ಪುರಿ ಜಗನ್ನಾಥ ಉತ್ಖನನಕ್ಕೆ ತಡೆ : ಇಂದು ಸುಪ್ರೀಂ ತೀರ್ಪು
Team Udayavani, Jun 3, 2022, 6:40 AM IST
ನವದೆಹಲಿ : ಪುರಿಯಲ್ಲಿರುವ ವಿಶ್ವವಿಖ್ಯಾತ ಜಗನ್ನಾಥ ದೇವಸ್ಥಾನದ ಸುತ್ತ ನಡೆಯುತ್ತಿರುವ ಉತ್ಖನನ ಮತ್ತು ನಿರ್ಮಾಣವನ್ನು ನಿಲ್ಲಿಸಬೇಕೆಂದು ಮನವಿ ಮಾಡಿರುವ ಅರ್ಜಿ ಕುರಿತ ತೀರ್ಪನ್ನು ಸರ್ವೋಚ್ಚ ನ್ಯಾಯಾಲಯ ಶುಕ್ರವಾರಕ್ಕೆ ಕಾಯ್ದಿರಿಸಿದೆ.
ಒಡಿಶಾ ಸರ್ಕಾರ ಕೈಗೆತ್ತಿಕೊಂಡಿರುವ ಈ ಕಾರ್ಯವನ್ನು ನಿಲ್ಲಿಸಬೇಕೆಂದು ಮೊದಲು ಅರ್ಜಿದಾರರು ಒರಿಸ್ಸಾ ಉಚ್ಚ ನ್ಯಾಯಾಲಯದಲ್ಲಿ ಅರ್ಜಿ ಸಲ್ಲಿಸಿದ್ದರು. ಇದನ್ನು ಉಚ್ಚ ನ್ಯಾಯಾಲಯ ಪುರಸ್ಕರಿಸಿರಲಿಲ್ಲ. ಇದರ ಬೆನ್ನಲ್ಲೇ ಪ್ರಕರಣ ಸರ್ವೋಚ್ಚ ನ್ಯಾಯಾಲಯದಲ್ಲಿ ವಿಚಾರಣೆಯಾಗಿತ್ತು.
ಈ ಬಗ್ಗೆ ಎರಡು ಅರ್ಜಿಗಳು ಸಲ್ಲಿಕೆಯಾಗಿವೆ. ಒಬ್ಬ ಅರ್ಜಿದಾರರ ಪರ ಮಾತನಾಡಿದ ವಕೀಲರು, 1958ರ ಭಾರತೀಯ ಸ್ಮಾರಕ ಮತ್ತು ಪುರಾತತ್ವ ನಿವೇಶನಗಳ ಕಾಯ್ದೆ ಪ್ರಕಾರ, ಸಂರಕ್ಷಿತ ಕಟ್ಟಡಗಳನ್ನು ಅಗೆಯಲು ಅಧಿಕೃತ ಪ್ರಾಧಿಕಾರದ ಪೂರ್ವಾನುಮತಿ ಪಡೆದಿರಬೇಕು. ಆದರೆ ಒಡಿಶಾ ಸರ್ಕಾರ ಎನ್ಎಂಎ (ರಾಷ್ಟ್ರೀಯ ಸ್ಮಾರಕ ಪ್ರಾಧಿಕಾರ) ಅನುಮತಿ ಪಡೆದಿದೆ. ಇದಕ್ಕೆ ಅನುಮತಿ ಕೊಡುವ ಅಧಿಕಾರವಿಲ್ಲ. ಕಾಯ್ದೆಯ ಪ್ರಕಾರ ಭಾರತೀಯ ಪುರಾತತ್ವ ಇಲಾಖೆಯ ನಿರ್ದೇಶಕರು ಈ ಅನುಮತಿ ನೀಡಬೇಕು ಎಂದಿದ್ದಾರೆ. ಇನ್ನೊಬ್ಬ ಅರ್ಜಿದಾರರು, ದೇವಸ್ಥಾನದ ನಿಷೇಧಿತ ವಲಯದಲ್ಲಿ ನಿರ್ಮಾಣ ಕಾರ್ಯ ನಡೆಯುತ್ತಿದೆ ಎಂದು ಎಎಸ್ಐ ವರದಿಯಲ್ಲೇ ಹೇಳಲಾಗಿದೆ ಎಂದಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಜಗತ್ತಿಗಿಂತ ಮೊದಲು ಪಾಕ್ ಗೆ ಮಾಹಿತಿ ಕೊಟ್ಟಿದ್ದೇವು: ಬಾಲಾಕೋಟ್ ದಾಳಿ ಬಗ್ಗೆ ಪ್ರಧಾನಿ
Encounter: ಛತ್ತೀಸ್ಗಢದಲ್ಲಿ ಎನ್ಕೌಂಟರ್… 7 ಮಾವೋವಾದಿಗಳ ಹತ್ಯೆ, ಶಸ್ತ್ರಾಸ್ತ್ರ ವಶ
Prajwal Revanna Case: ಮಾತೃಶಕ್ತಿಗೆ ಅವಮಾನವಾಗೋದನ್ನು ಸಹಿಸಿಕೊಳ್ಳಲ್ಲ: ಅಮಿತ್ ಶಾ
Fake Video: ಅಮಿತ್ ಶಾ ನಕಲಿ ವಿಡಿಯೋ ಪ್ರಕರಣ… ಓರ್ವ ಬಂಧನ, 3 ವಿಪಕ್ಷ ನಾಯಕರಿಗೆ ನೊಟೀಸ್
Lok Sabha Polls: ಈ ಬಾರಿಯ ಲೋಕಸಭಾ ಚುನಾವಣೆಗೆ ಪ್ರಿಯಾಂಕಾ ಗಾಂಧಿ ಸ್ಪರ್ಧಿಸಲ್ಲ… ವರದಿ
MUST WATCH
ಹೊಸ ಸೇರ್ಪಡೆ
Thirthahalli: ಚುನಾವಣಾ ಬಹಿಷ್ಕಾರ; ಸ್ವ-ಇಚ್ಛೆಯಿಂದ ಸಾವಿರಕ್ಕೂ ಅಧಿಕ ಮಂದಿಯಿಂದ ನಿರ್ಧಾರ !
ಬಿಜೆಪಿ ಸುಳ್ಳು ಉತ್ಪಾದನೆ ಮಾಡುವ ಫ್ಯಾಕ್ಟರಿ: ಸಿಎಂ ಸಿದ್ದರಾಮಯ್ಯ
ಬಿಜೆಪಿ ಅಧಿಕಾರಕ್ಕೆ ಬಂದರೆ ಗ್ಯಾರಂಟಿ ಯೋಜನೆ ರದ್ದು ಕಾನೂನು ತರುತ್ತಾರೆ: ಕೃಷ್ಣ ಬೈರೇಗೌಡ
Kasturba ಆಸ್ಪತ್ರೆಯಲ್ಲಿ ನೂತನವಾಗಿ ನಿರ್ಮಿಸಲಾದ ಡಾ| ರಾಮದಾಸ್ ಎಂ.ಪೈ ಬ್ಲಾಕ್ ಉದ್ಘಾಟನೆ
ವಚನ ಬದುಕು ಚಂದಾಗಿಸುವ ಕಾಲಾತೀತ ದಿವ್ಯ ಸಂದೇಶ: ಶಿವಾಚಾರ್ಯರು