ವಾಹನಗಳ ಪಿಯುಸಿ ಪ್ರಮಾಣಪತ್ರಕ್ಕೆ ಕ್ಯುಆರ್ ಕೋಡ್!
Team Udayavani, Nov 30, 2020, 6:53 AM IST
ಹೊಸದಿಲ್ಲಿ: ದೇಶದ ಎಲ್ಲ ವ್ಯವಸ್ಥೆಗಳನ್ನು ತಂತ್ರಜ್ಞಾನದ ವ್ಯಾಪ್ತಿಗೆ ತರುತ್ತಿರುವ ಕೇಂದ್ರ ಸರಕಾರವು ಇನ್ನೊಂದು ಪ್ರಮುಖ ಹೆಜ್ಜೆ ಇರಿಸಿದೆ. ವಾಹನಗಳ ಹೊಗೆಯುಗುಳುವಿಕೆ ಮಟ್ಟದ ಪರೀಕ್ಷಾ ಪ್ರಮಾಣಪತ್ರ (ಪೊಲ್ಯೂಷನ್ ಅಂಡರ್ ಕಂಟ್ರೋಲ್-ಪಿಯುಸಿ)ವನ್ನು ದೇಶಾದ್ಯಂತ ಏಕರೂಪಗೊಳಿಸಲು ಚಿಂತನೆ ನಡೆಸಿದೆ.
ಹಾಗೆಯೇ ಅದರಲ್ಲಿ ಕ್ಯುಆರ್ ಕೋಡ್ ಅಳವಡಿಸಲಾಗುತ್ತದೆ. ಅದನ್ನು ಸ್ಕಾ éನ್ ಮಾಡಿ ದರೆ ವಾಹನದ ಮಾಲಕನ ವಿವರ, ಹೊಗೆ ಯುಗುಳುವಿಕೆ ಸ್ಥಿತಿಗತಿ ಮತ್ತಿತರ ಮಾಹಿತಿಗಳು ಸಿಗುತ್ತವೆ. ಈ ಕುರಿತು ಕೇಂದ್ರ ರಸ್ತೆ ಸಾರಿಗೆ ಸಚಿವಾಲಯ ಪ್ರಕಟನೆ ಹೊರಡಿಸಿ, ಸಂಬಂಧಿತರ ಅಭಿಪ್ರಾಯ ಕೇಳಿದೆ.
ಲಾಭಗಳೇನು?
ಕ್ಯುಆರ್ ಕೋಡ್ ಇರುವ ಪಿಯುಸಿ ಪ್ರಮಾಣ ಪತ್ರದಲ್ಲಿ ವಾಹನಗಳ ಸಂಪೂರ್ಣ ಮಾಹಿತಿ ಇರುತ್ತದೆ. ಹಾಗೆಯೇ ಯಾರಾದರೂ ವಾಹನವನ್ನು ಕಳವು ಮಾಡಿ ಪಿಯುಸಿ ಪ್ರಮಾಣಪತ್ರ ಪಡೆಯಲು ಹೋದರೆ, ತತ್ಕ್ಷಣ ಪತ್ತೆ ಹಚ್ಚಬಹುದು. ಹೊಗೆಯುಗುಳುವಿಕೆ ಪರೀಕ್ಷೆಗೆ ಮುನ್ನವೇ ವಾಹನ ಮಾಲಕನ ಮೊಬೈಲ್ ಸಂಖ್ಯೆಗೆ ಸಂದೇಶ ಬರುವುದರಿಂದ ಇದು ಸಾಧ್ಯವಾಗುತ್ತದೆ.
ಪಿಯುಸಿಯಲ್ಲಿನ ಮಾಹಿತಿ ಒಂದು ಕಡೆ ಶೇಖರವಾಗಿರುತ್ತದೆ. ಅದನ್ನು ರಾಷ್ಟ್ರೀಯ ನೋಂದಣಿಗೆ ಸಂಪರ್ಕಿಸಲಾಗಿರುತ್ತದೆ. ಇದೇ ಮೊದಲ ಬಾರಿಗೆ ಪ್ರಮಾಣಪತ್ರವನ್ನು ತಿರಸ್ಕರಿ ಸುವ ಅವಕಾಶವನ್ನೂ ನೀಡಲಾಗಿದೆ. ಒಂದು ವೇಳೆ ಸಂಬಂಧಪಟ್ಟ ವಾಹನ, ಮೋಟಾರು ವಾಹನಗಳ ನಿಯಮಗಳಿಗೆ ತಕ್ಕಂತೆ ಇಲ್ಲವಾದರೆ ಪರೀಕ್ಷಾ ಕೇಂದ್ರದಲ್ಲಿ ಹೀಗೆ ಮಾಡಲು ಅವಕಾಶವಿದೆ. ಇದಕ್ಕೆ ಸೂಕ್ತ ಕಾರಣವನ್ನು ನಮೂದಿಸಬೇಕಾಗಿರುತ್ತದೆ.
ಶಿಕ್ಷೆಯೇನು?
ಒಂದು ವೇಳೆ ವಾಹನ ಹೊಗೆಯುಗುಳುವಿಕೆ ನಿಯಮಗಳಿಗೆ ಅನುಗುಣವಾಗಿಲ್ಲ ಎಂದು ಅಧಿಕಾರಿಗಳಿಗೆ ಅನಿಸಿದರೆ ಸಂಬಂಧಪಟ್ಟ ವ್ಯಕ್ತಿಗೆ ಯಾವುದೇ ರೂಪದಲ್ಲಿ ಸಂದೇಶ ಕಳುಹಿಸಿ, ವಾಹನವನ್ನು ಪರೀಕ್ಷೆಗೊಳಪಡಿಸಲು ಸೂಚಿಸಬಹುದು. ಇದನ್ನು ಮಾಡಲು ವ್ಯಕ್ತಿ ವಿಫಲವಾದರೆ 3 ತಿಂಗಳವರೆಗೆ ಜೈಲು ಅಥವಾ 10 ಸಾವಿರ ರೂ.ವರೆಗೆ ದಂಡ ವಿಧಿಸಬಹುದು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
West Bengal; ಮಗಳನ್ನು ಕಂಡು ಕಣ್ಣೀರಿಟ್ಟ ಶೇಖ್ ಷಹಜಹಾನ್: ಬಿಜೆಪಿ ವ್ಯಂಗ್ಯ
Amit Shah: 2024ರ ಚುನಾವಣೆಯಲ್ಲಿ ಎನ್ ಡಿಎಗೆ 400ಕ್ಕೂ ಅಧಿಕ ಸ್ಥಾನ ಖಚಿತ: ಶಾ
Patanjali ತಪ್ಪು ಜಾಹೀರಾತು; ಕ್ಷಮೆಯಾಚಿಸಿದ ಬಾಬಾ ರಾಮ್ ದೇವ್,ಬಾಲಕೃಷ್ಣ
Scrap mafia ದರೋಡೆಕೋರ ರವಿ ಕಾನಾ ಮತ್ತು ಪ್ರೇಯಸಿ ಕಾಜಲ್ ಥಾಯ್ಲೆಂಡ್ ನಲ್ಲಿ ಬಂಧನ
Andhra ಟಿಡಿಪಿ ಅಭ್ಯರ್ಥಿ ಆಸ್ತಿ ಬರೋಬ್ಬರಿ 5,785 ಕೋ.ರೂ.!
MUST WATCH
ಹೊಸ ಸೇರ್ಪಡೆ
Congress ತುಷ್ಟೀಕರಣ ರಾಜಕೀಯಕ್ಕೆ ಮುಸ್ಲಿಂ ಮೀಸಲಾತಿಗೆ ಬೆಂಬಲಿಸುತ್ತದೆ: ಬೊಮ್ಮಾಯಿ
ಭಾರತದಲ್ಲಿ ರಿಲೀಸ್ಗೂ ಮುನ್ನ ʼಮಂಕಿ ಮ್ಯಾನ್ʼ ಹೆಚ್ ಡಿ ಕಾಪಿ ಲೀಕ್: ವಿಳಂಬ ಯಾಕೆ?
Bagalkote: ಯತ್ನಾಳ ಗೊಡ್ಡ ಎಮ್ಮಿ ಇದ್ದಂಗ: ಕಾಶಪ್ಪನವರ ಟೀಕೆ
West Bengal; ಮಗಳನ್ನು ಕಂಡು ಕಣ್ಣೀರಿಟ್ಟ ಶೇಖ್ ಷಹಜಹಾನ್: ಬಿಜೆಪಿ ವ್ಯಂಗ್ಯ
Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ