ಚೀನಕ್ಕೆ ಸೆಡ್ಡು- ಹಿಂದೂಮಹಾಸಾಗರದಲ್ಲಿ 120ಕ್ಕೂ ಅಧಿಕ ಯುದ್ಧನೌಕೆ ನಿಯೋಜನೆ
ಕಾರ್ಯತಂತ್ರದ ಪ್ರಾಮುಖ್ಯತೆಯನ್ನು ಪರಿಗಣಿಸಿ ರಕ್ಷಣಾ ಕಾರ್ಯಕ್ಕೆ ಆದ್ಯತೆ ನೀಡುತ್ತಿದೆ
Team Udayavani, Dec 11, 2020, 4:20 PM IST
ನವದೆಹಲಿ:ವಿವಿಧ ಕಾರ್ಯಾಚರಣೆಗಳಿಗೆ ಬೆಂಬಲ ನೀಡುವ ನಿಟ್ಟಿನಲ್ಲಿ ಹಿಂದೂ ಮಹಾಸಾಗರದಲ್ಲಿ 120ಕ್ಕೂ ಅಧಿಕ ಯುದ್ಧನೌಕೆಗಳನ್ನು ನಿಯೋಜಿಸಲಾಗಿದೆ ಎಂದು ಶುಕ್ರವಾರ ಸಿಡಿಎಸ್(ರಕ್ಷಣಾ ಪಡೆಗಳ ಮುಖ್ಯಸ್ಥ) ಬಿಪಿನ್ ರಾವತ್ ತಿಳಿಸಿದ್ದಾರೆ.
ಆಯಕಟ್ಟಿನ ಸಮುದ್ರ ಪ್ರದೇಶದಲ್ಲಿ ವಿವಿಧ ದೇಶಗಳು ಯುದ್ಧನೌಕೆಗಳ ಉಪಸ್ಥಿತಿಯನ್ನು ಹೆಚ್ಚಳ ಮಾಡುತ್ತಿರುವುದನ್ನು ಉಲ್ಲೇಖಿಸಿ ರಾವತ್ ಭಾರತದ ಕ್ರಮವನ್ನು ಸಮರ್ಥಿಸಿಕೊಂಡಿರುವುದಾಗಿ ವರದಿ ಹೇಳಿದೆ.
ಅಂತರ್ಜಾಲತಾಣದ ಮೂಲಕ ಸುದ್ದಿಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಜನರಲ್ ರಾವತ್, ಹಿಂದೂ ಮಹಾಸಾಗರ(ಐಒಆರ್)ದಲ್ಲಿ ಯುದ್ಧ ಕಾರ್ಯತಂತ್ರ ಸ್ಥಳಗಳಿಗಾಗಿ ಮತ್ತು ನೆಲೆಗಾಗಿ ಸ್ಪರ್ಧೆ ನಡೆಯುತ್ತಿದೆ, ಇದು ಮುಂದಿನ ದಿನಗಳಲ್ಲಿ ಈ ಪ್ರವೃತ್ತಿ ಇನ್ನೂ ಅಧಿಕವಾಗಲಿದೆ ಎಂದು ಈ ಸಂದರ್ಭದಲ್ಲಿ ಹೇಳಿದರು.
ಬಹುತೇಕ ದೇಶಗಳು ತಮ್ಮ ಸಮುದ್ರ ಪ್ರದೇಶದಲ್ಲಿ ಬೌಗೋಳಿಕ ಕಾರ್ಯತಂತ್ರದ ಪ್ರಾಮುಖ್ಯತೆಯನ್ನು ಪರಿಗಣಿಸಿ ರಕ್ಷಣಾ ಕಾರ್ಯಕ್ಕೆ ಆದ್ಯತೆ ನೀಡುತ್ತಿದೆ ಎಂದು ಸಿಡಿಎಸ್ ಚೀನಾದ ಹೆಸರನ್ನು ಉಲ್ಲೇಖಿಸದೇ ತಿಳಿಸಿದ್ದಾರೆ.
ಇದನ್ನೂ ಓದಿ:ಅಸ್ಸಾಂ: ಕುಡಿದ ಮತ್ತಿನಲ್ಲಿ ಮದುವೆ ಕಾರ್ಯಕ್ರಮದಲ್ಲಿ ಗಲಾಟೆ; ಓರ್ವ ಸಾವು, ಇಬ್ಬರಿಗೆ ಗಾಯ
ಹಿಂದೂ ಮಹಾಸಾಗರವನ್ನು ಭಾರತೀಯ ನೌಕಾಪಡೆಯ ಹಿಂಭಾಗದಲ್ಲಿದೆ ಎಂದು ಪರಿಗಣಿಸಲ್ಪಟ್ಟಿದೆ. ಇದು ಭಾರತದ ಕಾರ್ಯತಂತ್ರದ ಹಿತಾಸಕ್ತಿಗೆ ನಿರ್ಣಾಯಕವಾಗಿದೆ. ಈ ಪ್ರದೇಶದಲ್ಲಿ ಚೀನಾ ತನ್ನ ಅಸ್ತಿತ್ವ ಹೆಚ್ಚಿಕೊಳ್ಳು ಪ್ರಯತ್ನಿಸುತ್ತಿರುವುದಾಗಿ ವರದಿ ತಿಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Madhya Pradesh Rally; ಕೈಯಿಂದ ಮೀಸಲಾತಿ ಕಸಿಯುವ ಯತ್ನ: ಪ್ರಧಾನಿ ಮೋದಿ
Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್ ಗಾಂಧಿ
Rajveer Diler: ಹೃದಯಾಘಾತದಿಂದ ಬಿಜೆಪಿ ಸಂಸದ ರಾಜ್ವೀರ್ ದಿಲೇರ್ ನಿಧನ
Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್
LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ
MUST WATCH
ಹೊಸ ಸೇರ್ಪಡೆ
Exam; ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆ-2ಕ್ಕೆ 1.49 ಲಕ್ಷ ವಿದ್ಯಾರ್ಥಿಗಳ ನೋಂದಣಿ
ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್ ಬ್ರಿಜೇಶ್ ಚೌಟ
ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್ ಬೆಂಬಲಿಸಿ: ಪದ್ಮರಾಜ್ ಪೂಜಾರಿ
ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ
ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ