ಭದ್ರತೆ ಹಿಂತೆಗೆದುಕೊಂಡ ಬೆನ್ನಲ್ಲೇ ಗುಂಡಿಕ್ಕಿ ಹೆಸರಾಂತ ಪಂಜಾಬಿ ಗಾಯಕನ ಹತ್ಯೆ
Team Udayavani, May 29, 2022, 8:01 PM IST
ಮಾನ್ಸಾ : ಹೆಸರಾಂತ ಪಂಜಾಬಿ ಗಾಯಕ ಸಿಧು ಮೂಸೆವಾಲಾ ಅವರನ್ನು ಭಾನುವಾರ (ಮೇ 29) ಪಂಜಾಬ್ನ ಮಾನ್ಸಾ ಜಿಲ್ಲೆಯಲ್ಲಿ ಅಪರಿಚಿತ ದುಷ್ಕರ್ಮಿಗಳು ಗುಂಡಿನ ದಾಳಿ ನಡೆಸಿ ಹತ್ಯೆ ಗೈದಿದ್ದಾರೆ.
ಮಾನ್ಸಾದ ಜವಾಹರ್ಕೆ ಗ್ರಾಮದಲ್ಲಿ ಭಾನುವಾರ ಮಧ್ಯಾಹ್ನ ನಡೆದ ಗುಂಡಿನ ದಾಳಿಯಲ್ಲಿ ಗಾಯಕ ಸೇರಿದಂತೆ ಕನಿಷ್ಠ ಮೂವರು ಗಾಯಗೊಂಡಿದ್ದರು. ತತ್ ಕ್ಷಣ ಅವರನ್ನು ಮಾನ್ಸಾದ ಹತ್ತಿರದ ಆಸ್ಪತ್ರೆಗೆ ಸಾಗಿಸಲಾಯಿತು, ಅಲ್ಲಿ ವೈದ್ಯರು ಸಿಧು ಸಾವನ್ನಪ್ಪಿದ್ದಾರೆ ಎಂದು ಘೋಷಿಸಿದರು. ಅವರಿಗೆ 27 ವರ್ಷ ವಯಸ್ಸಾಗಿತ್ತು.
ಶನಿವಾರ (ಮೇ 28) ಪಂಜಾಬ್ನಲ್ಲಿ ಭಗವಂತ್ ಮಾನ್ ನೇತೃತ್ವದ ಆಮ್ ಆದ್ಮಿ ಪಕ್ಷದ ಸರ್ಕಾರವು ಮೂಸೆವಾಲಾ ಅವರ ಭದ್ರತೆಯನ್ನು ಕಡಿತಗೊಳಿಸಿತ್ತು. ಮೂಸೆವಾಲಾ ಅವರ ಭದ್ರತೆಯಲ್ಲಿ ನಾಲ್ವರು ಬಂದೂಕುಧಾರಿ ಪೊಲೀಸ್ ಇದ್ದರು, ಅವರಲ್ಲಿ ಇಬ್ಬರನ್ನು ಹಿಂತೆಗೆದುಕೊಳ್ಳಲಾಗಿತ್ತು.
ವಾಹನದಲ್ಲಿ ಪ್ರಯಾಣಿಸುತ್ತಿದ್ದಾಗ ದಾಳಿಕೋರರು ಗಾಯಕ ಸಿಧು ಮತ್ತು ಅವರ ಇಬ್ಬರು ಸ್ನೇಹಿತರ ಮೇಲೆ ಗುಂಡು ಹಾರಿಸಿದ್ದಾರೆ.
ತೆರೆದ ಜೀಪಿನಲ್ಲಿ ಸವಾರಿ ಮಾಡಲು ಇಷ್ಟಪಡುವ ಗಾಯಕ-ರಾಜಕಾರಣಿ, ಅಶ್ಲೀಲ ದೃಶ್ಯಗಳಿಗಾಗಿ ಎರಡು ಸೇರಿದಂತೆ ನಾಲ್ಕು ಕ್ರಿಮಿನಲ್ ಪ್ರಕರಣಗಳನ್ನು ಎದುರಿಸುತ್ತಿದ್ದರು.
ಮೂಸೆವಾಲ ಅವರಿಗೆ ವಿವಾದಗಳು ಹೊಸದಲ್ಲ. ಅವರು 18 ನೇ ಶತಮಾನದ ಸಿಖ್ ಯೋಧ ಮೈ ಭಾಗೋ ಅವರ ಹೆಸರನ್ನು ತಮ್ಮ ಹಾಡು `ಜಟ್ಟಿ ಜೆನಾಯ್ ಮೊರ್ಹ್ ದಿ ಬಂದೂಕ್ ವಾರ್ಗಿ’ ನಲ್ಲಿ ದುರುಪಯೋಗಪಡಿಸಿಕೊಂಡು ಸಿಖ್ ಭಾವನೆಗಳನ್ನು ಘಾಸಿಗೊಳಿಸಿದ್ದಕ್ಕಾಗಿ ಅವರನ್ನು ಬಂಧಿಸಬೇಕೆಂದು ಒತ್ತಾಯಿಸುವ ಮೂಲಕ ಕೋಲಾಹಲವನ್ನು ಸೃಷ್ಟಿಸಲಾಗಿತ್ತು. ಬಳಿಕ ಕ್ಷಮೆ ಯಾಚಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಕಾಂಗ್ರೆಸ್ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ
Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು
ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು
ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ
Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ
MUST WATCH
ಹೊಸ ಸೇರ್ಪಡೆ
Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ
ಬಿಗ್ಬಾಸ್ ವಿನ್ನರ್ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ
Yadgiri: ಪ್ರಜ್ವಲ್ ರೇವಣ್ಣ ಪ್ರಕರಣ… ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು
T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ
ಕಾಂಗ್ರೆಸ್ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ