ಪ್ರತ್ಯೇಕ ಎನ್ ಕೌಂಟರ್: ಏಳು ಉಗ್ರರನ್ನು ಹೊಡೆದುರುಳಿಸಿದ ಭದ್ರತಾ ಪಡೆ
Team Udayavani, Apr 10, 2021, 8:33 AM IST
ಜಮ್ಮು ಕಾಶ್ಮೀರ: ದಕ್ಷಿಣ ಕಾಶ್ಮೀರದಲ್ಲಿ ಶುಕ್ರವಾರ ನಡೆದ ಎರಡು ಪ್ರತ್ಯೇಕ ಎನ್ ಕೌಂಟರ್ ನಲ್ಲಿ ಅಲ್ ಖೈದಾ ಉಗ್ರ ಸಂಘಟನೆಯ ಅಂಗಸಂಸ್ಥೆ ಅನ್ಸಾರ್ ಗಜ್ವತ್ ಉಲ್ ಹಿಂದ್ (ಎಜಿಹೆಚ್) ಮುಖ್ಯಸ್ಥ ಸೇರಿದಂತೆ ಏಳು ಉಗ್ರರನ್ನು ಹತ್ಯೆ ಮಾಡಲಾಗಿದೆ ಎಂದು ಜಮ್ಮು ಕಾಶ್ಮೀರ ಪೊಲೀಸರು ತಿಳಿಸಿದ್ದಾರೆ.
ಪುಲ್ವಾಮಾದ ಟ್ರಾಲ್ ಪ್ರದೇಶದಲ್ಲಿರುವ ತೋಟದೊಳಗಿನ ಅಡಗುತಾಣವೊಂದರಲ್ಲಿ ನಡೆದ ಏನ್ ಕೌಂಟರ್ ನಲ್ಲಿ ಎಜಿಹೆಚ್ ಮುಖ್ಯಸ್ಥ ಇಮ್ತಿಯಾಜ್ ಷಾ ಹಾಗೂ ಮತ್ತೊಬ್ಬ ಉಗ್ರನನ್ನು ಹತ್ಯೆ ಮಾಡಲಾಗಿದೆ. ಶೋಪಿಯಾನ್ ಅಡಗಿಕೊಂಡಿದ್ದ ಐವರು ಉಗ್ರರನ್ನು ಕೂಡ ಶುಕ್ರವಾರ (9-4-2021) ರಾತ್ರಿ ಎನ್ ಕೌಂಟರ್ ಮೂಲಕ ಸದೆಬಡಿಯಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಇದನ್ನೂ ಓದಿ: ಆಂಜನೇಯನ ಮೇಲೆ ಆಂಧ್ರದ “ಅಧಿಕಾರ’! ಆಂಜನೇಯ ಹುಟ್ಟಿದ್ದು ತಿರುಪತಿಯಲ್ಲಂತೆ
ಕಾಶ್ಮೀರ ವಲಯದ ಐಜಿ ವಿಜಯ್ ಕುಮಾರ್ ಈ ಕುರಿತು ಮಾಹಿತಿ ನೀಡಿದ್ದು, ಶೋಪಿಯಾನ್ನಲ್ಲಿ ಹತ್ಯೆಯಾದ ಐದು ಉಗ್ರರಲ್ಲಿ ಇಬ್ಬರು ಹಿಜ್ಬುಲ್-ಉಲ್-ಮುಜಾಹಿದ್ದೀನ್ಗೆ ಸೇರಿದವರು. ಓರ್ವ ಲಷ್ಕರ್-ಎ-ತೋಯಿಬಾ ಮತ್ತು ಇನ್ನೆರಡು ಮಂದಿ ಎಜಿಎಚ್ ಸಂಘಟನೆಗೆ ಸೇರಿದವರಾಗಿದ್ದಾರೆ ಎಂದು ತಿಳಿಸಿದ್ದಾರೆ.
ಎನ್ ಕೌಂಟರ್ ಸ್ಥಳದಿಂದ ಏಳು ಏಕೆ-47 ರೈಫಲ್ಸ್, 2 ಪಿಸ್ತೂಲ್ ವಶಪಡಿಸಿಕೊಳ್ಳಲಾಗಿದೆ. ಹತ್ಯೆಯಾದ ಉಗ್ರರು 2019ರಿಂದಲೂ ಉಗ್ರ ಚಟುವಟಿಕೆಯಲ್ಲಿ ಸಕ್ರಿಯರಾಗಿದ್ದರು. ಈ ಉಗ್ರರು ಅಮರನಾಥ ಯಾತ್ರಿಕರ ಮೇಲೆ ದಾಳಿ ನಡೆಸಲು ಸಂಚು ರೂಪಿಸಿದ್ದರು ಎಂದು ತಿಳಿಸಿದ್ದಾರೆ.
ಇದನ್ನೂ ಓದಿ: ಮುಷ್ಕರ ನಿಷೇಧ: ಕಾರ್ಮಿಕ ಇಲಾಖೆಯಿಂದ ಆದೇಶ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!
Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು
Lok Sabha 1 Phase: ನಿತಿನ್ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…
Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ
Stones Pelted: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ
MUST WATCH
ಹೊಸ ಸೇರ್ಪಡೆ
Congress;ಕಾರ್ಕಳ ಕ್ಷೇತ್ರದಿಂದ 40 ಸಾವಿರ ಲೀಡ್ ಗೆ ಪ್ರಯತ್ನ: ಮುನಿಯಾಲು
Belgavi; ತಂದೆ ಮಾಡಿದ ಅಭಿವೃದ್ಧಿ ಕೆಲಸಗಳನ್ನು ಮುಂದುವರಿಸುತ್ತೇವೆ: ಶ್ರದ್ಧಾ ಶೆಟ್ಟರ್
ಮೂಡುಬೆಳ್ಳೆ : ವೈಭವದ ಹಸಿರುವಾಣಿ ಹೊರೆಕಾಣಿಕೆ ಮೆರವಣಿಗೆ
Mudigere; ಹುಲಿ ಹತ್ಯೆ ಆರೋಪದ ಮೇಲೆ ಇಬ್ಬರ ಬಂಧನ
BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ