7 ಮಂದಿಯ ಮೇಲೆ ಆಕ್ರಮಣಕಾರಿ ದಾಳಿ ನಡೆಸಿದ್ದ ಬೀದಿ ನಾಯಿ ರೇಬೀಸ್ ನಿಂದ ಸಾವು
Team Udayavani, Feb 29, 2024, 8:57 PM IST
ಕೋಯಿಕ್ಕೋಡ್(ಕೇರಳ): ಇಲ್ಲಿನ ಕೂಡರಂಜಿ ಪೇಟೆಯಲ್ಲಿ ಮಂಗಳವಾರ ಬೆಳಗ್ಗೆ ಶಾಲಾ ವಿದ್ಯಾರ್ಥಿ ಸೇರಿದಂತೆ ಏಳು ಮಂದಿಯ ಮೇಲೆ ಆಕ್ರಮಣಕಾರಿ ದಾಳಿ ನಡೆಸಿದ್ದ ಬೀದಿ ನಾಯಿ ರೇಬೀಸ್ ನಿಂದ ಸಾವನ್ನಪ್ಪಿರುವುದು ಧೃಢಪಟ್ಟಿರುವುದು ಆತಂಕಕ್ಕೆ ಕಾರಣವಾಗಿದೆ.
ಶ್ವಾನ ಸತ್ತ ಬಳಿಕ ಮರಣೋತ್ತರ ಪರೀಕ್ಷೆ ನಡೆಸಲಾಗಿದ್ದು ರೇಬೀಸ್ ನಿಂದ ಸಾವನ್ನಪ್ಪಿರುವುದು ಖಚಿತವಾಗಿದೆ ಎಂದು ಹಿರಿಯ ಪಶು ವೈದ್ಯಾಧಿಕಾರಿಗಳು ತಿಳಿಸಿದ್ದಾರೆ. ಆರೋಗ್ಯ ಇಲಾಖೆ ನಿಗಾವಹಿಸಿ ಕಡಿತಕ್ಕೊಳಗಾದವರನ್ನು ಸರಕಾರಿ ವೈದ್ಯಕೀಯ ಕಾಲೇಜಿಗೆ ದಾಖಲಿಸಿ ಚಿಕಿತ್ಸೆ ಮತ್ತು ಲಸಿಕೆಗಳನ್ನು ನೀಡುತ್ತಿದೆ. ಗಾಯಾಳುಗಳಿಗೆ ತಲಾ ೧೦ ಸಾವಿರ ರೂ ಪರಿಹಾರ ಧನವನ್ನೂ ನೀಡಲಾಗುತ್ತಿದೆ.
ಸತ್ತಿರುವ ಶ್ವಾನ ಬೇರೆ ಯಾವುದೇ ಸಾಕು ಪ್ರಾಣಿಗಳಿಗೆ ಕಚ್ಚಿಲ್ಲ ಎಂದು ಹೇಳಲಾಗಿದೆಯಾದರೂ ನಿಗಾ ವಹಿಸಲಾಗಿದೆ. ನಾಯಿ ದಾಳಿಗೊಳಗಾದವರ ಪೈಕಿ ಬಾಲಕನಿಗೆ ಹೆಚ್ಚಿನ ಪ್ರಮಾಣದ ಗಾಯವಾಗಿದೆ. ಮಹಿಳೆ ಮತ್ತು ಇತರ ಐವರು ಪುರುಷರಾಗಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು
Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು
ಕಾಂಗ್ರೆಸ್ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ
Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು
ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು
MUST WATCH
ಹೊಸ ಸೇರ್ಪಡೆ
Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು
Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ
BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ
Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್
Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು