ಓದಲೆಂದು ರೂಮಿಗೆ ಹೋದವಳು ಪ್ರಿಯಕರನನ್ನೇ ಚಾಕುವಿನಿಂದ ಇರಿದು ಕೊಂದಳು…
Team Udayavani, May 31, 2023, 7:44 PM IST
ಪುಣೆ: ಯುವತಿಯೊಬ್ಬಳು ತನ್ನ ಪ್ರಿಯಕರನನ್ನು ಚಾಕುವಿನಿಂದ ಇರಿದು ಕೊಂದ ಆಘಾತಕಾರಿ ಘಟನೆ ವಾಘೋಲಿ ಪರಿಸರದಲ್ಲಿ ಸಂಭವಿಸಿದ್ದು, ಈ ಪ್ರಕರಣದಲ್ಲಿ ಯುವತಿಯನ್ನು ಪೊಲೀಸರು ಬಂಧಿಸಿದ್ದಾರೆ.
ಈ ಪ್ರಕರಣದಲ್ಲಿ ಆರೋಪಿಯನ್ನು ಅನುಜಾ ಮಹೇಶ್ ಪಾನಾಲೆ (21) ಮತ್ತು ಮೃತ ಯುವಕನನ್ನು ಯಶವಂತ ಮಹೇಶ್ ಮುಂಡೆ (22) ಎಂದು ಗುರುತಿಸಲಾಗಿದೆ.
ಇಬ್ಬರೂ ವಾಘೋಲಿಯ ರೈಸೋನಿ ಕಾಲೇಜಿನ ದ್ವಿತೀಯ ವರ್ಷದ ಕಂಪ್ಯೂಟರ್ ಸೈನ್ಸ್ ವಿದ್ಯಾರ್ಥಿಗಳಾಗಿದ್ದರು. ಯಶವಂತ್ ಮತ್ತು ಅನುಜಾ ಕಳೆದ ಒಂದು ವರ್ಷದಿಂದ ಪರಿಚಿತರು. ಆದರೆ, ಯಶವಂತ್ ಆಕೆಗೆ ಹಲವು ಬಾರಿ ಕಿರುಕುಳ ನೀಡುತ್ತಿದ್ದ. ಆಕೆಯ ಬಗ್ಗೆ ನಿರಂತರ ಸಂಶಯ ಪಡುತ್ತಿದ್ದ. ಈ ಕಾರಣಕ್ಕಾಗಿ ಇಬ್ಬರು ನಿರಂತರ ಜಗಳವಾಡುತ್ತಿದ್ದರು ಎನ್ನಲಾಗಿದೆ.
ರವಿವಾರ ಅನುಜಾ ಯಶವಂತ್ ಇದ್ದ ಹಾಸ್ಟೆಲ್ಗೆ ಓದಲು ಹೋಗಿದ್ದಳು. ಸೋಮವಾರ ಬೆಳಗ್ಗೆ ಅದೇ ಸ್ಥಳದಲ್ಲಿ ಇಬ್ಬರ ನಡುವೆ ಮತ್ತೆ ಜಗಳ ನಡೆದಿದೆ. ಆ ಜಗಳದಲ್ಲಿ ಅನುಜಾ ತರಕಾರಿ ಕಟ್ಟರ್ನಿಂದ ಯಶವಂತ್ ಎದೆ ಮತ್ತು ಹೊಟ್ಟೆಗೆ ಇರಿದಿದ್ದಾಳೆ. ಈ ದಾಳಿಯಲ್ಲಿ ಯಶವಂತ್ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಯಶವಂತ್ ಹತ್ಯೆಯ ನಂತರ ಅನುಜಾ ತನ್ನ ಕೈಯ ನರ ಕತ್ತರಿಸಿಕೊಂಡಳು. ಗಾಬರಿಯಿಂದ ಹೊರಗೆ ಬಂದು ಹಾಸ್ಟೆಲ್ನ ಬೆಂಚಿನ ಮೇಲೆ ಕುಳಿತ್ತಿದ್ದಳು.
ಅನುಜಾ ಕೈ ತುಂಬಾ ರಕ್ತಸ್ರಾವವಾಗುವುದನ್ನು ನೋಡಿದ ಹಾಸ್ಟೆಲ್ ಯುವಕರು ಕೂಡಲೇ ಆಸ್ಪತ್ರೆಗೆ ದಾಖಲಿಸಿದ್ದು, ಪ್ರಾಣಪಾಯದಿಂದ ಪಾರಾಗಿದ್ದಾಳೆ. ಯಶವಂತ್ನ ಹತ್ಯೆ ಹಾಸ್ಟೆಲ್ನಲ್ಲಿ ಸಂಚಲನ ಮೂಡಿಸಿತ್ತು. ಬಳಿಕ ಲೋಣಿಕಂದ ಪೊಲೀಸರು ಸ್ಥಳಕ್ಕೆ ಧಾವಿಸಿ ಯಶವಂತ್ ಶವವನ್ನು ವಶಕ್ಕೆ ಪಡೆದು ಮರಣೋತ್ತರ ಪರೀಕ್ಷೆಗಾಗಿ ಆಸ್ಪತ್ರೆಗೆ ರವಾನಿಸಿದ್ದಾರೆ. ಈ ಪ್ರಕರಣದಲ್ಲಿ ಪೊಲೀಸರು ಅನುಜಾ ಅವರನ್ನು ಬಂಧಿಸಿದ್ದಾರೆ. ಆಕೆಯನ್ನು ವಿಚಾರಣೆ ನಡೆಸಿದಾಗ ಆತನ ನಿರಂತರ ಸಂಶಯಕ್ಕೆ ಮಾನಸಿಕ ರೋಸಿಹೋಗಿ ಯಶವಂತ್ನನ್ನು ಕೊಲೆ ಮಾಡಿರುವುದಾಗಿ ಒಪ್ಪಿಕೊಂಡಿದ್ದಾಳೆ.
ಇದನ್ನೂ ಓದಿ: Mumbai ಮಾಡೆಲ್ ಮೇಲೆ ಅತ್ಯಾಚಾರ; ಮತಾಂತರಕ್ಕೆ ಒತ್ತಾಯ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಏ.26ರಂದು 2ನೇ ಹಂತದ ಚುನಾವಣೆ;ರಾಹುಲ್, ತರೂರ್, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ
EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…
Singapore ಏರ್ ಲೈನ್ಸ್ ಪೈಲಟ್ ನಂತೆ ಪೋಸ್ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!
Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ
JEE; ಮಹಾರಾಷ್ಟ್ರ ರೈತನ ಮಗ ಮೇನ್ ಟಾಪರ್
MUST WATCH
ಹೊಸ ಸೇರ್ಪಡೆ
INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್
ಹೆಸ್ಕತ್ತೂರು ಕಟ್ಟಿನಬುಡ: ಕೃಷಿಗೆ ಆಸರೆಯಾಗದ ವಾರಾಹಿ ಕಾಲುವೆ ನೀರು!
Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ
WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್ ಮೆಟ್ಟಿಲೇರಿದ ಪ್ರಕರಣ, ಏನಿದು?
ಏ.26ರಂದು 2ನೇ ಹಂತದ ಚುನಾವಣೆ;ರಾಹುಲ್, ತರೂರ್, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ