ಕಾಶ್ಮೀರಿ ಪಂಡಿತರ ಪುನರ್ವಸತಿಯು ಕಾರ್ಯಾಂಗದ ಭಾಗ: ಸುಪ್ರೀಂ ಕೋರ್ಟ್
Team Udayavani, Sep 2, 2022, 10:45 PM IST
ನವದೆಹಲಿ: ಜಮ್ಮು ಮತ್ತು ಕಾಶ್ಮೀರದಲ್ಲಿ ಕಾಶ್ಮೀರಿ ಪಂಡಿತರು ಮತ್ತು ಸಿಖ್ಖರ ಪುನರ್ವಸತಿ ಕಾರ್ಯವು ಸಂಪೂರ್ಣವಾಗಿ ಕಾರ್ಯಾಂಗದ ಭಾಗವಾಗಿದೆ ಎಂದು ಸುಪ್ರೀಂ ಕೋರ್ಟ್ ಪ್ರತಿಪಾದಿಸಿದೆ.
ಈ ಸಂಬಂಧ ಅರ್ಜಿದಾರರು(ಎನ್ಜಿಒ) ಮೊದಲು ಕೇಂದ್ರ ಸರ್ಕಾರ ಮತ್ತು ಕೇಂದ್ರಾಡಳಿತ ಪ್ರದೇಶದ ಆಡಳಿತವನ್ನು ಸಂಪರ್ಕಿಸುವಂತೆ ಅದು ಸೂಚಿಸಿದೆ.
“ವಿ ದಿ ಸಿಟಿಜನ್ಸ್’ ಎನ್ಜಿಒ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಪೀಠ, “ಇದು ಕಾರ್ಯಾಂಗದ ಭಾಗವಾಗಿದೆ. ಮೊದಲು ಸರ್ಕಾರಕ್ಕೆ ಮನವಿ ಸಲ್ಲಿಸಿ. ಇದರಲ್ಲಿ ನ್ಯಾಯಾಲಯ ಏಕೆ ಮಧ್ಯಸ್ಥಿಕೆ ವಹಿಸಬೇಕು,” ಎಂದು ಎನ್ಜಿಒ ಪರ ವಕೀಲರನ್ನು ಪ್ರಶ್ನಿಸಿತು.
ಅಲ್ಲದೇ ಸುಪ್ರೀಂ ಕೋರ್ಟ್ಗೆ ಅರ್ಜಿ ಸಲ್ಲಿಸುವ ಮುನ್ನ ಸರ್ಕಾರಕ್ಕೆ ಮನವಿ ಸಲ್ಲಿಸಲಾಗಿತ್ತೇ ಎಂದು ಪ್ರಶ್ನಿಸಿತು. ಇದಕ್ಕೆ ಎನ್ಜಿಒ ಪರ ವಕೀಲರಿಂದ “ಇಲ್ಲ’ ಎಂಬ ಉತ್ತರ ಬಂದಿತು. ಹಾಗಾಗಿ ನ್ಯಾಯಪೀಠ ಈ ಮೇಲ್ಕಂಡ ಅಭಿಪ್ರಾಯ ವ್ಯಕ್ತಪಡಿಸಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Lok Sabha Election: ಮಹಿಳೆ ಅಡುಗೆ ಮನೆಗಷ್ಟೇ ಸೀಮಿತವಲ್ಲ: ಗಾಯತ್ರಿ ಸಿದ್ದೇಶ್ವರ
Kannada Cinema; ಚಿತ್ರೀಕರಣ ಮುಗಿಸಿದ ‘ವಿದ್ಯಾರ್ಥಿ ವಿದ್ಯಾರ್ಥಿನಿಯರೇ’
ಲೋಕಸಭಾ ಚುನಾವಣೆ: ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರ ಸೂರಜ ನಾಯ್ಕ ಸೋನಿ ?
JDS; ಮೂವರು ಅಭ್ಯರ್ಥಿಗಳ ಪಟ್ಟಿ ಪ್ರಕಟ: ಕೋಲಾರಕ್ಕೆ ಮಲ್ಲೇಶ್ ಬಾಬು
Rameshwaram Cafe ಪ್ರಕರಣ: ಇಬ್ಬರು ಶಂಕಿತರ ಮಾಹಿತಿ ನೀಡಿದವರಿಗೆ ಬಹುಮಾನ ಘೋಷಣೆ ಮಾಡಿದ NIA