CM ಅಮರೀಂದರ್ ಜತೆ ಸಮಸ್ಯೆ ಇದ್ದರೆ ಕ್ಯಾಬಿನೆಟ್ ತೊರೆಯಿರಿ: ಸಿಧುಗೆ ಧರ್ಮಸೂತ್
Team Udayavani, May 20, 2019, 4:21 PM IST
ಹೊಸದಿಲ್ಲಿ : ಮುಖ್ಯಮಂತ್ರಿ ಕ್ಯಾಪ್ಟನ್ ಅಮರೀಂದರ್ ಸಿಂಗ್ ಅವರೊಂದಿಗೆ ಏನಾದರೂ ಸಮಸ್ಯೆ ಇದ್ದರೆ ನೀವು ಅವರ ಸಚಿವ ಸಂಪುಟವನ್ನು ತೊರೆಯುವುದೇ ಲೇಸು ಎಂದು ಸಚಿವ ನವಜೋತ್ ಸಿಂಗ್ ಸಿಧು ಅವರಿಗೆ ಪಂಜಾಬ್ ಕ್ಯಾಬಿನೆಟ್ ಸಚಿವ ಸಾಧು ಸಿಂಗ್ ಧರ್ಮಸೂತ್ ಹೇಳಿದ್ದಾರೆ.
ಸಿಧು ಅವರು ಬಿಜೆಪಿಯನ್ನು ತೊರೆದು ಕಾಂಗ್ರೆಸ್ ಗೆ ಬಂದಿದ್ದಾರೆ. ಇನ್ನು ಕಾಂಗ್ರೆಸ್ ತೊರೆದು ಅವರು ಹೋಗುವುದಾದರೂ ಎಲ್ಲಿಗೆಎಂದು ಧರ್ಮಸೂತ್ ಪ್ರಶ್ನಿಸಿದರು.
ಸಿಧು ವಿರುದ್ಧ ಹೈಕಮಾಂಡ್ ಕ್ರಮ ತೆಗೆದುಕೊಳ್ಳಬೇಕು ಎಂದು ಆಗ್ರಹಿಸಿರುವ ಧರ್ಮಸೂತ್ ಅವರು, ನಾನು ಈ ಆಗ್ರಹವನ್ನು ಪಕ್ಷದ ಸಭೆಯಲ್ಲೂ ಎತ್ತುತ್ತೇನೆ ಎಂದು ಹೇಳಿದರು.
ನಿನ್ನೆ ಭಾನುವಾರ ಪಂಜಾಬ್ ಸಿಎಂ ಅವರು “ಸಿಧು ಅವರು ಕಾಂಗ್ರೆಸ್ ವಿರುದ್ಧ ಅಕಾಲಿಕ ಮತ್ತು ಅಪ್ರಬುದ್ಧ ಹೇಳಿಕೆಗಳನ್ನು ನೀಡುತ್ತಿದ್ದಾರೆ. ಇದರಿಂದ ಪಕ್ಷಕ್ಕೂ ಸ್ವತಃ ಅವರಿಗೂ ಹಾನಿ ಆಗುತ್ತದೆ ಎಂದು ಸಿಎಂ ಅಮರೀಂದರ್ ಸಿಂಗ್ ಹೇಳಿದ್ದರು.
ಕೆಲವು ದಿನಗಳ ಹಿಂದಷ್ಟೇ ನವಜೋತ್ ಸಿಂಗ್ ಸಿಧು ಅವರು ತನ್ನ ಪತ್ನಿ ನವಜೋತ್ ಕೌರ್ ಅವರಿಗೆ ಚಂಡೀಗಢದಿಂದ ಟಿಕೆಟ್ ಕೊಡದಿರುವುದಕ್ಕೆ ಪಂಬಾಜ್ ಸಿಎಂ ಅವರೇ ಕಾರಣ ಎಂದು ಬಹಿರಂಗವಾಗಿ ಹೇಳಿದ್ದರು.
ಇದಕ್ಕೆ ಉತ್ತರವಾಗಿ ಸಿಎಂ ಸಿಂಗ್ ಅವರು “ಕೌರ್ ಅವರಿಗೆ ಕಾಂಗ್ರೆಸ್ ಪಕ್ಷ ಅಮೃತಸರ ಅಥವಾ ಭಟಿಂಡಾದಿಂದ ಸ್ಪರ್ಧಿಸಲು ಟಿಕೆಟ್ ಕೊಟ್ಟಿತ್ತು; ಆದರೆ ಆಕೆ ಅದನ್ನು ತಿರಸ್ಕರಿಸಿದರು’ ಎಂದು ಹೇಳಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Reliance Jio Profit; ರಿಲಯನ್ಸ್ ಜಿಯೊ ನಿವ್ವಳ ಲಾಭ ಶೇ 13ರಷ್ಟು ಹೆಚ್ಚಳ
Bridge Collapse: 8 ವರ್ಷಗಳಿಂದ ನಿರ್ಮಾಣವಾಗುತ್ತಿದ್ದ ಸೇತುವೆ ಕುಸಿತ… ತಪ್ಪಿದ ದುರಂತ
PM Modi:ನನ್ನ 90 ಸೆಕೆಂಡ್ ಭಾಷಣ ಕಾಂಗ್ರೆಸ್, INDIA ಮೈತ್ರಿಕೂಟಕ್ಕೆ ತಲ್ಲಣ ಹುಟ್ಟಿಸಿದೆ
ಕೇಜ್ರಿವಾಲ್, ಕವಿತಾಗೆ ಮತ್ತೆ 14 ದಿನ ನ್ಯಾಯಾಂಗ ಬಂಧನ ವಿಸ್ತರಣೆ: ದೆಹಲಿ ಕೋರ್ಟ್
Mumbai Airport: ನ್ಯೂಡಲ್ಸ್ ಪ್ಯಾಕೇಟ್ ನೊಳಗೆ ಕೋಟ್ಯಂತರ ಮೌಲ್ಯದ ವಜ್ರ ಕಳ್ಳಸಾಗಣೆ!
MUST WATCH
ಹೊಸ ಸೇರ್ಪಡೆ
Vijayapura; ಯತ್ನಾಳ್ ವಿರುದ್ಧ ಚುನಾವಣಾ ಆಯೋಗಕ್ಕೆ ದೂರು: ಶಿವಾನಂದ ಪಾಟೀಲ
Reliance Jio Profit; ರಿಲಯನ್ಸ್ ಜಿಯೊ ನಿವ್ವಳ ಲಾಭ ಶೇ 13ರಷ್ಟು ಹೆಚ್ಚಳ
Vijayapura; ಚುನಾವಣಾ ಬಾಂಡ್ ತನಿಖೆಯಾದರೆ ಮೋದಿ ಜೈಲಿಗೆ: ಎಂ.ಬಿ. ಪಾಟೀಲ್
Dharwad; ಕಾಂಗ್ರೆಸ್ ಬಂದ ಮೇಲೆ ಅಪರಾಧ ಪ್ರಕರಣಗಳ ಸಂಖ್ಯೆ ಹೆಚ್ಚಳ: ಸಚಿವ ಜೋಶಿ ಗಂಭೀರ ಆರೋಪ
Bridge Collapse: 8 ವರ್ಷಗಳಿಂದ ನಿರ್ಮಾಣವಾಗುತ್ತಿದ್ದ ಸೇತುವೆ ಕುಸಿತ… ತಪ್ಪಿದ ದುರಂತ