ಪುಲ್ವಾಮಾ ಎನ್‌ಕೌಂಟರ್‌: 11 ಸಾವು


Team Udayavani, Dec 16, 2018, 6:00 AM IST

pulwama-encounte.jpg

ಶ್ರೀನಗರ: ದಕ್ಷಿಣ ಕಾಶ್ಮೀರದ ಪುಲ್ವಾಮಾದಲ್ಲಿ ನಡೆದ ಮಹತ್ವದ ಎನ್‌ಕೌಂಟರ್‌ವೊಂದರಲ್ಲಿ ಮೂವರು ಉಗ್ರರನ್ನು ಭದ್ರತಾ ಪಡೆ ಶನಿವಾರ ಹತ್ಯೆಗೈದಿದೆ. ಆದರೆ, ಎನ್‌ಕೌಂಟರ್‌ನ ಸ್ಥಳದಲ್ಲಿ ಜಮಾಯಿಸಿದ ಸ್ಥಳೀಯರು ಭದ್ರತಾ ಪಡೆಯೊಂದಿಗೆ ಘರ್ಷಣೆಗಿಳಿದಿದ್ದು, ಈ ವೇಳೆ ನಡೆದ ಗೋಲಿಬಾರ್‌ಗೆ 7 ಮಂದಿ ನಾಗರಿಕರು ಬಲಿಯಾಗಿದ್ದಾರೆ. ಕಾರ್ಯಾಚರಣೆ ವೇಳೆ ಯೋಧರೊಬ್ಬರು ಹುತಾತ್ಮರಾಗಿದ್ದಾರೆ. ಒಟ್ಟಾರೆ, ಶನಿವಾರದ ಬೆಳವಣಿಗೆಯಲ್ಲಿ 11 ಮಂದಿ ಪ್ರಾಣ ಕಳೆದುಕೊಂಡಿದ್ದು, ಇದು ಭಾರೀ ಚರ್ಚೆಗೆ ಗ್ರಾಸವಾಗಿದೆ.

ನಾಗರಿಕರ ಮೇಲೆ ಗುಂಡಿನ ದಾಳಿ ಆಗಿರುವುದರ ಕುರಿತು ವಿವಿಧ ರಾಜಕೀಯ ಪಕ್ಷಗಳು ಆಕ್ರೋಶ ವ್ಯಕ್ತಪಡಿಸಿವೆ. ರಾಜ್ಯಪಾಲ ಸತ್ಯಪಾಲ್‌ ಮಲಿಕ್‌ ನೇತೃತ್ವದ ಆಡಳಿತವು ಜನರ ಜೀವ ಉಳಿಸುವಲ್ಲಿ ವೈಫ‌ಲ್ಯವಾಗಿದೆ ಎಂದು ಆರೋಪಿಸಿವೆ. ಮತ್ತೂಂದೆಡೆ, ಹತ್ಯೆ ಖಂಡಿಸಿ ಕಾಶ್ಮೀರದ ಪ್ರತ್ಯೇಕತಾವಾದಿಗಳು 3 ದಿನಗಳ ಕಾಲ ಪ್ರತಿಭಟನೆಗೆ ಕರೆ ನೀಡಿದ್ದಾರೆ. ಹೀಗಾಗಿ, ಕಣಿವೆ ರಾಜ್ಯದಲ್ಲಿ ಆತಂಕದ ಸ್ಥಿತಿ ನಿರ್ಮಾಣವಾಗಿದ್ದು, ಶ್ರೀನಗರ ಸೇರಿದಂತೆ ಹಲವು ಭಾಗಗಳಲ್ಲಿ ಮೊಬೈಲ್‌ ಇಂಟರ್ನೆಟ್‌ ಸೇವೆಯನ್ನು ಸ್ಥಗಿತಗೊಳಿಸಲಾಗಿದೆ.

ಆಗಿದ್ದೇನು: ಪುಲ್ವಾಮಾ ಜಿಲ್ಲೆಯ ಸಿರ್ನೂ ಎಂಬ ಗ್ರಾಮದಲ್ಲಿ ಮೂವರು ಉಗ್ರರು ಅವಿತಿದ್ದಾರೆ ಎಂದು ಗುಪ್ತಚರ ಮೂಲಗಳು ಮಾಹಿತಿ ನೀಡಿದ್ದವು. ಇದರ ಆಧಾರದಲ್ಲಿ ಭದ್ರತಾ ಪಡೆಯು ಶೋಧ ಕಾರ್ಯ ಆರಂಭಿಸಿತ್ತು. ಕಳೆದ ವರ್ಷದ ಜುಲೈನಲ್ಲಿ ಬಾರಾಮುಲ್ಲಾ ಜಿಲ್ಲೆಯ ಸೇನಾ ಘಟಕದಿಂದ ನಾಪತ್ತೆಯಾಗಿ, ನಂತರ ಉಗ್ರ ಸಂಘಟನೆಗೆ ಸೇರ್ಪಡೆಯಾಗಿದ್ದ ಮಾಜಿ ಯೋಧ ಝಹೂರ್‌ ಥೋಕರ್‌ ಕೂಡ ಈ ಮೂವರು ಉಗ್ರರ ಪೈಕಿ ಒಬ್ಬನಾಗಿದ್ದ. ಭದ್ರತಾ ಪಡೆ ಮತ್ತು ಉಗ್ರರ ನಡುವೆ ಸುಮಾರು 25 ನಿಮಿಷಗಳ ಕಾಲ ಗುಂಡಿನ ಚಕಮಕಿ ನಡೆದು, ಕೊನೆಗೆ ಥೋಕರ್‌ ಸೇರಿದಂತೆ ಮೂವರು ಉಗ್ರರನ್ನೂ ಹೊಡೆದುರುಳಿಸುವಲ್ಲಿ ಭದ್ರತಾ ಪಡೆ ಯಶಸ್ವಿಯಾಯಿತು. 

ಆದರೆ, ಎನ್‌ಕೌಂಟರ್‌ ಇನ್ನೇನು ಮುಗಿಯುತ್ತದೆ ಎನ್ನುವಷ್ಟರಲ್ಲಿ ಅಲ್ಲಿಗೆ ಧಾವಿಸಿದ ಜನರು, ಏಕಾಏಕಿ ಸೇನಾ ವಾಹನಗಳ ಮೇಲೆ ಹತ್ತಿ ದಾಂದಲೆ ಉಂಟುಮಾಡಿದರು. ಇದರಿಂದ ಯೋಧರು ತೀವ್ರ ಗೊಂದಲಕ್ಕೆ ಒಳಗಾದರು. ಕೂಡಲೇ ಎನ್‌ಕೌಂಟರ್‌ ಸ್ಥಳ ಬಿಟ್ಟು ತೆರಳುವಂತೆ ಅಲ್ಲಿದ್ದ ನಾಗರಿಕರಿಗೆ ಎಚ್ಚರಿಕೆ ನೀಡಿದರು. ಆದರೂ, ಬಗ್ಗದ ಪ್ರತಿಭಟನಾಕಾರರು ಘರ್ಷಣೆಗಿಳಿದರು. ಈ ವೇಳೆ, ಭದ್ರತಾ ಪಡೆ ಸಿಬ್ಬಂದಿಯು ಸ್ಥಳೀಯರನ್ನು ಚದುರಿಸಲೆಂದು ಗೋಲಿಬಾರ್‌ ನಡೆಸಿದ್ದು, ಗುಂಡಿನ ದಾಳಿಗೆ 7 ಮಂದಿ ನಾಗರಿಕರು ಸ್ಥಳದಲ್ಲೇ ಅಸುನೀಗಿದರು. 12ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದು, ಒಬ್ಬನ ಸ್ಥಿತಿ ಚಿಂತಾಜನಕವಾಗಿದೆ ಎಂದು ಮೂಲಗಳು ತಿಳಿಸಿವೆ.

ಯೋಧ ಹುತಾತ್ಮ:
ಕಾರ್ಯಾಚರಣೆ ವೇಳೆ ಯೋಧರೊಬ್ಬರು ಹುತಾತ್ಮರಾಗಿದ್ದು, ಗಾಯಗೊಂಡಿರುವ ಇಬ್ಬರು ಸೈನಿಕರ ಸ್ಥಿತಿ ಗಂಭೀರವಾಗಿದೆ ಎಂದು ಸೇನಾ ಮೂಲಗಳು ಹೇಳಿವೆ. 

ಕಳೆದ 6 ತಿಂಗಳಿಂದಲೂ ದಕ್ಷಿಣ ಕಾಶ್ಮೀರವು ಆತಂಕದಲ್ಲೇ ದಿನ ದೂಡುತ್ತಿದೆ. ರಾಜ್ಯಪಾಲರ ಆಡಳಿತದಿಂದ ನಾವು ನಿರೀಕ್ಷಿಸಿದ್ದು ಇದನ್ನೇನಾ? ಇನ್ನು ಏನೇ ತನಿಖೆ ನಡೆಸಿದರೂ ಮೃತಪಟ್ಟಿರುವ ಅಮಾಯಕರ ಜೀವವನ್ನು ಮರಳಿಸಲು ಸಾಧ್ಯವೇ? ತನ್ನದೇ ಜನರನ್ನು ಕೊಲ್ಲುವ ಮೂಲಕ ಯಾವುದೇ ದೇಶವು ಯುದ್ಧ ಗೆಲ್ಲಲು ಸಾಧ್ಯವಿಲ್ಲ.
– ಮೆಹಬೂಬಾ ಮುಫ್ತಿ, ಪಿಡಿಪಿ ಮುಖ್ಯಸ್ಥೆ, ಮಾಜಿ ಸಿಎಂ

ಕಾಶ್ಮೀರದಲ್ಲಿ ಮತ್ತೂಂದು ರಕ್ತಸಿಕ್ತ ವಾರಾಂತ್ಯ. ಅತ್ಯಂತ ಕೆಟ್ಟದಾಗಿ ನಡೆಸಲಾದ ಎನ್‌ಕೌಂಟರ್‌ ಇದು. ಎನ್‌ಕೌಂಟರ್‌ ಸ್ಥಳದಲ್ಲಿನ ಪ್ರತಿಭಟನಾಕಾರರನ್ನು ಹೇಗೆ ನಿಭಾಯಿಸಬೇಕು ಎಂಬುದನ್ನು ಯಾಕೆ ಯಾರೂ ಕಲಿಯುತ್ತಿಲ್ಲ? 
– ಒಮರ್‌ ಅಬ್ದುಲ್ಲಾ, ಮಾಜಿ ಸಿಎಂ

ಮೂವರು ಉಗ್ರರನ್ನು ಕೊಲ್ಲುವ ಸಲುವಾಗಿ ನೀವು 7 ನಾಗರಿಕರನ್ನು ಹತ್ಯೆಗೈಯ್ಯುತ್ತೀರಿ ಎಂದಾದರೆ, ನಾವು ನಿರ್ಭೀತಿಯ ರಾಜ್ಯವನ್ನು ನೋಡಲು ಸಾಧ್ಯವೇ ಇಲ್ಲ.
– ಸಜ್ಜದ್‌ ಲೋನ್‌, ಮಾಜಿ ಸಚಿವ

ಯಾರೀತ ಥೋಕರ್‌?
ಜಮ್ಮು-ಕಾಶ್ಮೀರದವನೇ ಆದ ಝಹೂರ್‌ ಥೋಕರ್‌ ಸೇನೆಯಲ್ಲಿ ಸೇವೆ ಸಲ್ಲಿಸುತ್ತಿದ್ದ. ಬಾರಾಮುಲ್ಲಾ ಜಿಲ್ಲೆಯ ಸೇನಾ ಘಟಕದಲ್ಲಿ ನಿಯೋಜನೆಗೊಂಡಿದ್ದ. ಕಳೆದ ವರ್ಷದ ಜುಲೈನಲ್ಲಿ ಈತ ಏಕಾಏಕಿ ಘಟಕದಿಂದ ನಾಪತ್ತೆಯಾಗಿದ್ದ. ಅಷ್ಟೇ ಅಲ್ಲ, ತನ್ನೊಂದಿಗೆ ಸರ್ವೀಸ್‌ ರೈಫ‌ಲ್‌ ಮತ್ತು ಮೂರು ಮ್ಯಾಗಜಿನ್‌ಗಳನ್ನೂ ಹೊತ್ತೂಯ್ದಿದ್ದ. ನಂತರ ಥೋಕರ್‌ ಉಗ್ರ ಸಂಘಟನೆಗೆ ಸೇರ್ಪಡೆಗೊಂಡ ವಿಚಾರ ಬೆಳಕಿಗೆ ಬಂದಿತ್ತು. ಪುಲ್ವಾಮಾ ಜಿಲ್ಲೆಯಲ್ಲಿ ನಡೆದ ಹಲವು ವಿಧ್ವಂಸಕ ಕೃತ್ಯಗಳಲ್ಲೂ ಈತ ಭಾಗಿಯಾಗಿದ್ದ. ಶನಿವಾರದ ಎನ್‌ಕೌಂಟರ್‌ನಲ್ಲಿ ಥೋಕರ್‌ ಸೇರಿದಂತೆ ಮೂವರು ಉಗ್ರರನ್ನು ಸದೆಬಡಿಯಲಾಗಿದ್ದು, ಇಬ್ಬರು ಗುರುತು ಇನ್ನೂ ಬಹಿರಂಗವಾಗಿಲ್ಲ.

3 ದಿನಗಳ ಪ್ರತಿಭಟನೆ
ಸೈಯದ್‌ ಅಲಿ ಶಾ ಗಿಲಾನಿ, ಮಿರ್ವೇಜ್‌ ಉಮರ್‌ ಫಾರೂಕ್‌ ಮತ್ತು ಮೊಹಮ್ಮದ್‌ ಯಾಸೀನ್‌ ಮಲಿಕ್‌ ಮತ್ತಿತರ ಪ್ರತ್ಯೇಕತಾವಾದಿಗಳ ಒಕ್ಕೂಟವು (ಜಾಯಿಂಟ್‌ ರೆಸಿಸ್ಟೆನ್ಸ್‌ ಲೀಡರ್‌ಶಿಪ್‌) ಶನಿವಾರದ ಘಟನೆ ಖಂಡಿಸಿ 3 ದಿನಗಳ ಕಾಲ ಪ್ರತಿಭಟನೆಗೆ ಕರೆ ನೀಡಿದೆ. ಈ ಕುರಿತು ಟ್ವೀಟ್‌ ಮಾಡಿರುವ ಮಿರ್ವೇಜ್‌, ಭಾರತ ಸರ್ಕಾರವು ಸಶಸ್ತ್ರ ಪಡೆಗಳನ್ನು ಬಳಸಿ ಕಾಶ್ಮೀರಿಗರನ್ನು ಕೊಲ್ಲಲು ನಿರ್ಧರಿಸಿದೆ. ಸೋಮವಾರ ಕಣಿವೆ ರಾಜ್ಯದ ಜನರು ಬಾದಾಮಿ ಬಾಗ್‌ ಸೇನಾ ಕಂಟೋನ್ಮೆಂಟ್‌ಗೆ ಪ್ರತಿಭಟನಾ ಮೆರವಣಿಗೆ ನಡೆಸುತ್ತೇವೆ. ಪ್ರತಿ ದಿನ ನಮ್ಮನ್ನು ಕೊಲ್ಲುವ ಬದಲು, ಒಂದೇ ಬಾರಿಗೆ ನಮ್ಮೆಲ್ಲರನ್ನೂ ಸಾಯಿಸಿಬಿಡಿ ಎಂದು ಕೇಳಿಕೊಳ್ಳುತ್ತೇವೆ ಎಂದು ಹೇಳಿದ್ದಾರೆ.

ಟಾಪ್ ನ್ಯೂಸ್

14-uv-fusion

UV Fusion: ಮುದ ನೀಡಿದ ಕೌದಿ

Pleasure Squad: ತನ್ನ ಸುಖಕ್ಕಾಗಿ ಪ್ರತಿವರ್ಷ 25 ಹುಡುಗಿಯರನ್ನು ಆಯ್ಕೆಮಾಡುವ ಕಿಮ್ ಜಾಂಗ್!

Pleasure Squad: ತನ್ನ ಸುಖಕ್ಕಾಗಿ ಪ್ರತಿವರ್ಷ 25 ಹುಡುಗಿಯರನ್ನು ಆಯ್ಕೆಮಾಡುವ ಕಿಮ್ ಜಾಂಗ್!

Salaar: ಜಪಾನ್‌ನಲ್ಲಿ ಈ ತಿಂಗಳು ತೆರೆಕಾಣಲಿದೆ ಪ್ರಭಾಸ್‌ – ಪ್ರಶಾಂತ್‌ ನೀಲ್‌  ʼಸಲಾರ್‌ʼ

Salaar: ಜಪಾನ್‌ನಲ್ಲಿ ಈ ತಿಂಗಳು ತೆರೆಕಾಣಲಿದೆ ಪ್ರಭಾಸ್‌ – ಪ್ರಶಾಂತ್‌ ನೀಲ್‌ ʼಸಲಾರ್‌ʼ

12-uv-fusion

Spray fans: ಬಿಸಿ ಗಾಳಿಯೂ ತಂಪಾಯ್ತು

ಕಳ್ಳರು & ದರೋಡೆಕೋರರ ಗ್ಯಾಂಗ್‌ ಚುಚ್ಚಿದ್ದ ವಿಷಕ್ಕೆ ಪೊಲೀಸ್‌ ಕಾನ್ಸ್‌ ಟೇಬಲ್‌ ಮೃತ್ಯು

ಕಳ್ಳರು & ದರೋಡೆಕೋರರ ಗ್ಯಾಂಗ್‌ ಚುಚ್ಚಿದ್ದ ವಿಷಕ್ಕೆ ಪೊಲೀಸ್‌ ಕಾನ್ಸ್‌ ಟೇಬಲ್‌ ಮೃತ್ಯು

ಗುಜರಾತ್ ನಿಂದ ಓಡಿ ಹೋದ 12 ಉದ್ಯಮಿಗಳ ಬಗ್ಗೆ ಮಾತನಾಡಿ: ಮೋದಿಗೆ ಲಾಡ್ ಸವಾಲು

Dharwad; ಗುಜರಾತ್ ನಿಂದ ಓಡಿ ಹೋದ 12 ಉದ್ಯಮಿಗಳ ಬಗ್ಗೆ ಮಾತನಾಡಿ: ಮೋದಿಗೆ ಲಾಡ್ ಸವಾಲು

Kidnapped: ಹಾಡ ಹಗಲೇ ಮಹಿಳೆಯಿಂದ ಹೋಟೆಲ್ ಮಾಲೀಕನ ಮಗನ ಅಪಹರಣ: CCTVಯಲ್ಲಿ ದೃಶ್ಯ ಸೆರೆ

Kidnapped: ಹಾಡ ಹಗಲೇ ಮಹಿಳೆಯಿಂದ ಹೋಟೆಲ್ ಮಾಲೀಕನ ಮಗನ ಅಪಹರಣ: CCTVಯಲ್ಲಿ ದೃಶ್ಯ ಸೆರೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕಳ್ಳರು & ದರೋಡೆಕೋರರ ಗ್ಯಾಂಗ್‌ ಚುಚ್ಚಿದ್ದ ವಿಷಕ್ಕೆ ಪೊಲೀಸ್‌ ಕಾನ್ಸ್‌ ಟೇಬಲ್‌ ಮೃತ್ಯು

ಕಳ್ಳರು & ದರೋಡೆಕೋರರ ಗ್ಯಾಂಗ್‌ ಚುಚ್ಚಿದ್ದ ವಿಷಕ್ಕೆ ಪೊಲೀಸ್‌ ಕಾನ್ಸ್‌ ಟೇಬಲ್‌ ಮೃತ್ಯು

Kidnapped: ಹಾಡ ಹಗಲೇ ಮಹಿಳೆಯಿಂದ ಹೋಟೆಲ್ ಮಾಲೀಕನ ಮಗನ ಅಪಹರಣ: CCTVಯಲ್ಲಿ ದೃಶ್ಯ ಸೆರೆ

Kidnapped: ಹಾಡ ಹಗಲೇ ಮಹಿಳೆಯಿಂದ ಹೋಟೆಲ್ ಮಾಲೀಕನ ಮಗನ ಅಪಹರಣ: CCTVಯಲ್ಲಿ ದೃಶ್ಯ ಸೆರೆ

Rahul Gandhiಯನ್ನು ಭಾರತದ ಪ್ರಧಾನಿ ಮಾಡಲು ಪಾಕ್‌ ಉತ್ಸುಕವಾಗಿದೆ: ಪ್ರಧಾನಿ ಮೋದಿ

Rahul Gandhiಯನ್ನು ಭಾರತದ ಪ್ರಧಾನಿ ಮಾಡಲು ಪಾಕ್‌ ಉತ್ಸುಕವಾಗಿದೆ: ಪ್ರಧಾನಿ ಮೋದಿ

Delhi ಮಹಿಳಾ ಆಯೋಗದ 223 ಉದ್ಯೋಗಿಗಳ ವಜಾ: ಲೆ.ಗವರ್ನರ್‌ ಆದೇಶದಲ್ಲೇನಿದೆ?

Delhi ಮಹಿಳಾ ಆಯೋಗದ 223 ಉದ್ಯೋಗಿಗಳ ವಜಾ: ಲೆ.ಗವರ್ನರ್‌ ಆದೇಶದಲ್ಲೇನಿದೆ?

Video: Gymನಲ್ಲಿ ವರ್ಕ್ ಔಟ್ ಮಾಡುತ್ತಿದ್ದ ವ್ಯಕ್ತಿ ಇದ್ದಕಿದ್ದಂತೆ ಕುಸಿದು ಬಿದ್ದು ಮೃತ್ಯು

Video: Gymನಲ್ಲಿ ವರ್ಕ್ ಔಟ್ ಮಾಡುತ್ತಿದ್ದ ವ್ಯಕ್ತಿ ಇದ್ದಕಿದ್ದಂತೆ ಕುಸಿದು ಬಿದ್ದು ಮೃತ್ಯು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

14-uv-fusion

UV Fusion: ಮುದ ನೀಡಿದ ಕೌದಿ

Pleasure Squad: ತನ್ನ ಸುಖಕ್ಕಾಗಿ ಪ್ರತಿವರ್ಷ 25 ಹುಡುಗಿಯರನ್ನು ಆಯ್ಕೆಮಾಡುವ ಕಿಮ್ ಜಾಂಗ್!

Pleasure Squad: ತನ್ನ ಸುಖಕ್ಕಾಗಿ ಪ್ರತಿವರ್ಷ 25 ಹುಡುಗಿಯರನ್ನು ಆಯ್ಕೆಮಾಡುವ ಕಿಮ್ ಜಾಂಗ್!

Koppal Lok Sabha Constituency: ಹಿಟ್ನಾಳ್‌ಗೆ ಹೊಸ ಮುಖ ಡಾ| ಕ್ಯಾವಟರ್‌ ಸವಾಲು

Koppal Lok Sabha Constituency: ಹಿಟ್ನಾಳ್‌ಗೆ ಹೊಸ ಮುಖ ಡಾ| ಕ್ಯಾವಟರ್‌ ಸವಾಲು

Raichur Lok Sabha Constituency: ಬಿಸಿಲೂರಿನಲ್ಲಿ ಕಾವೇರಿದ “ನಾಯಕ’ತ್ವದ ಹೋರಾಟ

Raichur Lok Sabha Constituency: ಬಿಸಿಲೂರಿನಲ್ಲಿ ಕಾವೇರಿದ “ನಾಯಕ’ತ್ವದ ಹೋರಾಟ

13-uv-fusion

UV Fusion: ನಾವು ನಮಗಾಗಿ ಬದುಕುತ್ತಿರುವುದು ಎಷ್ಟು ಹೊತ್ತು?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.