ಶಬ್ದಮಾಲಿನ್ಯಕ್ಕೆ ಕಡಿವಾಣ; ಲೌಡ್ ಸ್ಪೀಕರ್ ನಿಷೇಧಿಸಿದ ಪಂಜಾಬ್ ಮತ್ತು ಹರ್ಯಾಣ ಹೈಕೋರ್ಟ್
Team Udayavani, Jul 26, 2019, 4:15 PM IST
ಚಂಡೀಗಢ್: ಶಬ್ದ ಮಾಲಿನ್ಯಕ್ಕೆ ಕಡಿವಾಣ ಹಾಕುವ ನಿಟ್ಟಿನಲ್ಲಿ ಸಾರ್ವಜನಿಕ ಸ್ಥಳಗಳಲ್ಲಿ ಲೌಡ್ ಸ್ಪೀಕರ್ ಬಳಕೆಯನ್ನು ಸಂಪೂರ್ಣವಾಗಿ ನಿಷೇಧಿಸಬೇಕೆಂದು ಪಂಜಾಬ್ ಮತ್ತು ಹರ್ಯಾಣ ಹೈಕೋರ್ಟ್ ಆದೇಶ ನೀಡಿದೆ.
ಧಾರ್ಮಿಕ ಸ್ಥಳಗಳಾದ ದೇವಸ್ಥಾನ, ಮಸೀದಿಗಳು ಹಾಗೂ ಗುರುದ್ವಾರಗಳಲ್ಲಿಯೂ ಜಿಲ್ಲಾಧಿಕಾರಿಗಳ ಲಿಖಿತ ಅನುಮತಿ ಇಲ್ಲದೇ ಲೌಡ್ ಸ್ಪೀಕರ್ ಗಳನ್ನು ಬಳಸುವುದಕ್ಕೆ ನಿರ್ಬಂಧ ಹೇರಿದೆ.
ಬೆಳಗ್ಗೆ 6ಗಂಟೆಯಿಂದ ರಾತ್ರಿ 10ಗಂಟೆವರೆಗೆ ಯಾವುದೇ ಲೌಡ್ ಸ್ಪೀಕರ್ ಆಗಲಿ ಅಥವಾ ಸಂಗೀತ ಸಾಧನಗಳನ್ನು ಬಳಸುವುದಕ್ಕೆ ಅವಕಾಶ ಇಲ್ಲ. ಅಷ್ಟೇ ಅಲ್ಲ ಸಂಗೀತ ರಸಮಂಜರಿ, ಸಂಗೀತ ಕಾರ್ಯಕ್ರಮಗಳಲ್ಲಿ ಶಬ್ದ 10 ಡೆಸಿಬಲ್ಸ್ ಗಿಂತ ಹೆಚ್ಚಾಗಿರಬಾರದು ಎಂದು ಕೋರ್ಟ್ ಆದೇಶ ನೀಡಿದೆ.
ಏತನ್ಮಧ್ಯೆ ವಾರ್ಷಿಕವಾಗಿ ನಡೆಯಲಿರುವ ಧಾರ್ಮಿಕ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳ ಹಿನ್ನೆಲೆಯಲ್ಲಿ 15 ದಿನಗಳ ಕಾಲ ಲೌಡ್ ಸ್ಪೀಕರ್ ಬಳಸಲು ಅವಕಾಶ ನೀಡಿದೆ. ರಾತ್ರಿ 10ರಿಂದ ಮಧ್ಯರಾತ್ರಿವರೆಗೆ ಲೌಡ್ ಸ್ಪೀಕರ್ ಬಳಸಬಹುದಾಗಿದೆ ಎಂದು ಕೋರ್ಟ್ ತಿಳಿಸಿದೆ.
ರಾಜ್ಯದಲ್ಲಿ ಈ ಆದೇಶವನ್ನು ಜಾರಿಗೊಳಿಸುವಂತೆ ಡೈರೆಕ್ಟರ್ ಜನರಲ್ ಆಫ್ ಪೊಲೀಸ್, ಜಿಲ್ಲಾಧಿಕಾರಿಗಳಿಗೆ, ಹಿರಿಯ ಪೊಲೀಸ್ ಅಧಿಕಾರಿಗಳಿಗೆ ಹೈಕೋರ್ಟ್ ಪೀಠದ ನ್ಯಾಯಾಧೀಶರಾದ ರಾಜೀವ್ ಶರ್ಮಾ ಮತ್ತು ಹರೀಂದರ್ ಸಿಂಗ್ ಸಿಧು ನಿರ್ದೇಶನ ನೀಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mahanadi River Tragedy: ಮಗುಚಿದ 50 ಜನರಿದ್ದ ದೋಣಿ; ಇಬ್ಬರು ಸಾವು; ಎಂಟು ಮಂದಿ ನಾಪತ್ತೆ
Loksabha Election; ತಮಿಳುನಾಡಿನಲ್ಲಿ ಮರು ಮತದಾನಕ್ಕೆ ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ಆಗ್ರಹ
UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು
Ban in Singapore; ಎವರೆಸ್ಟ್ ಮಸಾಲಾದಲ್ಲಿ ಕ್ರಿಮಿನಾಶಕ ಅಂಶ?
Gold 10 ಗ್ರಾಂ ಬೆಲೆ 74,100 ರೂ.: ಇದು ನೂತನ ದಾಖಲೆ
MUST WATCH
ಹೊಸ ಸೇರ್ಪಡೆ
Hubli;ತಪ್ಪಿತಸ್ಥರಿಗೆ ಶಿಕ್ಷೆ ಆಗಲೇಬೇಕು: ನೇಹಾ ಮನೆಗೆ ಫಕೀರ ಸಿದ್ಧರಾಮೇಶ್ವರ ಶಿವಯೋಗಿ ಭೇಟಿ
Davanagere; ಗಾಯಿತ್ರಿ ಸಿದ್ದೇಶ್ವರ್ ಅಂತಿಮ ನಾಮಪತ್ರ ಸಲ್ಲಿಕೆ; ಭರ್ಜರಿ ಮೆರವಣಿಗೆ
Rain: ಕಟಪಾಡಿ-ಶಿರ್ವ ರಾಜ್ಯ ಹೆದ್ದಾರಿ; ಮೊದಲ ಮಳೆಯ ಅವಾಂತರ; ರಸ್ತೆ ಕೆಸರುಮಯ
Gadag ಬೆಳ್ಳಂಬೆಳಗ್ಗೆ ವರುಣಾರ್ಭಟ ಆರಂಭ; ಮುಂಗಾರು ನಿರೀಕ್ಷೆ ಹೆಚ್ಚಿಸಿದ ಅಶ್ವಿನಿ ಮಳೆ
Mahanadi River Tragedy: ಮಗುಚಿದ 50 ಜನರಿದ್ದ ದೋಣಿ; ಇಬ್ಬರು ಸಾವು; ಎಂಟು ಮಂದಿ ನಾಪತ್ತೆ