ರಫೇಲ್: ರಾಹುಲ್-ರವಿಶಂಕರ್ ಜಗಳ್ಬಂದಿ
Team Udayavani, Feb 13, 2019, 12:30 AM IST
ರಫೇಲ್ ಡೀಲ್ ಸಂಬಂಧ ಪ್ರಧಾನಿ ಮೋದಿ ಅವರು ಉದ್ಯಮಿ ಅನಿಲ್ ಅಂಬಾನಿ ಮಧ್ಯವರ್ತಿಯಂತೆ ವರ್ತಿಸಿದ್ದಾರೆ ಎಂದು ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ದೂರಿದ್ದಾರೆ. ಅದಕ್ಕೆ ಕೇಂದ್ರ ಸಚಿವ ರವಿಶಂಕರ ಪ್ರಸಾದ್ ತಿರುಗೇಟು ನೀಡಿ, ಪ್ರತಿಸ್ಪರ್ಧಿ ಕಂಪೆನಿಗಳ ಪರ ರಾಹುಲ್ ಲಾಬಿ ಮಾಡುತ್ತಿದ್ದಾರೆ ಎಂದಿದ್ದಾರೆ.
ಪ್ರಧಾನಿ ಮೋದಿಯವರು ಉದ್ಯಮಿ ಅನಿಲ್ ಅಂಬಾನಿ ಮಧ್ಯವರ್ತಿಯಂತೆ ವರ್ತಿಸಿದ್ದಾರೆ. ರಕ್ಷಣಾ ಸಚಿವರಾಗಿದ್ದ ಪಾರೀಕರ್, ವಿದೇಶಾಂಗ ಕಾರ್ಯದರ್ಶಿಯಾಗಿದ್ದ ಎಸ್. ಜೈಶಂಕರ್ಗಿಂತ ಮೊದಲೇ ಡೀಲ್ನ ವಿವರ ಅವರಿಗೆ ಗೊತ್ತಾದದ್ದು ಹೇಗೆ? ಹೀಗಾಗಿ ನರೇಂದ್ರ ಮೋದಿ ದೇಶದ್ರೋಹದ ಕೆಲಸ ಮಾಡಿದ್ದಾರೆ.
ಪ್ರಧಾನಿಯವರೇ ಅನಿಲ್ ಅಂಬಾನಿಗೆ ಮಾಹಿತಿ ನೀಡಿದ್ದಾರೆ. ಗೂಢಚರರು ಮಾಡುವ ಕೆಲಸವನ್ನು ಅವರು ಮಾಡಿದ್ದಾರೆ. ಜತೆಗೆ ಇದು ಅಧಿಕೃತ ರಹಸ್ಯ ಕಾಯ್ದೆ ಉಲ್ಲಂಘನೆ. ಹೀಗಾಗಿ ಅವರ ವಿರುದ್ಧ ಕ್ರಿಮಿನಲ್ ತನಿಖೆಯಾಗಬೇಕು.
ರಫೇಲ್ ಬಗೆಗಿನ ಸಿಎಜಿ ನೀಡಿದ್ದು ವ್ಯರ್ಥ ವರದಿ. ಅದು ಚೌಕಿದಾರ್ ಆಡಿಟರ್ ಜನರಲ್ ವರದಿ ಎಂದು ಬಣ್ಣಿಸುತ್ತೇನೆ. ಅದು ಚೌಕಿದಾರನೇ ಬರೆದ ವರದಿ.
– ರಾಹುಲ್ ಗಾಂಧಿ
ರಾಹುಲ್ ಗಾಂಧಿ ಪ್ರತಿಸ್ಪರ್ಧಿ ವಿಮಾನ ಕಂಪೆನಿಗಳ ಪರ ಲಾಬಿ ಮಾಡುವವರಂತೆ ಮಾತನಾಡು ತ್ತಿದ್ದಾರೆ. ಏರ್ಬಸ್ನ ಹಿರಿಯ ಅಧಿಕಾರಿಯ ಇ-ಮೇಲ್ ಅವರಿಗೆ ಸಿಕ್ಕಿದ್ದು ಹೇಗೆ?
ಪ್ರಾಮಾಣಿಕ ಪ್ರಧಾನಿಯನ್ನು ದೇಶದ್ರೋಹಿ ಎಂದು ಕರೆಯುವ ಮೂಲಕ ತಮ್ಮ ಮುಖಕ್ಕೆ ತಾವೇ ಹೊಲಸು ಎರಚಿಕೊಂಡಿದ್ದಾರೆ. ಅವರ ಹೇಳಿಕೆ ನಾಚಿಕೆಗೇಡಿತನದ್ದು ಮತ್ತು ಬೇಜವಾಬ್ದಾರಿಯುತವಾದದ್ದು.
ಅವರ ಕುಟುಂಬದ ಸದಸ್ಯರು ದೇಶವನ್ನೇ ಲೂಟಿ ಮಾಡಿದ್ದಾರೆ. ಜಮೀನು ಕಬಳಿಕೆ ಆರೋಪಕ್ಕೆ ಗುರಿಯಾಗಿರುವವರು ಈಗ ಜಾಮೀನಿನ ಮೇಲೆ ಬಿಡುಗಡೆಯಾಗಿದ್ದಾರೆ.
ರವಿಶಂಕರ್ ಪ್ರಸಾದ್
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಏ.26ರಂದು 2ನೇ ಹಂತದ ಚುನಾವಣೆ;ರಾಹುಲ್, ತರೂರ್, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ
EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…
Singapore ಏರ್ ಲೈನ್ಸ್ ಪೈಲಟ್ ನಂತೆ ಪೋಸ್ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!
Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ
JEE; ಮಹಾರಾಷ್ಟ್ರ ರೈತನ ಮಗ ಮೇನ್ ಟಾಪರ್
MUST WATCH
ಹೊಸ ಸೇರ್ಪಡೆ
Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ
ಮೊದಲ ಬಾರಿ ಕುಂದಾನಗರಿಯಲ್ಲಿ ಪ್ರಧಾನಿ ಮೋದಿ ವಾಸ್ತವ್ಯ; 28ಕ್ಕೆ ಸಮಾವೇಶ
ಬಿಸಿಲ ಝಳದಿಂದ ಮೈದಾನಗಳು ಖಾಲಿ; ಮಕ್ಕಳ ಆಟಕ್ಕೂ ಉರಿ ಬಿಸಿಲು ಅಡ್ಡಿ!
Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ
INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್