ರಫೇಲ್ ದಾಖಲೆ ಅಂಗೀಕಾರ
ಸುಪ್ರೀಂಕೋರ್ಟಿಂದ ಮಹತ್ವದ ಆದೇಶ
Team Udayavani, Apr 11, 2019, 6:00 AM IST
ಹೊಸದಿಲ್ಲಿ: ಬಹುಕೋಟಿ ರೂ.ಮೌಲ್ಯದ ರಫೇಲ್ ಡೀಲ್ಗೆ ಸಂಬಂಧಿಸಿದಂತೆ ಸೋರಿಕೆ ಯಾಗಿರುವ ದಾಖಲೆಗಳನ್ನು ವಿಚಾರಣೆಗೆ ಪರಿಗಣಿಸುವುದಾಗಿ ಸುಪ್ರೀಂಕೋರ್ಟ್ ಹೇಳಿದೆ. ಅದನ್ನು ಪರಿಗಣಿಸ ಬಾರದು ಎಂದು ಕೇಂದ್ರ ಸರಕಾರ ಮಾಡಿಕೊಂಡಿರುವ ಮನವಿಯನ್ನು ಮುಖ್ಯ ನ್ಯಾಯಮೂರ್ತಿ ರಂಜನ್ ಗೊಗೋಯ್ ನೇತೃತ್ವದ ನ್ಯಾಯಪೀಠ ತಿರಸ್ಕರಿಸಿದೆ. ಈ ನಿಟ್ಟಿನಲ್ಲಿ ನ್ಯಾಯಪೀಠ ಎರಡು ಪ್ರತ್ಯೇಕ ತೀರ್ಪುಗಳನ್ನು ನೀಡಿದೆ. ಸೋರಿಕೆಯಾಗಿರುವ ದಾಖಲೆಗಳು ಭಾರತೀಯ ಸಾಕ್ಷ್ಯ ಕಾಯ್ದೆ ನಿಯಮ ಉಲ್ಲಂಘನೆ ಮತ್ತು ರಕ್ಷಣಾ ಇಲಾಖೆಯ ಅನುಮೋದನೆ ಇಲ್ಲದೆ ದಾಖಲೆಗಳನ್ನು ಪಡೆಯಲಾಗಿದೆ ಎಂಬ ಸರಕಾರ ಇದುವರೆಗೆ ಮಾಡುತ್ತಾ ಬಂದಿದ್ದ ವಾದಗಳನ್ನು ನ್ಯಾಯ ಪೀಠ ತಿರಸ್ಕರಿಸಿದೆ. ಮಾಹಿತಿ ಹಕ್ಕು ಕಾಯ್ದೆಯ ಅನ್ವಯ ದಾಖಲೆಗಳನ್ನು ಹೊರಗಿಡಲಾಗಿದೆ ಎಂಬ ಅಂಶವನ್ನು ನ್ಯಾಯಪೀಠಕ್ಕೆ ಮನವರಿಕೆ ಮಾಡುವಲ್ಲಿ ಕೇಂದ್ರ ವಿಫಲವಾಯಿತು.
ಡೀಲ್ ಬಗ್ಗೆ ತನಿಖೆಯಾಗಬೇಕೆಂದು ನ್ಯಾಯವಾದಿ ಪ್ರಶಾಂತ್ ಭೂಷಣ್, ಮಾಜಿ ಸಚಿವರಾದ ಅರುಣ್ ಶೌರಿ, ಯಶವಂತ ಸಿನ್ಹಾ ಮೇಲ್ಮನವಿ ಸಲ್ಲಿಸಿದ್ದರು. ವಿಪಕ್ಷಗಳು ಸುಪ್ರೀಂಕೋರ್ಟ್ ಆದೇಶವನ್ನು ಸ್ವಾಗತಿಸಿವೆ. ಅಮೇಠಿಯಲ್ಲಿ ಮಾತನಾಡಿದ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ, “ಚೌಕಿದಾರ ಕಳ್ಳ ಎನ್ನುವುದು ಈಗ ಸಾಬೀತಾಗಿದೆ. ಇದು ನ್ಯಾಯ ಸಂದ ದಿನ’ ಎಂದು ಹೇಳಿದ್ದಾರೆ.
ರಾಹುಲ್ ಗಾಂಧಿ ಹೇಳಿಕೆಗೆ ಖಂಡಿಸಿರುವ ರಕ್ಷಣಾ ಸಚಿವೆ ನಿರ್ಮಲಾ ಸೀತಾರಾಮನ್ “ಇದೊಂದು ನ್ಯಾಯಾಂಗ ನಿಂದನೆ’ ಎಂದಿದ್ದಾರೆ. ಸೋರಿಕೆಯಾದ ದಾಖಲೆಗಳನ್ನು ಪರಿಗಣಿಸಬಹುದು ಎಂದಷ್ಟೇ ಕೋರ್ಟ್ ಹೇಳಿದೆ. ರಾಹುಲ್ ಕೋರ್ಟ್ ಆದೇಶದ ಅರ್ಧ ಭಾಗವನ್ನೂ ಓದಿಲ್ಲ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಅಂಡಾಶಯದ ಕ್ಯಾನ್ಸರ್ ನಿಂದ 30 ರ ಹರೆಯದಲ್ಲಿ ಖ್ಯಾತ ಫ್ಯಾಷನ್ ಇನ್ ಫ್ಲುಯೆನ್ಸರ್ ನಿಧನ
Lok Sabha Election 2024: ಝಾರ್ಖಂಡ್, ಛತ್ತೀಸ್ಗಢದಲ್ಲಿ ಗೆಲುವು ಯಾರಿಗೆ?
ಗ್ಯಾಂಗ್ ಸ್ಟರ್ ಬಿಷ್ಣೋಯಿ ಹೆಸರಿನಿಂದ ಸಲ್ಮಾನ್ ಮನೆಯಿಂದ ಕ್ಯಾಬ್ ಬುಕ್: ಯುವಕ ಅರೆಸ್ಟ್
Snake: 50 ಅಡಿ ಉದ್ದದ ದೈತ್ಯ ಹಾವು “ವಾಸುಕಿ’!
Mahanadi River Tragedy: ಮಗುಚಿದ 50 ಜನರಿದ್ದ ದೋಣಿ; ಇಬ್ಬರು ಸಾವು; ಎಂಟು ಮಂದಿ ನಾಪತ್ತೆ
MUST WATCH
ಹೊಸ ಸೇರ್ಪಡೆ
ʼಭಜರಂಗಿ ಭಾಯಿಜಾನ್ʼ, ʼರೌಡಿ ರಾಥೋರ್ʼ ಸೀಕ್ವೆಲ್ ಬಗ್ಗೆ ಬಿಗ್ ಅಪ್ಡೇಟ್ ಕೊಟ್ಟ ನಿರ್ಮಾಪಕ
Mysore; ನೇಹಾ ಪ್ರಕರಣವನ್ನು ರಾಜಕೀಯಕ್ಕೆ ಬಳಸಿಕೊಳ್ಳುವುದು ದುರ್ದೈವದ ಸಂಗತಿ: ಸಿದ್ದರಾಮಯ್ಯ
Revealed; ನೇಹಾ ಹಿರೇಮಠ ಹಂತಕ ಫಯಾಜ್ನ ಮತ್ತೊಂದು ಕರಾಳ ಮುಖ ಅನಾವರಣ
Congress: ಸರ್ಕಾರದ ಯೋಜನೆಗಳು ಜನಸ್ನೇಹಿಯಾಗಿರಬೇಕು: ಕೆ.ಜಯಪ್ರಕಾಶ್ ಹೆಗ್ಡೆ
Bidar; ಖೂಬಾ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡುವೆ: ಈಶ್ವರ್ ಖಂಡ್ರೆ