ಎನ್ಪಿಎ: ರಾಜನ್ ಸಲಹೆ
Team Udayavani, Aug 20, 2018, 6:00 AM IST
ನವದೆಹಲಿ: ಹೆಚ್ಚುತ್ತಿರುವ ಅನುತ್ಪಾದಕ ಆಸ್ತಿಗಳ (ಎನ್ಪಿಎ) ಸಮಸ್ಯೆ ಬಗೆಹರಿಸಲು ಸಂಸದೀಯ ಸಮಿತಿಯು ಆರ್ಬಿಐನ ಮಾಜಿ ಗವರ್ನರ್ ರಘುರಾಮ್ ರಾಜನ್ ಅವರ ಸಲಹೆ ಕೇಳಲಿದೆ. ಸಮಿತಿಯ ಮುಂದೆ ಹಾಜರಾಗಿ ಸಮಸ್ಯೆಯ ಕುರಿತು ಮಾಹಿತಿ ನೀಡುವಂತೆ ರಾಜನ್ ಅವರಿಗೆ ಬಿಜೆಪಿಯ ಹಿರಿಯ ಸಂಸದ ಮುರಳಿ ಮನೋಹರ್ ಜೋಶಿ ನೇತೃತ್ವದ ಸಮಿತಿ ಆಹ್ವಾನಿಸಿದೆ. ಎನ್ಪಿಎ ಬಿಕ್ಕಟ್ಟನ್ನು ಗುರುತಿಸುವಲ್ಲಿ ಹಾಗೂ ಪರಿಹರಿ ಸುವಲ್ಲಿ ರಾಜನ್ ವಹಿಸಿದ್ದ ಪಾತ್ರವನ್ನು ಇತ್ತೀಚೆಗಷ್ಟೇ ಮಾಜಿ ಮುಖ್ಯ ಆರ್ಥಿಕ ಸಲಹೆಗಾರ (ಸಿಇಎ) ಅರವಿಂದ್ ಸುಬ್ರಮಣಿಯನ್ ಅವರು ಇದೇ ಸಮಿತಿಯ ಮುಂದೆ ಶ್ಲಾಘಿಸಿದ್ದರು. 2016ರ ಸೆಪ್ಟೆಂಬರ್ ತನಕ 3 ವರ್ಷಗಳ ಕಾಲ ರಾಜನ್ ಆರ್ಬಿಐ ಗವರ್ನರ್ ಆಗಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Helicopter Crash: ಹೆಲಿಕಾಪ್ಟರ್ ಪತನ… ಕೂದಲೆಳೆಯ ಅಂತರದಲ್ಲಿ ಪಾರಾದ ಶಿವಸೇನಾ ಉಪನಾಯಕಿ
Tragedy: ಮೊಬೈಲ್ ಬೆಳಕಿನಲ್ಲಿ ಸಿಸೇರಿಯನ್ ಹೆರಿಗೆಗೆ ಮುಂದಾದ ವೈದ್ಯರು.. ತಾಯಿ, ಮಗು ಮೃತ್ಯು
Harassment: ಪಶ್ಚಿಮ ಬಂಗಾಳದ ರಾಜ್ಯಪಾಲರಿಂದ ಮಹಿಳೆಗೆ ಲೈಂಗಿಕ ಕಿರುಕುಳ ಆರೋಪ
Lok Sabha Election: ರಾಯ್ಬರೇಲಿಯಿಂದ ರಾಹುಲ್, ಅಮೇಥಿಯಿಂದ ಕೆ.ಎಲ್. ಶರ್ಮ ಕಣಕ್ಕೆ
CBI ಏಜೆನ್ಸಿ ನಮ್ಮ ನಿಯಂತ್ರಣದಲ್ಲಿಲ್ಲ: ಸುಪ್ರೀಂಗೆ ಕೇಂದ್ರ ಮಾಹಿತಿ