ರಜೆ ಮತ್ತು ಕೆಲಸದ ದಿನಗಳ ನಡುವಿನ ವ್ಯತ್ಯಾಸವೇ ಅಂತ್ಯ: ಬಿಜೆಪಿ ವಿರುದ್ಧ ರಾಹುಲ್ ವಾಗ್ದಾಳಿ
Team Udayavani, Sep 12, 2021, 5:56 PM IST
ನವದೆಹಲಿ : ನಿರುದ್ಯೋಗ ವಿಚಾರ ಮುಂದಿಟ್ಟುಕೊಂಡು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಕೇಂದ್ರ ಬಿಜೆಪಿ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ.
ಬಿಜೆಪಿ ಆಡಳಿತಾವಧಿಯಲ್ಲಿ ಯುವಕರಿಗೆ ಉದ್ಯೋಗ ಇಲ್ಲದಂತಾಗಿದೆ ಎಂದು ಟೀಕಿಸಿರುವ ಅವರು, ‘ಈ ಸರ್ಕಾರದ ಅಭಿವೃದ್ಧಿ ಹೇಗಿದೆ ಎಂದರೆ ವಾರದ ರಜೆ ಮತ್ತು ಕೆಲಸದ ದಿನಗಳ ನಡುವಿನ ವ್ಯತ್ಯಾಸವೇ ಅಂತ್ಯವಾಗಿದೆ. ಉದ್ಯೋಗವೇ ಇಲ್ಲದಿದ್ದಾಗ ಭಾನುವಾರ ಮತ್ತು ಸೋಮವಾರ ಒಂದೇ ರೀತಿ ಇರುತ್ತದೆ’ ಎಂದು ವಾಗ್ದಾಳಿ ನಡೆಸಿದ್ದಾರೆ.
ಅಮೆರಿಕದ ವಾಹನ ತಯಾರಿಕಾ ಕಂಪನಿ ಫೋರ್ಡ್ ಭಾರತದಲ್ಲಿ ವಾಹನ ತಯಾರಿಕೆಯನ್ನು ನಿಲ್ಲಿಸಲು ನಿರ್ಧರಿಸಿದೆ. ಇದರಿಂದಾಗಿ 4,000 ಸಣ್ಣ ಸಂಸ್ಥೆಗಳು ಮುಚ್ಚಬಹುದು ಎಂಬುದಾಗಿ ಸಿಬ್ಬಂದಿಯೊಬ್ಬರ ಹೇಳಿಕೆಯನ್ನು ಉಲ್ಲೇಖಿಸಿರುವ ಮಾಧ್ಯಮ ವರದಿಯೊಂದನ್ನು ರಾಹುಲ್ ಗಾಂಧಿ ಅವರು ತಮ್ಮ ಟ್ವಿಟರ್ ಖಾತೆಯಲ್ಲಿ ಹಂಚಿಕೊಂಡಿದ್ದಾರೆ.
‘ಬಿಜೆಪಿ ಸರ್ಕಾರ ಕೈಗೊಳ್ಳುತ್ತಿರುವ ಅಭಿವೃದ್ಧಿಯಲ್ಲಿ ಭಾನುವಾರ ಮತ್ತು ಸೋಮವಾರದ ನಡುವಿನ ಎಲ್ಲಾ ವ್ಯತ್ಯಾಸಗಳು ಅಂತ್ಯವಾಗಿದೆ. ಉದ್ಯೋಗವೇ ಇಲ್ಲದಿದ್ದಾಗ ಭಾನುವಾರವಾದರೇನು, ಸೋಮವಾರವಾದರೇನು?’ ಎಂದು ಅವರು ಹಿಂದಿಯಲ್ಲಿ ಟ್ವೀಟ್ ಮಾಡಿದ್ದಾರೆ.
ಇನ್ನು ಇದಕ್ಕೂ ಮುನ್ನ ಕೇಂದ್ರ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದ್ದ ರಾಹುಲ್, ಕಳೆದ 70 ವರ್ಷಗಳ ಅವಧಿಯಲ್ಲಿ ಕಾಂಗ್ರೆಸ್ ಕಟ್ಟಿದ್ದ ಭಾರತವನ್ನು ಬಿಜೆಪಿ ಸರ್ಕಾರ ಕೇವಲ 7 ವರ್ಷಗಳಲ್ಲಿ ಮಾರಾಟ ಮಾಡಿದೆ ಎಂದು ಆರೋಪಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Ex-IPS officer ಸಂಜೀವ್ ಭಟ್ಗೆ 1996 ರ ಡ್ರಗ್ಸ್ ಕೇಸ್ ನಲ್ಲಿ 20 ವರ್ಷ ಜೈಲು ಶಿಕ್ಷೆ
Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ
Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ
Mangaluru;ಮನೆಯಲ್ಲೇ ಅಕ್ರಮ ಕಸಾಯಿಖಾನೆ:ಗೋಮಾಂಸ ಸಹಿತ ಮೂವರ ಬಂಧನ
Kolkata ವಿಮಾನ ನಿಲ್ದಾಣದಲ್ಲಿ ಸ್ವಯಂ ಗುಂಡಿಟ್ಟುಕೊಂಡು ಯೋಧ ಆತ್ಮಹತ್ಯೆ
MUST WATCH
ಹೊಸ ಸೇರ್ಪಡೆ
Australia; ಕೇಂದ್ರೀಯ ಗುತ್ತಿಗೆ ಪಟ್ಟಿ: ವಾರ್ನರ್, ಸ್ಟೋಯಿನಿಸ್, ಅಗರ್ ಹೊರಕ್ಕೆ
ACA ವಿರುದ್ಧ ಹೇಳಿಕೆ: ಕ್ರಿಕೆಟಿಗ ಹನುಮ ವಿಹಾರಿಗೆ ನೋಟಿಸ್
Rajasthan Royals; ಪ್ರಸಿದ್ಧ್ ಕೃಷ್ಣ ಬದಲಿಗೆ ಕೇಶವ ಮಹಾರಾಜ್
Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್ಗಳು: ಪ್ರವಾಸಿಗರಿಗೆ ಭಯ
IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್ಗಳ ಜಯ