ರಫೇಲ್ ಡೀಲ್, ಬಹಿರಂಗ ಚರ್ಚೆಗೆ ಬನ್ನಿ; ಪ್ರಧಾನಿಗೆ ರಾಹುಲ್ ಸವಾಲು
Team Udayavani, Aug 13, 2018, 4:01 PM IST
ಬೀದರ್: ರಫೇಲ್ ಯುದ್ಧ ವಿಮಾನ ಒಪ್ಪಂದದ ವಿಚಾರಕ್ಕೆ ಸಂಬಂಧಿಸಿದಂತೆ ತಾನು ಎಷ್ಟು ಗಂಟೆಯ ಚರ್ಚೆಗೂ ಸಿದ್ಧವಾಗಿದ್ದೇನೆ ಬನ್ನಿ ಎಂದು ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಪ್ರಧಾನಿ ನರೇಂದ್ರ ಮೋದಿಗೆ ಬಹಿರಂಗ ಸವಾಲು ಹಾಕಿದ್ದಾರೆ.
ಸೋಮವಾರ ಬೀದರ್ ನ ನೆಹರು ಕ್ರೀಡಾಂಗಣದಲ್ಲಿ ಕಾಂಗ್ರೆಸ್ ಪಕ್ಷ ಆಯೋಜಿಸಿದ್ದ ಜನಧ್ವನಿ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದ ರಾಹುಲ್ ಗಾಂಧಿ, ಯುದ್ಧ ವಿಮಾನ ಒಪ್ಪಂದದ ವಿಚಾರದಲ್ಲಿ ಕೇಂದ್ರ ಸರ್ಕಾರ ದೇಶದ ಹಿತಾಸಕ್ತಿ ಜೊತೆ ರಾಜಿಯಾಗಿದೆ ಎಂದು ಆರೋಪಿಸಿದರು.
ತಮ್ಮ ಭಾಷಣದುದ್ದಕ್ಕೂ ವಾಗ್ದಾಳಿ ನಡೆಸಿದ ರಾಹುಲ್ ಗಾಂಧಿ, ದೇಶದ ಚೌಕಿದಾರ್ ಈಗ ಭಾಗಿದಾರ್ ಆಗಿದ್ದಾರೆ ಎಂದು ಪ್ರಧಾನಿ ಮೋದಿ ಅವರನ್ನು ಟೀಕಿಸಿದರು. ತಮ್ಮ “ಗೆಳೆಯ”ನಿಗಾಗಿ ರಾಫೇಲ್ ಗುತ್ತಿಗೆ ಕೊಡಿಸಲು ದೇಶದ ಜನರ ತೆರಿಗೆ ಹಣವನ್ನು ಕದ್ದು ಒಪ್ಪಂದ ಮಾಡಿಕೊಂಡಿದ್ದಾರೆ ಎಂದು ದೂರಿದರು.
ಅವರು ದೇಶದ ಪ್ರಧಾನಿ ಅಲ್ಲ ಆದರೆ ದೇಶದ ಅತೀ ಶ್ರೀಮಂತ 15 ಮಂದಿ ಉದ್ಯಮಿಗಳ ಪ್ರಧಾನಿಯಾಗಿದ್ದಾರೆ.ರಾಫೇಲ್ ಗುತ್ತಿಗೆಗೆ ಸಂಬಂಧಿಸಿದಂತೆ ಲೋಕಸಭೆಯಲ್ಲಿ ಮಾತನಾಡಿದ್ದೇನೆ. ಆದರೆ ಈ ಸಂದರ್ಭದಲ್ಲಿ ಪ್ರಧಾನಿ ಮೋದಿ ಅವರು ನನ್ನ ಕಣ್ಣಲ್ಲಿ, ಕಣ್ಣಿಟ್ಟು ನೋಡಿಲ್ಲ. ಸುಳ್ಳು ಹೇಳುವ ಮನಸ್ಸು ಯಾವಾಗಲೂ ಸತ್ಯ ಒಪ್ಪಲ್ಲ ಎಂಬುದಕ್ಕೆ ಇದು ಸಾಕ್ಷಿ ಎಂದು ಟೀಕಿಸಿದರು.
ಕಳೆದ ವರ್ಷ ಸೆಪ್ಟೆಂಬರ್ ನಲ್ಲಿ ಭಾರತ ಮತ್ತು ಫ್ರಾನ್ಸ್ ಸರ್ಕಾರದ ಜೊತೆ 36 ರಫೇಲ್ ಯುದ್ಧ ವಿಮಾನ ಖರೀದಿಗಾಗಿ ಒಪ್ಪಂದ ನಡೆದಿತ್ತು. ಇದು ಒಟ್ಟು 58 ಸಾವಿರ ಕೋಟಿ ರೂಪಾಯಿ ಮೊತ್ತದ ಒಪ್ಪಂದವಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Madhya Pradesh Rally; ಕೈಯಿಂದ ಮೀಸಲಾತಿ ಕಸಿಯುವ ಯತ್ನ: ಪ್ರಧಾನಿ ಮೋದಿ
Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್ ಗಾಂಧಿ
Rajveer Diler: ಹೃದಯಾಘಾತದಿಂದ ಬಿಜೆಪಿ ಸಂಸದ ರಾಜ್ವೀರ್ ದಿಲೇರ್ ನಿಧನ
Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್
LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ
MUST WATCH
ಹೊಸ ಸೇರ್ಪಡೆ
ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್ ಬ್ರಿಜೇಶ್ ಚೌಟ
ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್ ಬೆಂಬಲಿಸಿ: ಪದ್ಮರಾಜ್ ಪೂಜಾರಿ
ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ
ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ
Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ