್ರ ನಾಯಕರು ಪಾಕ್ ಸೇನೆ ಮತ್ತು ಐಎಸ್ಐ ನ ಸಕ್ರಿಯ ಬೆಂಬಲದೊಂದಿಗೆ ಕಾರ್ಯಾಚರಿಸುತ್ತಿದ್ದರು. ಜೆಇಎಂ ಉಗ್ರರಿಗೆ ಪಾಕ್ ಸೇನೆಯೇ ನೇರವಾಗಿ ನಿರ್ದೇಶನ ನೀಡುತ್ತಿತ್ತು ಎಂದು ಧಿಲ್ಲೋನ್ ಹೇಳಿದರು.
ಪಾಕ್ ಉಗ್ರರಿಗೆ ಕಾಶ್ಮೀರದ ಸ್ಥಳೀಯರು, ವಿಶೇಷವಾಗಿ ಯುವಕರು ಬೆಂಬಲ ಕೊಡುತ್ತಿದ್ದಾರೆ. ಈ ರೀತಿಯ ಕೃತ್ಯಗಳಿಗೆ ಮತ್ತು ಹಿಂಸೆಗೆ ಮುಂದಾಗದಂತೆ ಹೆತ್ತವರು ತಮ್ಮ ಮಕ್ಕಳ ಬಗ್ಗೆ ಜಾಗ್ರತೆ ವಹಿಸಿ ಅವರಿಗೆ ಸೂಕ್ತ ತಿಳಿವಳಿಕೆ ನೀಡಬೇಕು ಎಂಬ ಎಚ್ಚರಿಕೆಯನ್ನು ನೀಡಲಾಗಿದೆ ಎಂದವರು ಹೇಳಿದರು.
ಈ ಎಚ್ಚರಿಕೆಯ ಹೊರತಾಗಿಯೂ ಒಂದೊಮ್ಮೆ ಸ್ಥಳೀಯರು ಮತ್ತು ಅವರ ಪುತ್ರರು ಕೈಗೆ ಗನ್ ಎತ್ತಿಕೊಂಡದ್ದೇ ಆದಲ್ಲಿ ಅವರನ್ನು ಕೊಂದು ಮುಗಿಸಲಾಗುವುದು ಎಂಬ ಎಚ್ಚರಿಕೆಯನ್ನೂ ನೀಡಲಾಗಿದೆ ಎಂದು ಧಿಲ್ಲೋನ್ ಹೇಳಿದರು. ಭಯೋತ್ಪಾದಕ ಚಟುವಟಿಕೆಗಳಲ್ಲಿ ತೊಡಗಿಕೊಂಡವರು ಕೂಡಲೇ ಮುಂದೆ ಬಂದು ಶರಣರಾಗಬೇಕು ಎಂದು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…
Singapore ಏರ್ ಲೈನ್ಸ್ ಪೈಲಟ್ ನಂತೆ ಪೋಸ್ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!
Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ
JEE; ಮಹಾರಾಷ್ಟ್ರ ರೈತನ ಮಗ ಮೇನ್ ಟಾಪರ್
Kerala: ಗಲ್ಲು ಶಿಕ್ಷೆಗೆ ಗುರಿಯಾದ ಮಗಳನ್ನು11 ವರ್ಷಗಳ ಬಳಿಕ ಭೇಟಿಯಾದ ತಾಯಿ!
MUST WATCH
ಹೊಸ ಸೇರ್ಪಡೆ
Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ
Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…
Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ
Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ
EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…