ಭ್ರಷ್ಟಾಚಾರ ಆರೋಪ: ಪಂಜಾಬ್ ತೋಟಗಾರಿಕಾ ಸಚಿವ ಫೌಜಾ ಸಿಂಗ್ ರಾಜೀನಾಮೆ
Team Udayavani, Jan 7, 2023, 4:52 PM IST
ನವದೆಹಲಿ: ಭ್ರಷ್ಟಾಚಾರದ ಆರೋಪದ ಹಿನ್ನೆಲೆಯಲ್ಲಿ ಪಂಜಾಬ್ ತೋಟಗಾರಿಕಾ ಸಚಿವ ಫೌಜಾ ಸಿಂಗ್ ಸರಾರೈ ಶನಿವಾರ (ಜನವರಿ 07) ಮುಖ್ಯಮಂತ್ರಿ ಭಗವಂತ್ ಮಾನ್ ಅವರ ಸಂಪುಟಕ್ಕೆ ರಾಜೀನಾಮೆ ನೀಡಿದ್ದಾರೆ.
ಇದನ್ನೂ ಓದಿ;ಕಾಂಗ್ರೆಸ್ ನಾಯಕರು ಬಿಜೆಪಿ ದಲಿತ ವಿರೋಧಿ ಎಂದು ಬಿಂಬಿಸುತ್ತಿದ್ದಾರೆ : ಸಿ.ಟಿ.ರವಿ ಕಿಡಿ
ಮೂಲಗಳ ಪ್ರಕಾರ, ಸಚಿವ ಸ್ಥಾನಕ್ಕೆ ರಾಜೀನಾಮೆ ಕೊಟ್ಟಿರುವುದನ್ನು ಮುಖ್ಯಮಂತ್ರಿ ಭಗವಂತ್ ಮಾನ್ ಸ್ವೀಕರಿಸಿರುವುದಾಗಿ ಮೂಲಗಳು ತಿಳಿಸಿವೆ ಎಂದು ವರದಿಯಾಗಿದೆ. ಖಾಸಗಿ ಕಾರಣ ನೀಡಿ ರಾಜೀನಾಮೆ ನೀಡಿರುವ ಫೌಜಾ ಸಿಂಗ್, ತಾನು ಪಕ್ಷದ ನಿಷ್ಠಾವಂತ ಸೇವಕನಾಗಿರುವುದಾಗಿ ತಿಳಿಸಿದ್ದಾರೆ.
ಇಂದು ಸಂಜೆ ರಾಜಭವನದಲ್ಲಿ ನಡೆಯಲಿರುವ ಸರಳ ಸಭೆಯಲ್ಲಿ ನೂತನ ಸಚಿವ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ ಎಂದು ವರದಿ ಹೇಳಿದೆ. ಸರ್ಕಾರಿ ಅಧಿಕಾರಿಗಳ ನೆರವಿನೊಂದಿಗೆ ಕೆಲವು ಗುತ್ತಿಗೆದಾರರನ್ನು ಟ್ರ್ಯಾಪ್ ಮಾಡಿ ಹಣ ಸುಲಿಯುವ ಸಂಚಿನ ಬಗ್ಗೆ ತಮ್ಮ ಆಪ್ತ ಸಹಾಯಕನ ಜೊತೆ ಫೌಜಾ ಸಿಂಗ್ ಮಾತನಾಡಿರುವ ಆಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿತ್ತು.
ಈ ಆಡಿಯೋ ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್ ಅವರನ್ನು ಇಕ್ಕಟ್ಟಿಗೆ ಸಿಲುಕಿಸಿತ್ತು. ಆದರೆ ತನ್ನನ್ನು ದುರುದ್ದೇಶದಿಂದ ಸಿಲುಕಿಸುವ ನಿಟ್ಟಿನಲ್ಲಿ ಆಡಿಯೋ ಕ್ಲಿಪ್ ಅನ್ನು ಸೃಷ್ಟಿಸಲಾಗಿದೆ ಎಂದು ಸಚಿವ ಸಿಂಗ್ ಸಮಜಾಯಿಷಿ ನೀಡಿದ್ದರು.
ನಿವೃತ್ತ ಪೊಲೀಸ್ ಕಾನ್ಸ್ ಟೇಬಲ್ ಫೌಜಾ ಸಿಂಗ್ ಪಂಜಾಬ್ ವಿಧಾನಸಭಾ ಚುನಾವಣೆಯಲ್ಲಿ ಫಿರೋಜ್ ಪುರ್ ನ ಗುರು ಹರ್ ಸಹಾಯ್ ಕ್ಷೇತ್ರದಿಂದ ಸ್ಪರ್ಧಿಸಿ ಎಸ್ ಎ ಡಿ ಅಭ್ಯರ್ಥಿ ವಾರ್ದೇವ್ ಸಿಂಗ್ ವಿರುದ್ಧ 10,547 ಮತಗಳ ಅಂತರದಿಂದ ಗೆಲುವು ಸಾಧಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mumbai 26/11 ದಾಳಿಯ ವಕೀಲ ಉಜ್ವಲ್ ನಿಕಮ್ ಗೆ ಬಿಜೆಪಿ ಟಿಕೆಟ್, ಪೂನಮ್ ಗೆ ಕೊಕ್
Interim Bail: ಹೇಮಂತ್ ಸೋರೆನ್ ಗೆ ಮಧ್ಯಂತರ ಜಾಮೀನು ನಿರಾಕರಿಸಿದ ನ್ಯಾಯಾಲಯ
Mamata Banerjee: ಮತ್ತೆ ಎಡವಿ ಬಿದ್ದ ಮಮತಾ ಬ್ಯಾನರ್ಜಿ… ಕಾಲಿಗೆ ಸಣ್ಣ ಗಾಯ
‘ತಾರಕ್ ಮೆಹ್ತಾ ಕಾ ಉಲ್ಟಾ ಚಶ್ಮಾ’ ನಟ ಗುರುಚರಣ್ ಸಿಂಗ್ ನಾಪತ್ತೆ… ಮೊಬೈಲ್ ಸ್ವಿಚ್ ಆಫ್
W.Bengal; ಟಿಎಂಸಿ ಪಕ್ಷವನ್ನು ಭಯೋತ್ಪಾದಕ ಸಂಘಟನೆ ಎಂದು ಘೋಷಿಸಿ: ಸುವೇಂದು ಅಧಿಕಾರಿ
MUST WATCH
ಹೊಸ ಸೇರ್ಪಡೆ
Belgavi; ಪ್ರಧಾನಿ ಮೋದಿ ವಾಸ್ತವ್ಯ: ಸಂಭ್ರಮದ ಸ್ವಾಗತ
Chamarajanagar: ಅಪ್ರಾಪ್ತೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದವನಿಗೆ 20 ವರ್ಷ ಜೈಲು
Yellapur; ಬೊಲೆರೋ ಢಿಕ್ಕಿಯಾಗಿ ಬೈಕ್ ಸವಾರ ದುರ್ಮರಣ, ಹಿಂಬದಿ ಸವಾರ ಗಂಭೀರ
Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್
IPL; ಮೆಕ್ಗುರ್ಕ್ ಅಬ್ಬರ : ಡೆಲ್ಲಿ ಎದುರು ಹೋರಾಡಿ ಸೋತ ಮುಂಬೈ