ತ್ವರಿತ ನ್ಯಾಯದಾನ ರಾಜ್ಯಕ್ಕೆ 6ನೇ ಸ್ಥಾನ

ನ್ಯಾಯಿಕ ವರದಿ ಬಿಡುಗಡೆ: ಮಹಾರಾಷ್ಟ್ರ ಮುಂಚೂಣಿಯಲ್ಲಿ

Team Udayavani, Nov 10, 2019, 4:26 AM IST

ss-31

ಕಾನೂನು ಮತ್ತು ನ್ಯಾಯ ಸುವ್ಯವಸ್ಥೆ ಸಮಾಜದ ಪ್ರಮುಖ ಅಂಶ. ಇದು ದೇಶದ ಬೆಳವಣಿಗೆಯಲ್ಲಿ ಪ್ರಮುಖ ಪಾತ್ರವಹಿಸುತ್ತದೆ. ಇದೀಗ 2019ನೇ ಸಾಲಿನ ಭಾರತದ ನ್ಯಾಯಿಕ ವರದಿ ಬಿಡುಗಡೆಯಾಗಿದ್ದು, ದೇಶದಲ್ಲಿ ತ್ವರಿತವಾಗಿ ನ್ಯಾಯದಾನವನ್ನು ನೀಡುವುದರಲ್ಲಿ ಯಾವ ರಾಜ್ಯ ಮುಂಚೂಣಿಯಲ್ಲಿದೆ ಎಂಬ ಮಾಹಿತಿ ಸಹಿತ ನ್ಯಾಯಾಂಗ ವ್ಯವಸ್ಥೆಗೆ ಸಂಬಂಧಪಟ್ಟ ಅಂಶಗಳನ್ನು ಸಮೀಕ್ಷೆ ತಿಳಿಸಿದೆ.

ಏನಿದು ವರದಿ?
ನ್ಯಾಯವನ್ನು ಕೇಳಿ ಪಡೆಯುವುದು ಸಾರ್ವಜನಿಕರ ಹಕ್ಕಾಗಿದ್ದು, ಸಮಾಜದ ಪ್ರಜೆಗಳ ಹಿತಾಸಕ್ತಿ ಕಾಯ್ದುಕೊಳ್ಳುವುದು ಆಯಾ ದೇಶ-ರಾಜ್ಯದ ಹೊಣೆಗಾರಿಕೆ. ಈ ನಿಟ್ಟಿನಲ್ಲಿ ರಾಜ್ಯಗಳ ನ್ಯಾಯಾಂಗ ವ್ಯವಸ್ಥೆ ಪರಿಣಾಮಕಾರಿ ಆಗಿದೆಯೇ ಎಂಬುದನ್ನು ತಿಳಿದುಕೊಳ್ಳಲು ಈ ಸಮೀಕ್ಷೆ ನಡೆಸಲಾಗಿದೆ.

ಇದೇ ಮೊದಲು
ನ್ಯಾಯಾಂಗ ವ್ಯವಸ್ಥೆಯಲ್ಲಿ ಆಗುವ ಬೆಳವಣಿಗೆಗೆ ಸಂಬಂಧಪಟ್ಟಂತೆ ಇದೇ ಮೊದಲ ಬಾರಿಗೆ ಇಂಥ ವರದಿ ಬಿಡುಗಡೆಯಾಗಿದ್ದು, ಮುಂದಿನ ದಿನಗಳಲ್ಲಿ ಸಮಾಜದಲ್ಲಿನ ಶಾಂತಿ ಮತ್ತು ಸುರಕ್ಷತೆಯನ್ನು ಕಾಯ್ದುಕೊಳ್ಳಲು ಈ ಸಮೀಕ್ಷೆ ನೆರವಾಗಲಿದೆ.

ಟಾಟಾ ಟ್ರಸ್ಟ್‌ನ ನೆರವು
ಸರಕಾರ ನೀಡಿರುವ ಅಂಕಿ-ಅಂಶ, ಉದ್ದೇಶ ಮತ್ತು ವರದಿಗಳನ್ನಿಟ್ಟುಕೊಂಡು ಟಾಟಾ ಟ್ರಸ್ಟ್‌ ಈ ಒಂದು ಸಮೀಕ್ಷೆಯನ್ನು ಸಿದ್ಧಪಡಿಸಿದ್ದು, ಸೆಂಟರ್‌ ಫಾರ್‌ ಸೋಶಿಯಲ್‌ ಜಸ್ಟೀಸ್‌, ಕಾಮನ್‌ ಕಾಸ್‌, ಕಾಮನ್ವೆಲ್ತ… ಹ್ಯೂಮನ್‌ ರೈಟ್ಸ್‌ ಇನಿಶಿಯೇಟಿವ್‌, ಡಿಎಕೆಎಸ್‌, ಟಿಐಎಸ್‌ಎಸ್‌-ಪ್ರಯಾಸ್‌ ಮತ್ತು ವಿಧಿ ಸೆಂಟರ್‌ ಫಾರ್‌ ಲೀಗಲ್‌ ಪಾಲಿಸಿ ಎಂಬ ಸಂಸ್ಥೆಗಳು ಇದಕ್ಕೆ ಸಾಥ್‌ ನೀಡಿವೆ.

ಮಾನದಂಡಗಳೇನು
ಪೊಲೀಸ್‌ – ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹೇಗಿದೆ?
ಕಾರಾಗೃಹಗಳು – ಜೈಲಿನಲ್ಲಿನ ಜನಸಂದಣಿ ಮತ್ತು ಸಮರ್ಪಕ ಮಾನವ ಸಂಪನ್ಮೂಲ
ಹೊಂದಿರುವ ಬಗ್ಗೆ
ನ್ಯಾಯಾಂಗ – ನ್ಯಾಯಾಧೀಶರ ಲಭ್ಯತೆ, ಪ್ರಕರಣಗಳ ನಿರ್ಣಯ ಬಗ್ಗೆ
ಕಾನೂನು ಸಹಾಯ – ಅವಶ್ಯರಿಗೆ ಕಾನೂನು ಸಹಾಯ ಒದಗಿಸುವುದರಲ್ಲಿ ರಾಜ್ಯಗಳ ಕಾರ್ಯಕ್ಷಮತೆ.

28 ರಾಜ್ಯಗಳಲ್ಲಿ ಸಮೀಕ್ಷೆ
ದೇಶದ 28 ರಾಜ್ಯಗಳನ್ನು ಸಮೀಕ್ಷೆಗೆ ಒಳಪಡಿಸಿದ್ದು, ದೊಡ್ಡ ಹಾಗೂ ಮಧ್ಯಮ ವಿಭಾಗದಲ್ಲಿ 18 ರಾಜ್ಯಗಳಿದ್ದು, ಸಣ್ಣ ಪ್ರದೇಶಗಳ ಗುಂಪಿನಲ್ಲಿ 6 ರಾಜ್ಯಗಳಿವೆ.
ಮಹಾರಾಷ್ಟ್ರ ಮೊದಲು ನ್ಯಾಯೋಚಿತವಾಗಿ ಮತ್ತು ತ್ವರಿತವಾಗಿ ನ್ಯಾಯವನ್ನು ನೀಡುವುದರಲ್ಲಿ 28 ರಾಜ್ಯಗಳ ಪೈಕಿ ಮಹಾರಾಷ್ಟ್ರ ಮೊದಲ ಸ್ಥಾನಗಳಿಸಿದ್ದು, 10 ಅಂಕಗಳಲ್ಲಿ 5.92 ಅಂಕಗಳಿಸಿದೆ.

ರಾಜ್ಯಕ್ಕೆ 6ನೇ ಸ್ಥಾನ
ನಾಲ್ಕು ಮಾನದಂಡಗಳಲ್ಲಿ ಮಧ್ಯಮ ಪ್ರದರ್ಶನ ನೀಡಿರುವ ಕರ್ನಾಟಕ ನ್ಯಾಯೋಚಿತವಾಗಿ ಮತ್ತು ತ್ವರಿತವಾಗಿ ನ್ಯಾಯವನ್ನು ನೀಡುವುದರಲ್ಲಿ 5.11 ಅಂಕಗಳಿಸುವ ಮೂಲಕ 6ನೇ ಸ್ಥಾನವನ್ನು ಪಡೆದುಕೊಂಡಿದೆ.

ರಾಜ್ಯದ ಒಟ್ಟು ಸ್ಥಿತಿ
ಪೊಲೀಸ್‌: ಕಾನೂನು ಸುವ್ಯವಸ್ಥೆಯನ್ನು ಕಾಪಾಡಿಕೊಳ್ಳುವಲ್ಲಿ ರಾಜ್ಯ 5.81 ಅಂಕಗಳಿಸಿದ್ದು, 6ನೇ ಸ್ಥಾನದಲ್ಲಿದೆ.
ಕಾರಾಗೃಹಗಳು : ಜೈಲಿನಲ್ಲಿನ ಜನಸಂದಣಿ ಮತ್ತು ಸಮರ್ಪಕ ಮಾನವ ಸಂಪನ್ಮೂಲ ಮಾನದಂಡದಲ್ಲಿ ಕರ್ನಾಟಕ ಮೂರನೇ ಸ್ಥಾನದಲ್ಲಿದ್ದು, 6.31 ಅಂಕವನ್ನು ಗಳಿಸಿದೆ.
ನ್ಯಾಯಾಂಗ: ನ್ಯಾಯಾಧೀಶರ ಲಭ್ಯತೆ, ಪ್ರಕರಣಗಳ ನಿರ್ಣಯ ದದಲ್ಲಿ 16ನೇ ಸ್ಥಾನದಲ್ಲಿರುವ ರಾಜ್ಯ ಕೇವಲ 3,76 ಅಂಕ ಗಳಿಸಿದೆ. ಕಾನೂನು ಸಹಾಯ: ಅವಶ್ಯರಿಗೆ ಕಾನೂನು ಸಹಾಯ ಒದಗಿಸು ವುದರಲ್ಲಿ 7ನೇ ಸ್ಥಾನದಲ್ಲಿರುವ ಕರ್ನಾಟಕ 5.22 ಅಂಕಗಳನ್ನು ಪಡೆದಿದೆ.

67.7 ಶೇ. ವಿಚಾರಣಾಧೀನ ಕೈದಿಗಳು
2016 ರ ಅಂಕಿ-ಅಂಶದ ಪ್ರಕಾರ ಭಾರತದ ಜೈಲಿನಲ್ಲಿ ಶೇ.67.7 ರಷ್ಟು ವಿಚಾರಣಾಧೀನ ಕೈದಿಗಳಿದ್ದಾರೆ.

2.8 ಕೋಟಿ ಪ್ರಕರಣಗಳು ಬಾಕಿ
ದೇಶದ ಅಧೀನ ನ್ಯಾಯಾಲಯಗಳಲ್ಲಿ 2.8 ಕೋಟಿ ಪ್ರಕರಣಗಳ ವಿಚಾರಣೆ ಬಾಕಿ ಇದ್ದು, ಮುಂದಿನ 5 ವರ್ಷಗಳು ಕಳೆದರೂ ಇದರ ಪ್ರಮಾಣದಲ್ಲಿ ಶೇ.24ರಷ್ಟು ಬಾಕಿ ಉಳಿಯಲಿದೆ.

621 ಅಧಿಕಾರಿಗಳು
ದೇಶದ ಒಟ್ಟು 1,412 ಕಾರಾಗೃಹಗಳಿಗೆ ಕೇವಲ 621 ಜೈಲು ಅಧಿಕಾರಿಗಳಿದ್ದಾರೆ.

68 ನೇ ಸ್ಥಾನ
ಕಾನೂನು ನಿಯಮ ಸೂಚ್ಯಂಕದಲ್ಲಿ ವಿಶ್ವದ 126 ದೇಶಗಳ ಪೈಕಿ ಭಾರತ 68ನೇ ಸ್ಥಾನದಲ್ಲಿದೆ.

59 ನೇ ಸ್ಥಾನ
ಹಿಂಸಾಕೃತ್ಯದಿಂದ ಆರ್ಥಿಕ ಪರಿಣಾಮದ ಕುರಿತ ಸೂಚ್ಯಂಕದಲ್ಲಿ ವಿಶ್ವದ 163 ದೇಶಗಳ ಪೈಕಿ ಭಾರತ 59ನೇ ಸ್ಥಾನ ಪಡೆದುಕೊಂಡಿದೆ.

ಟಾಪ್ ನ್ಯೂಸ್

Exam; ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆ-2ಕ್ಕೆ 1.49 ಲಕ್ಷ ವಿದ್ಯಾರ್ಥಿಗಳ ನೋಂದಣಿ

Exam; ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆ-2ಕ್ಕೆ 1.49 ಲಕ್ಷ ವಿದ್ಯಾರ್ಥಿಗಳ ನೋಂದಣಿ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Madhya Pradesh Rally; ಕೈಯಿಂದ ಮೀಸಲಾತಿ ಕಸಿಯುವ ಯತ್ನ: ಪ್ರಧಾನಿ ಮೋದಿ

Madhya Pradesh Rally; ಕೈಯಿಂದ ಮೀಸಲಾತಿ ಕಸಿಯುವ ಯತ್ನ: ಪ್ರಧಾನಿ ಮೋದಿ

Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್‌ ಗಾಂಧಿ

Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್‌ ಗಾಂಧಿ

Rajveer Diler: ಬಿಜೆಪಿ ಸಂಸದ ರಾಜವೀರ್ ದಿಲೇರ್ ಹೃದಯಾಘಾತದಿಂದ ನಿಧನ

Rajveer Diler: ಹೃದಯಾಘಾತದಿಂದ ಬಿಜೆಪಿ ಸಂಸದ ರಾಜ್‌ವೀರ್ ದಿಲೇರ್ ನಿಧನ

Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್

Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್

LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ

LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Exam; ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆ-2ಕ್ಕೆ 1.49 ಲಕ್ಷ ವಿದ್ಯಾರ್ಥಿಗಳ ನೋಂದಣಿ

Exam; ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆ-2ಕ್ಕೆ 1.49 ಲಕ್ಷ ವಿದ್ಯಾರ್ಥಿಗಳ ನೋಂದಣಿ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.