ರಫೇಲ್‌ ಕಡತ ಕಳ್ಳತನ ಕೇಸ್‌ಗೆ ಆದ್ಯತೆ


Team Udayavani, Mar 15, 2019, 12:30 AM IST

20.jpg

ಹೊಸದಿಲ್ಲಿ: ರಫೇಲ್‌ ಡೀಲ್‌ ಕುರಿತ ತೀರ್ಪಿನ ಮರುಪರಿಶೀಲನೆ ಅರ್ಜಿಯಲ್ಲಿ ಕದ್ದ ದಾಖಲೆಗಳಿವೆ ಎಂಬ ಕೇಂದ್ರದ ಆಕ್ಷೇಪಣೆಯನ್ನು ಆದ್ಯತೆಯ ಮೇರೆಗೆ ಪರಿಗಣಿಸಲು ಸುಪ್ರೀಂಕೋರ್ಟ್‌ ನಿರ್ಧರಿಸಿದೆ. ನಂತರ ರಫೇಲ್‌ ಒಪ್ಪಂದದಲ್ಲಿನ ಅವ್ಯವಹಾರ ಆರೋಪದ ಪರಿಶೀಲನೆ ನಡೆಸಲಾಗುತ್ತದೆ ಎಂದು ಮುಖ್ಯ ನ್ಯಾಯಮೂರ್ತಿ ರಂಜನ್‌ ಗೊಗೋಯ್‌ ನೇತೃತ್ವದ ಪೀಠ ಹೇಳಿದೆ. ಈ ಸಂಬಂಧ ಸರಕಾರದ ವಾದವನ್ನು ಸುಪ್ರೀಂಕೋರ್ಟ್‌ ಆಲಿಸಿದ್ದು, ತೀರ್ಪು ಕಾಯ್ದಿರಿಸಿದೆ. ದಾಖಲೆಗಳನ್ನು ಪರಿಶೀಲಿಸಿ ಶೀಘ್ರದಲ್ಲೇ ಈ ಸಂಬಂಧ ಆದೇಶ ಪ್ರಕಟಿಸಲಿದೆ. 

ಈ ಬಗ್ಗೆ ವಾದ ಮಂಡಿಸಿದ ಅಟಾರ್ನಿ ಜನರಲ್‌ ಕೆ.ಕೆ ವೇಣುಗೋಪಾಲ್‌, ಸಚಿವಾಲ ಯದ ಅನುಮತಿ ಇಲ್ಲದೇ ದಾಖಲೆಗಳನ್ನು ಸಾಕ್ಷ್ಯಗಳನ್ನಾಗಿ ಕೋರ್ಟ್‌ನಲ್ಲಿ ಮಂಡಿಸಲಾ ಗದು. ಈ ಪ್ರಕರಣದಲ್ಲಿ ದಾಖಲೆಗಳನ್ನು ಕಳ್ಳತನ ಮಾಡಿ ಸಲ್ಲಿಸಲಾಗಿದೆ. ಅಷ್ಟೇ ಅಲ್ಲ, ತನ್ನ ವಾದಕ್ಕೆ ಅವರು ಸಾಕ್ಷ್ಯ ಕಾಯ್ದೆಯಲ್ಲಿ ನಮೂದಿಸಿರುವ ನಿಯಮಗಳನ್ನೂ ಉಲ್ಲೇಖೀಸಿದ್ದಾರೆ.

ಆದರೆ ಇದಕ್ಕೆ ಆಕ್ಷೇಪಿಸಿದ ವಕೀಲ ಪ್ರಶಾಂತ್‌ ಭೂಷಣ್‌ ರಫೇಲ್‌ಗೆ ಸಂಬಂಧಿಸಿದಂತೆ ಗೌಪ್ಯ ದಾಖಲೆಗಳು ಎಂದು ಸರಕಾರ ಹೇಳುವ ದಾಖಲೆಗಳು ಈಗಾಗಲೇ ಸಾರ್ವಜನಿಕವಾಗಿವೆ. ಹೀಗಾಗಿ ಇದನ್ನು ಗೌಪ್ಯ ಎಂದು ಪರಿಗಣಿಸಲಾಗದು. ಇದೇ ವೇಳೆ, ದೂರುದಾರ ಅರುಣ್‌ ಶೌರಿ, ಈ ದಾಖಲೆಗಳು ಮೂಲ ದಾಖಲೆಗಳ ನಕಲು ಪ್ರತಿಗಳು ಎಂದು ಹೇಳುವ ಮೂಲಕ ಇದರ ಅಸಲಿಯತ್ತನ್ನು ಸರಕಾರವೇ ಸಾಬೀತುಪಡಿಸಿದೆ ಎಂದಿದ್ದಾರೆ. ಅಲ್ಲದೆ, ದೇಶದ ಭದ್ರತೆಗೆ ಅಪಾಯ ಒಡ್ಡಬಹುದು ಎಂದು ಸರಕಾರ ವಾದಿಸುವ ಈ ದಾಖಲೆಗಳು ಮಾಹಿತಿ ಹಕ್ಕು ಕಾಯ್ದೆಯ ವ್ಯಾಪ್ತಿಗೆ ಬರುತ್ತದೆ. ಭ್ರಷ್ಟಾಚಾರ ಹಾಗೂ ಮಾನವ ಹಕ್ಕುಗಳ ಉಲ್ಲಂಘನೆ ವಿಚಾರ ಬಂದಾಗ ಸಾರ್ವಜನಿಕ ಹಿತಾಸಕ್ತಿಯೇ ಮುಖ್ಯವಾಗು ತ್ತದೆ. ಹೀಗಾಗಿ ಇದನ್ನು ನಾವು ಆರ್‌ಟಿಐ ಅಡಿಯಲ್ಲಿ ಪರಿಗಣಿಸಬಹುದು ಎಂದು ನ್ಯಾಯಪೀಠ ಹೇಳಿದೆ. ಇದಕ್ಕೂ ಮೊದಲು, ರಫೇಲ್‌ಗೆ ಸಂಬಂಧಿಸಿದ ದಾಖಲೆಗಳನ್ನು ಸಂಬಂಧಪಟ್ಟ ಇಲಾಖೆಯ ಅನುಮತಿಯಿ ಲ್ಲದೇ ಯಾರೂ ಕೋರ್ಟ್‌ಗೆ ಸಲ್ಲಿಸುವಂತಿಲ್ಲ ಎಂದು ಅಟಾರ್ನಿ ಜನರಲ್‌ ವಾದಿಸಿದ್ದರು.

ಟಾಪ್ ನ್ಯೂಸ್

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Delhi LG: ಕೇರಳ ಚರ್ಚುಗಳಿಗೆ ದಿಲ್ಲಿ ಗೌರ್ನರ್‌ ಭೇಟಿ; ಆಯೋಗಕ್ಕೆ “ಕೈ’ ದೂರು

Delhi LG: ಕೇರಳ ಚರ್ಚುಗಳಿಗೆ ದಿಲ್ಲಿ ಗೌರ್ನರ್‌ ಭೇಟಿ; ಆಯೋಗಕ್ಕೆ “ಕೈ’ ದೂರು

Odisha: ಎನ್‌ಕೌಂಟರ್‌; ಇಬ್ಬರು ನಕ್ಸಲರ ಹತ್ಯೆ

Odisha: ಎನ್‌ಕೌಂಟರ್‌; ಇಬ್ಬರು ನಕ್ಸಲರ ಹತ್ಯೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.