ಮಹಿಳೆಯ ಆತ್ಮಹತ್ಯೆಗೆ ಕಾರಣವಾಯ್ತು ‘ಪಾನಿ ಪುರಿ’
Team Udayavani, Sep 1, 2021, 2:47 PM IST
ಮುಂಬೈ : 23 ವರ್ಷದ ಗೃಹಿಣಿಯೋರ್ವಳು ‘ಪಾನಿ ಪುರಿ’ ವಿಷಯವಾಗಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮುಂಬೈನಲ್ಲಿ ಮಹಾರಾಷ್ಟ್ರದ ಪುಣೆಯಲ್ಲಿ ನಡೆದಿದೆ. ಪ್ರತಿಕ್ಷಾ ಸರವಾಡೆ (ವ.23) ಪ್ರಾಣ ಕಳೆದುಕೊಂಡ ಮಹಿಳೆ.
2019 ರಲ್ಲಿ ಅಂಬೇಗಾಂವ್ ನಿವಾಸಿ ಗಹಿನಿನಾಥ್ ಜೊತೆ ಪ್ರತಿಕ್ಷಾ ಅವರ ವಿವಾಹ ನಡೆದಿತ್ತು. ದಾಂಪತ್ಯ ಜೀವನ ಚನ್ನಾಗಿ ನಡೆದಿತ್ತಾದರೂ ಆಗಾಗ ಸಣ್ಣಪುಟ್ಟ ಜಗಳವಾಗುತ್ತಿದ್ದವು. ಕಳೆದ ಶುಕ್ರವಾರವೂ ಈ ದಂಪತಿ ನಡುವೆ ಜಗಳ ನಡೆದಿದೆ. ಪರಸ್ಪರ ಕಿತ್ತಾಡಿಕೊಂಡ ಬಳಿಕ ವಿಷ ಸೇವಿಸಿ ಪ್ರತಿಕ್ಷಾ ಆತ್ಮಹತ್ಯೆ ಯತ್ನಿಸಿದ್ದಳು. ಕೂಡಲೇ ಅವಳನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗಿತ್ತು. ಆದರೆ, ಚಿಕಿತ್ಸೆ ಫಲಿಸದೆ ಭಾನುವಾರ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾಳೆ ಎಂದು ಪೊಲೀಸರು ತಿಳಿಸಿದ್ದಾರೆ.
ಆತ್ಮಹತ್ಯೆಗೆ ಕಾರಣವಾಯ್ತು ‘ಪಾನಿಪುರಿ’ :
ಇನ್ನು ಪ್ರತಿಕ್ಷಾ ಆತ್ಮಹತ್ಯೆ ಮಾಡಿಕೊಳ್ಳಲು ‘ಪಾನಿ ಪುರಿ’ ವಿಚಾರ ಕಾರಣ ಎನ್ನುವುದು ಪೊಲೀಸ್ ತನಿಖೆ ವೇಳೆ ಬೆಳೆಕಿಗೆ ಬಂದಿದೆ. ಜಗಳ ನಡೆದ ದಿನದಂದು ಈಕೆಗೆ ತಿಳಿಸದೆ ಪತಿ ಪಾನಿಪುರಿ ಪಾರ್ಸೆಲ್ ತಂದಿದ್ದ. ಮನೆಯಲ್ಲಿ ಅಡುಗೆ ಮಾಡಿದ್ದರೂ ಕೂಡ ಗಂಡ ತನಗೆ ಒಂದೂ ಮಾತು ಹೇಳದೆ ಪಾನಿ ಪುರಿ ತಂದಿದ್ದಕ್ಕೆ ಪ್ರತಿಕ್ಷಾ ಕೋಪಗೊಂಡು ಜಗಳ ಶುರುವಿಟ್ಟುಕೊಂಡಳು. ಅದೇ ಕಾರಣಕ್ಕೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಳು ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ
CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ
ಏ.26ರಂದು 2ನೇ ಹಂತದ ಚುನಾವಣೆ;ರಾಹುಲ್, ತರೂರ್, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ
EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…
Singapore ಏರ್ ಲೈನ್ಸ್ ಪೈಲಟ್ ನಂತೆ ಪೋಸ್ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!
MUST WATCH
ಹೊಸ ಸೇರ್ಪಡೆ
Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ
Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ
Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !
EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ
Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ