ಚುನಾವಣೆಯಲ್ಲಿ ದೇಶ ವಿರೋಧಿಗಳ ಬೆಂಬಲಿಗರಿಗೆ ತಕ್ಕ ಪಾಠ ಕಲಿಸಿ: ಪ್ರಧಾನಿ ಮೋದಿ
ದಿಲ್ಲಿಯಲ್ಲಿನ ನಕಾರಾತ್ಮಕ ರಾಜಕೀಯ ಅಂತ್ಯಗೊಳ್ಳಬೇಕಾಗಿದೆ.
Team Udayavani, Feb 4, 2020, 7:11 PM IST
ನವದೆಹಲಿ: ಯಾರು ದೇಶ ವಿರೋಧಿ ಪಡೆಗಳನ್ನು ಬೆಂಬಲಿಸುತ್ತಾರೋ ಅಂತಹವರಿಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು ಎಂದು ಪ್ರಧಾನಿ ನರೇಂದ್ರ ಮೋದಿ ದಿಲ್ಲಿ ಮತದಾರರಿಗೆ ಕರೆ ನೀಡಿದ್ದಾರೆ.
ದಿಲ್ಲಿ ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ದ್ವಾರಕಾದಲ್ಲಿ ಬೃಹತ್ ರಾಲಿಯನ್ನು ಉದ್ದೇಶಿಸಿ ಮಾತನಾಡಿದ ಅವರು, ಆಮ್ ಆದ್ಮಿ ಪಕ್ಷದ ವಿರುದ್ಧ ವಾಗ್ದಾಳಿ ನಡೆಸಿದರು. ದಿಲ್ಲಿ ಅಭಿವೃದ್ದಿ ಕುರಿತ ನೀತಿಗಳ ಬಗ್ಗೆ ಕಳೆದ ಆರು ವರ್ಷಗಳಿಂದ ಕೇಂದ್ರ ಸರ್ಕಾರ ಮುತುವರ್ಜಿ ವಹಿಸಿದೆ ಎಂದರು.
ವಿರೋಧ ಪಕ್ಷಗಳು ರಾಷ್ಟ್ರೀಯ ಭದ್ರತೆಯನ್ನು ಪ್ರಶ್ನಿಸುತ್ತವೆ…ಆದರೆ ಇವರು ದಿಲ್ಲಿಯಲ್ಲಿ ಸಿಎಎ ವಿರೋಧಿ ಪ್ರತಿಭಟನಾಕಾರರಿಗೆ ಬೆಂಬಲ ನೀಡುತ್ತಾರೆ ಎಂದು ಚಾಟಿ ಬೀಸಿದರು. ಕೇಂದ್ರ ಸರ್ಕಾರ ಬಡವರಿಗಾಗಿ ನೀಡುವ ಯೋಜನೆಗಳನ್ನು ಕೇಜ್ರಿವಾಲ್ ಸರ್ಕಾರ ತಲುಪದಂತೆ ಮಾಡಿದೆ ಎಂದು ಮೋದಿ ಆರೋಪಿಸಿದರು.
ದಿಲ್ಲಿಯಲ್ಲಿನ ನಕಾರಾತ್ಮಕ ರಾಜಕೀಯ ಅಂತ್ಯಗೊಳ್ಳಬೇಕಾಗಿದೆ. ಅಲ್ಲದೇ ದಿಲ್ಲಿಯ ಜನರಿಗೆ ಕೇಂದ್ರದ ಎಲ್ಲಾ ಯೋಜನೆಯ ಲಾಭ ದೊರೆಯುವಂತಾಗಬೇಕು ಎಂದು ಈ ಸಂದರ್ಭದಲ್ಲಿ ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ
Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ
Loksabha Election; ದೇಶದಲ್ಲಿ ಹಂತ-1: ಮತ ಇಂದು
EVM ಯಾವ ಗುಂಡಿ ಒತ್ತಿದರೂ ಬಿಜೆಪಿಗೆ ಮತ: ಭಾರೀ ಚರ್ಚೆ
Cerelac ಶಿಶು ಆಹಾರದಲ್ಲಿ ಹೆಚ್ಚುವರಿ ಸಕ್ಕರೆ ಬೆರೆತಿದೆ: ಗಂಭೀರ ಆರೋಪ
MUST WATCH
ಹೊಸ ಸೇರ್ಪಡೆ
Lok Sabha Election: ಮಠಾಧೀಶರ ಆಶೀರ್ವಾದ ಪಡೆದ ಬಿಜೆಪಿ ಅಭ್ಯರ್ಥಿ ಗಾಯಿತಿ ಸಿದ್ದೇಶ್ವರ
Israel – Iran: ಕ್ಷಿಪಣಿ ದಾಳಿಯ ಮೂಲಕ ಸೇಡು ತೀರಿಸಿಕೊಂಡ ಇಸ್ರೇಲ್; ಎಚ್ಚರಿಕೆ ನೀಡಿದ ಇರಾನ್
Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್ಪಿ
Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ
Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ