ಕೃಷಿ ಮಸೂದೆಯ ವಿರುದ್ಧ ನಿರ್ಣಯ ಮಂಡಿಸಿದ ಪಂಜಾಬ್ ನ ಅಮರಿಂದರ್ ಸಿಂಗ್ ಸರ್ಕಾರ
Team Udayavani, Oct 20, 2020, 4:19 PM IST
ಚಂಡೀಗಢ: ಕೇಂದ್ರ ಸರ್ಕಾರ ಇತ್ತೀಚೆಗೆ ಜಾರಿಗೆ ತಂದ ಕೃಷಿ ಮಸೂದೆಯ ವಿರುದ್ಧ ಪಂಜಾಬ್ ಸರ್ಕಾರ ವಿಧಾನಸಭೆಯಲ್ಲಿ ನಿರ್ಣಯ ಮಂಡಿಸಿದ್ದಾರೆ. ರೈತರಿಂದ ತೀವ್ರ ವಿರೋಧ ಕಂಡುಬಂದ ಹಿನ್ನಲೆಯಲ್ಲಿ ಪಂಜಾಬ್ ಮುಖ್ಯಮಂತ್ರಿ ಅಮರೀಂದರ್ ಸಿಂಗ್ ಇಂದು ನಿರ್ಣಯ ಮಂಡನೆ ಮಾಡಿದ್ದಾರೆ.
ನೂತನ ಕೃಷಿ ಮಸೂದೆಯ ಸಂಬಂಧಿಸಿದಂತೆ ನಡೆಯುತ್ತಿರುವ ವಿಶೇಷ ಸದನದ ಎರಡನೇ ದಿನವಾದ ಇಂದು ನಿರ್ಣಯ ಮಂಡನೆ ಮಾಡಲಾಗಿದೆ.
ಕೇಂದ್ರದ ಕೃಷಿ ಕಾನೂನುಗಳನ್ನು ವಿರುದ್ಧವಾಗಿ ಮುಖ್ಯಮಂತ್ರಿ ಅಮರೀಂದರ್ ಸಿಂಗ್ ಮೂರು ಮಸೂದೆಗಳನ್ನು ಸದನಕ್ಕೆ ಪರಿಚಯಿಸಿದರು. ಅವುಗಳೆಂದರೆ ರೈತರು ವ್ಯಾಪಾರ ಮತ್ತು ವಾಣಿಜ್ಯ (ಪ್ರಚಾರ ಮತ್ತು ಸೌಲಭ್ಯ) ವಿಶೇಷ ನಿಬಂಧನೆಗಳು ಮತ್ತು ಪಂಜಾಬ್ ತಿದ್ದುಪಡಿ ಮಸೂದೆ 2020, ಅಗತ್ಯ ಸರಕುಗಳು (ವಿಶೇಷ ನಿಬಂಧನೆಗಳು ಮತ್ತು ಪಂಜಾಬ್ ತಿದ್ದುಪಡಿ) ಮಸೂದೆ 2020, ಮತ್ತು ರೈತರು (ಸಬಲೀಕರಣ) ಮತ್ತು ಸಂರಕ್ಷಣೆ) ಬೆಲೆ ಭರವಸೆ ಮತ್ತು ಕೃಷಿ ಸೇವೆಗಳ ಒಪ್ಪಂದ (ವಿಶೇಷ ನಿಬಂಧನೆಗಳು ಮತ್ತು ಪಂಜಾಬ್ ತಿದ್ದುಪಡಿ) ಮಸೂದೆ 2020.
ಇದನ್ನೂ ಓದಿ:ಆಂಧ್ರ ಪ್ರದೇಶದ ಮಹಿಳೆಯ ಕೊಲೆ ಪ್ರಕರಣ : ಪೊಲೀಸರಿಂದ ಆರೋಪಿಯ ಬಂಧನ
ಕೃಷಿ ಕಾನೂನುಗಳು ಸಂವಿಧಾನಕ್ಕೆ ವಿರುದ್ಧವಾಗಿವೆ ಎಂದು ಕರಡು ನಿರ್ಣಯವು ಹೇಳುತ್ತದೆ. ಈ ಶಾಸನಗಳು ಸಂವಿಧಾನದಲ್ಲಿ ಪ್ರತಿಪಾದಿಸಿರುವಂತೆ ರಾಜ್ಯಗಳ ಕಾರ್ಯಗಳು ಮತ್ತು ಅಧಿಕಾರಗಳನ್ನು ಅತಿಕ್ರಮಿಸಲು ನೇರ ದಾಳಿಯಾಗಿದೆ” ಸಿಎಂ ಅಮರೀಂದರ್ ಸಿಂಗ್ ವಿಧಾನಸಭೆಗೆ ತಿಳಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ದೆಹಲಿಯ 50 ಕ್ಕೂ ಹೆಚ್ಚಿನ ಶಾಲೆಗಳಿಗೆ ಬಾಂಬ್ ಬೆದರಿಕೆ ಇ-ಮೇಲ್: ಪೋಷಕರಿಗೆ ಆತಂಕ
W.Bengal; ಮುಸ್ಲಿಂ ಮುನಿಸಿಗೆ ಮಂದಿರಕ್ಕೆ ಬಾರದ ಮಮತಾ: ಅಮಿತ್ ಶಾ
1500 for women: ಆಂಧ್ರದಲ್ಲಿ ಕರ್ನಾಟಕ ಮಾದರಿ ಎನ್ಡಿಎ ಗ್ಯಾರಂಟಿ
Election; ಮೊಹಬ್ಬತ್ ಕೀ ದುಕಾನ್ನಲ್ಲಿ ಫೇಕ್ ವೀಡಿಯೋಗಳು ಮಾರಾಟ: ಮೋದಿ
Supreme Court; ಪತಂಜಲಿ ಆಯ್ತು, ಈಗ ಐಎಂಎ ವಿರುದ್ಧ ಸುಪ್ರೀಂ ಕೋರ್ಟ್ ಗರಂ