ಸಚಿವ ಸ್ಥಾನ ಕಿತ್ತುಕೊಂಡ ಶೇ.1 ಕಮಿಷನ್‌ ಆಸೆ!

ಸಂಪುಟದಿಂದ ಸಿಂಗ್ಲಾರನ್ನು ಕಿತ್ತೂಗೆದ ಪಂಜಾಬ್‌ ಸಿಎಂ

Team Udayavani, May 25, 2022, 1:20 AM IST

ಸಚಿವ ಸ್ಥಾನ ಕಿತ್ತುಕೊಂಡ ಶೇ.1 ಕಮಿಷನ್‌ ಆಸೆ!

ಚಂಡೀಗಢ: ಮಹತ್ವದ ಬೆಳವಣಿಗೆ ಯೊಂ ದರಲ್ಲಿ, ಪಂಜಾಬ್‌ನ ಆರೋಗ್ಯ ಸಚಿವರಾದ ವಿಜಯ್‌ ಸಿಂಗ್ಲಾ ಅವರನ್ನು ಅಲ್ಲಿನ ಮುಖ್ಯಮಂತ್ರಿ ಭಗವಂತ್‌ ಮಾನ್‌, ತಮ್ಮ ಸಂಪುಟದಿಂದ ಕಿತ್ತೂಗೆದಿದ್ದಾರೆ.

ತಮ್ಮ ಇಲಾಖೆಯ ಕಾಮ ಗಾರಿಯೊಂದಕ್ಕೆ ಭಟಿಂಡಾ ಮೂಲದ ಗುತ್ತಿಗೆದಾರನೊಬ್ಬನಿಂದ ಶೇ.1ರಷ್ಟು ಲಂಚ (ಕಮಿಷನ್‌) ಕೇಳಿದ ಆರೋಪ ಅವರ ವಿರುದ್ಧ ಕೇಳಿಬಂದಿತ್ತು. ಪೊಲೀಸರ ಗುಪ್ತ ಕಾರ್ಯಾಚರಣೆಯಲ್ಲಿ ಆ ಆರೋಪ ಸಾಬೀತಾದ ಕೂಡಲೇ ಅವರನ್ನು ಸಚಿವ ಸ್ಥಾನದಿಂದ ವಜಾಗೊಳಿ ಸಲಾಗಿದೆ. ಇದರ ಬೆನ್ನಲ್ಲೇ, ಪಂಜಾಬ್‌ನ ಭ್ರಷ್ಟಾಚಾರ ನಿಗ್ರಹ ದಳ ಸಿಂಗ್ಲಾರನ್ನು ಬಂಧಿಸಿದೆ.

2015ರಲ್ಲಿ ದಿಲ್ಲಿ ಸಿಎಂ ಅರವಿಂದ ಕೇಜ್ರಿವಾಲ್‌, ತಮ್ಮ ಸಂಪುಟದ ಸಚಿವರೊಬ್ಬರು ಇಂಥದ್ದೇ ಪ್ರಕರಣದಲ್ಲಿ ಸಿಲುಕಿದ್ದಾಗ ಅವರನ್ನು ಸಂಪುಟದಿಂದ ವಜಾಗೊಳಿಸಿದ್ದರು. ಪಂಜಾಬ್‌ ಬೆಳವಣಿಗೆ ಬಗ್ಗೆ ಪ್ರತಿಕ್ರಿಯಿಸಿರುವ ಕೇಜ್ರಿವಾಲ್‌, “ಭಗವಂತ್‌ ಬಗ್ಗೆ ಹೆಮ್ಮೆಯಾಗುತ್ತಿದೆ. ಅವರ ನಡೆ ನನ್ನ ಕಣ್ಣಂಚಲ್ಲಿ ನೀರು ತರಿಸಿತು’ ಎಂದಿದ್ದಾರೆ.

ಕೋಡ್‌ವರ್ಡ್‌ ಬಳಸುತ್ತಿದ್ದ ಸಿಂಗ್ಲಾ
ಕೇವಲ 10 ದಿನಗಳ ಹಿಂದಷ್ಟೇ ಸಿಂಗ್ಲಾ ಕಮಿಷನ್‌ ದಂಧೆಯನ್ನು ಗುತ್ತಿಗೆದಾರ ಇಲಾಖೆಯ ಹಿರಿಯ ಅಧಿಕಾರಿಯೊ ಬ್ಬರು ಸಿಎಂ ಮಾನ್‌ ಗಮನಕ್ಕೆ ತಂದಿದ್ದರು. ತತ್‌ಕ್ಷಣವೇ ಕಾರ್ಯೋನ್ಮುಖರಾದ ಮಾನ್‌, ಸಿಂಗ್ಲಾ ಅವರನ್ನು ಸಾಕ್ಷಿ ಸಮೇತ ಹಿಡಿಯುವಂತೆ ಸೂಚಿಸಿದ್ದರು. ಸಿಂಗ್ಲಾ ಅವರು ಗುತ್ತಿಗೆದಾರರ ಬಳಿ ಕಮಿಷನ್‌ ಎಂಬ ಪದದ ಬದಲಿಗೆ ಶುಕ್ರಾನಾ ಎಂದು ಬಳಸುತ್ತಿದ್ದರು. ಹಾಗಾಗಿ ಶುಕ್ರಾನಾಕ್ಕಾಗಿ ಆಗ್ರಹಿಸಿ ಗುತ್ತಿಗೆದಾರನ ಜತೆಗೆ ಸಚಿವರು ಫೋನ್‌ನಲ್ಲಿ ಮಾತನಾಡುತ್ತಿದ್ದ ಕರೆಗಳನ್ನು ಧ್ವನಿಮುದ್ರಣ ಮಾಡಿಕೊಳ್ಳಲಾಯಿತು. ಆ ಧ್ವನಿಮುದ್ರಣಗಳನ್ನು ನಾನಾ ರೀತಿಯಲ್ಲಿ ಪರೀಕ್ಷಿಸಿ ಅದರಲ್ಲಿರುವುದು ಸಚಿವರ ಧ್ವನಿ ಎಂದೇ ಖಾತ್ರಿಪಡಿಸಿ ಕೊಳ್ಳಲಾಯಿತು. ಆನಂತರ ಅದನ್ನು ಮುಖ್ಯಮಂತ್ರಿ ಮಾನ್‌ ಅವರಿಗೆ ಒಪ್ಪಿಸಲಾಯಿತು.

ಇತ್ತೀಚೆಗೆ, ಸಚಿವ ಸಿಂಗ್ಲಾ ಅವರನ್ನು ತಮ್ಮ ಕಚೇರಿಗೆ ಕರೆಯಿಸಿಕೊಂಡ ಮಾನ್‌, ಅವರ ಮುಂದೆಯೇ ಈ ಧ್ವನಿಸುರುಳಿಯನ್ನು ಕೇಳಿಸಿದರು. ಆಗ, ತಬ್ಬಿಬ್ಟಾದ ಸಚಿವರು ತಮ್ಮ ತಪ್ಪನ್ನು ಒಪ್ಪಿಕೊಂಡರು. ಆಗ, ಮೊಹಾಲಿ ಪೊಲೀಸರಿಗೆ ಎಫ್ಐಆರ್‌ ದಾಖಲಿಸುವಂತೆ ಮಾನ್‌ ಆದೇಶಿಸಿದರು. ಎಫ್ಐಆರ್‌ ದಾಖಲಾದ ಅನಂತರ ಈ ಪ್ರಕರಣದ ತನಿಖೆಯನ್ನು ಪಂಜಾಬ್‌ ಪೊಲೀಸ್‌ನ ಭ್ರಷ್ಟಾಚಾರ ನಿಗ್ರಹ ದಳ ಕೈಗೆತ್ತಿಕೊಂಡಿತು. ಅದರ ಬೆನ್ನಲ್ಲೇ ಸಿಂಗ್ಲಾ ಅವರನ್ನು ಬಂಧಿಸಲಾಗಿದೆ.

ಟಾಪ್ ನ್ಯೂಸ್

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

ಏ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂ…ಆದರೆ…

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…

Singapore ಏರ್‌ ಲೈನ್ಸ್‌ ಪೈಲಟ್ ನಂತೆ ಪೋಸ್‌ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!

Singapore ಏರ್‌ ಲೈನ್ಸ್‌ ಪೈಲಟ್ ನಂತೆ ಪೋಸ್‌ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!

Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ

Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ

1-NG

JEE; ಮಹಾರಾಷ್ಟ್ರ ರೈತನ ಮಗ ಮೇನ್‌ ಟಾಪರ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

ಚನ್ನಮ್ಮನ ಕಿತ್ತೂರು: ಮಹಾನ್‌ ಯೋಗಿಗಳು-ಸೂಫಿ ಸಂತರ ನಾಡಿದು- ಶಿಲೇದಾರ

ಚನ್ನಮ್ಮನ ಕಿತ್ತೂರು: ಮಹಾನ್‌ ಯೋಗಿಗಳು-ಸೂಫಿ ಸಂತರ ನಾಡಿದು- ಶಿಲೇದಾರ

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

ಮೊದಲ ಬಾರಿ ಕುಂದಾನಗರಿಯಲ್ಲಿ ಪ್ರಧಾನಿ ಮೋದಿ ವಾಸ್ತವ್ಯ; 28ಕ್ಕೆ ಸಮಾವೇಶ

ಮೊದಲ ಬಾರಿ ಕುಂದಾನಗರಿಯಲ್ಲಿ ಪ್ರಧಾನಿ ಮೋದಿ ವಾಸ್ತವ್ಯ; 28ಕ್ಕೆ ಸಮಾವೇಶ

ಬಿಸಿಲ ಝಳದಿಂದ ಮೈದಾನಗಳು ಖಾಲಿ; ಮಕ್ಕಳ ಆಟಕ್ಕೂ ಉರಿ ಬಿಸಿಲು ಅಡ್ಡಿ!

ಬಿಸಿಲ ಝಳದಿಂದ ಮೈದಾನಗಳು ಖಾಲಿ; ಮಕ್ಕಳ ಆಟಕ್ಕೂ ಉರಿ ಬಿಸಿಲು ಅಡ್ಡಿ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.