Ram ಮಂದಿರ ಉದ್ಘಾಟನೆಗೆ ಹೋದ ಬಚ್ಚನ್ ಕುಟುಂಬದ ವಿರುದ್ಧ ರಾಹುಲ್ ಟೀಕೆ
Team Udayavani, Feb 19, 2024, 12:03 AM IST
ಪ್ರಯಾಗ್ರಾಜ್: ಅಯೋಧ್ಯೆಯ ರಾಮ ಮಂದಿರ ಉದ್ಘಾಟನೆ ಕಾರ್ಯಕ್ರಮದಲ್ಲಿ ಬಾಲಿವುಡ್ ನಟ ಅಮಿತಾಭ್ ಬಚ್ಚನ್, ನಟಿ ಐಶ್ವರ್ಯಾ ರೈ ಭಾಗವಹಿಸಿದ್ದಕ್ಕೆ ಸಂಸದ ರಾಹುಲ್ ಗಾಂಧಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಉ.ಪ್ರ. ಪ್ರಯಾಗ್ರಾಜ್ನಲ್ಲಿ ಭಾರತ್ ಜೋಡೋ ನ್ಯಾಯ ಯಾತ್ರೆ ವೇಳೆ ಮಾತನಾಡಿದ ಅವರು, ಪ್ರಧಾನಿ ಮೋದಿ ವಿರುದ್ಧ ವಾಗ್ಧಾಳಿ ನಡೆಸುವ ವೇಳೆ ಬಚ್ಚನ್, ಐಶ್ವರ್ಯಾ ರೈ ಹೆಸರನ್ನೂ ಪ್ರಸ್ತಾವಿಸಿದರು.
“ಮಂದಿರ ಉದ್ಘಾಟನೆಯಲ್ಲ ದೇಶ ಮುನ್ನಡೆಸುವ ಎಸ್ಸಿ, ಎಸ್ಟಿ, ಒಬಿಸಿ ಸಮುದಾಯ ಭಾಗಿಯಾಗಿತ್ತೇ? ಅವರ ಬದಲಾಗಿ ಪ್ರಧಾನಿ ಜತೆಗೆ ಅಮಿತಾಭ್ ಬಚ್ಚನ್, ಐಶ್ವರ್ಯಾ ರೈ ಭಾಗವಹಿಸಿದ್ದರು. ಅವರು ನೀವು ಯಾರೂ ದೇಶವನ್ನು ಮುನ್ನಡೆಸುವವರು ಸಾಧ್ಯವಿಲ್ಲ ಎಂಬುದನ್ನು ತೋರಿಸಿಕೊಡಲು ಮುಂದಾಗಿದ್ದಾರೆ’ ಎಂದರು.
ರಾಹುಲ್ ನ್ಯಾಯ ಯಾತ್ರೆಗೆ ಹೋಗಲ್ಲ: ಅಖೀಲೇಶ್
ಲಕ್ನೋ: ಕಾಂಗ್ರೆಸ್ ಮತ್ತು ಎಸ್ಪಿ ನಡುವಿನ ಮೈತ್ರಿಯೂ ಮುರಿಯುತ್ತಾ? ಹಾಗೊಂದು ವದಂತಿ ಹರಿದಾಡುತ್ತಿದೆ. ಉತ್ತರಪ್ರದೇಶದಲ್ಲಿ ನಡೆಯುತ್ತಿರುವ ರಾಹುಲ್ ಗಾಂಧಿಯವರ “ಭಾರತ್ ಜೋಡೋ ನ್ಯಾಯ ಯಾತ್ರೆ’ಯಲ್ಲಿ ಭಾಗವಹಿಸಲು ಸಮಾಜವಾದಿ ಪಕ್ಷದ ಅಧ್ಯಕ್ಷ ಅಖೀಲೇಶ್ ಯಾದವ್ ನಿರಾಕರಿಸಿ ದ್ದಾರೆ. ಇದರ ಜತೆಗೆ ಲೋಕಸಭೆ ಚುನಾವಣೆಗಾಗಿ 2 ಪಕ್ಷಗಳ ನಡುವೆ ಸ್ಥಾನ ಹೊಂದಾಣಿಕೆಯೂ ಅಂತಿಮಗೊಂಡಿಲ್ಲ. ಹಿಂದಿನ ಸಂದರ್ಭಗಳಲ್ಲಿ ಅಖೀಲೇಶ್ ಯಾದವ್ ರಾಹುಲ್ ಅವರ ಯಾತ್ರೆಗೆ ಆಹ್ವಾನ ನೀಡಿರಲಿಲ್ಲ ಎಂದು ತಕರಾರು ತೆಗೆದಿದ್ದರು.
ಪಶ್ಚಿಮ ಬಂಗಾಲ, ಬಿಹಾರ, ಪಂಜಾಬ್ನಲ್ಲಿ ಇಂಡಿಯಾ ಒಕ್ಕೂಟ ಪಕ್ಷಗಳ ನಡುವೆ ಸ್ಥಾನ ಹೊಂದಾಣಿಕೆ ಮುರಿದು ಬಿದ್ದಿದೆ. ಉತ್ತರ ಪ್ರದೇಶ, ದಿಲ್ಲಿ, ಮಹಾರಾಷ್ಟ್ರಗಳಲ್ಲಿ ಸ್ಥಾನ ಹೊಂದಾಣಿಕೆ ಬಗ್ಗೆ ಇನ್ನೂ ಅಂತಿಮ ನಿರ್ಧಾರವಾಗಿಲ್ಲ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Gujarat ಕರಾವಳಿಯಲ್ಲಿ ಪಾಕ್ ಬೋಟ್ ನಿಂದ 600 ಕೋಟಿ ಮೌಲ್ಯದ ಹೆರಾಯಿನ್ ವಶ
ಕಾಂಗ್ರೆಸ್ ಗೆ ಆಘಾತ; ರಾಜೀನಾಮೆ ನೀಡಿದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ
Mahadev Betting App Case; ಮುಂಬೈ ಪೊಲೀಸರಿಂದ ನಟ ಸಾಹಿಲ್ ಖಾನ್ ಬಂಧನ
Gyani Uncle; ಪ್ರಧಾನಿ ಮೋದಿಯನ್ನು ಉಪದೇಶ ನೀಡುವ ಅಂಕಲ್ ಎಂದ ಪ್ರಿಯಾಂಕಾ ಗಾಂಧಿ
Congress ಗೆದ್ದರೆ ದೇಶದಲ್ಲಿ ಗೋ ಹತ್ಯೆ ಖಚಿತ: ಯೋಗಿ ಆದಿತ್ಯನಾಥ್
MUST WATCH
ಹೊಸ ಸೇರ್ಪಡೆ
Gujarat ಕರಾವಳಿಯಲ್ಲಿ ಪಾಕ್ ಬೋಟ್ ನಿಂದ 600 ಕೋಟಿ ಮೌಲ್ಯದ ಹೆರಾಯಿನ್ ವಶ
Mangaluru Airport; ಗುದನಾಳದಲ್ಲಿ ಬಚ್ಚಿಟ್ಟ 54 ಲಕ್ಷ ರೂ. ಮೌಲ್ಯದ ಅಕ್ರಮ ಚಿನ್ನ ಪತ್ತೆ !
Indi ಲಚ್ಯಾಣ ಮಹಾರಥೋತ್ಸವದಲ್ಲಿ ಅವಘಡ: ರಥದ ಗಾಲಿಗೆ ಸಿಲುಕಿ ಇಬ್ಬರು ಮೃತ್ಯು
RCB ಕಮಾಲ್; ವಿಲ್ ಜಾಕ್ಸ್ ರೋಮಾಂಚನಕಾರಿ ಶತಕ: ಗುಜರಾತ್ ವಿರುದ್ಧ ಅತ್ಯಮೋಘ ಜಯ
Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ