ವಿದೇಶ ಪ್ರವಾಸ, ರಾಹುಲ್ ಏನನ್ನು ಮುಚ್ಚಿಡುತ್ತಿದ್ದಾರೆ?
Team Udayavani, Aug 8, 2017, 3:54 PM IST
ನವದೆಹಲಿ: ಎಐಸಿಸಿ ಉಪಾಧ್ಯಕ್ಷ ರಾಹುಲ್ ಗಾಂಧಿ ಅವರು ಪ್ರವಾಹ ಪರಿಸ್ಥಿತಿ ವೀಕ್ಷಣೆಗಾಗಿ ಗುಜರಾತ್ ರಾಜ್ಯಕ್ಕೆ ತೆರಳಿದ ಸಂದರ್ಭದಲ್ಲಿ ಅವರ ಮೇಲೆ ಬಿಜೆಪಿ, ಆರ್ ಎಸ್ ಎಸ್ ಕಾರ್ಯಕರ್ತರು ಹಲ್ಲೆ ನಡೆಸಿದ್ದಾರೆ ಎಂಬ ಆರೋಪಕ್ಕೆ ತಿರುಗೇಟು ನೀಡಿರುವ ಕೇಂದ್ರ ಗೃಹ ಸಚಿವ ರಾಜನಾಥ ಸಿಂಗ್, ರಾಹುಲ್ ಗಾಂಧಿ ಭದ್ರತಾ ನಿಯಮಗಳನ್ನು ಸಮರ್ಪಕವಾಗಿ ಪಾಲಿಸುತ್ತಿಲ್ಲ ಎಂದು ಹೇಳಿದರು.
ಪ್ರವಾಹ ಪೀಡಿತ ಗುಜರಾತ್ ಗೆ ರಾಹುಲ್ ಗಾಂಧಿ ಭೇಟಿ ನೀಡಿದ್ದ ವೇಳೆ ಭದ್ರತಾ ವೈಫಲ್ಯದಿಂದಾಗಿ ದಾಳಿ ನಡೆದಿದೆ ಎಂದು ಕಾಂಗ್ರೆಸ್ ಸಂಸದರು ಆರೋಪಿಸಿದ್ದರು. ಇದಕ್ಕೆ ರಾಜನಾಥ್ ಸಿಂಗ್ ಪ್ರತಿಕ್ರಿಯೆ ನೀಡಿ ಕಾಂಗ್ರೆಸ್ ಸದಸ್ಯರಿಗೆ ಈ ರೀತಿ ತಿರುಗೇಟು ನೀಡಿದರು.
ರಾಹುಲ್ ಗಾಂಧಿ ಗುಜರಾತ್ ಗೆ ಆಗಮಿಸಿದ್ದ ವೇಳೆ ಭದ್ರತಾ ನಿಯಮಗಳನ್ನು ಪಾಲಿಸಿಲ್ಲ, ಪೊಲೀಸರು ಒದಗಿಸಿದ ಕಾರನ್ನು ರಾಹುಲ್ ಗಾಂಧಿ ಬಳಸಿಕೊಂಡಿಲ್ಲ. ರಾಹುಲ್ ಬುಲೆಟ್ ಪ್ರೂಫ್ ಕಾರನ್ನು ಬಳಸಿಲ್ಲ. ರಾಹುಲ್ ಭದ್ರತಾ ನಿಯಮಗಳನ್ನು ಪಾಲಿಸಲೇಬೇಕಾಗಿದೆ ಎಂದು ಲೋಕಸಭೆಯಲ್ಲಿ ಹೇಳಿದರು.
ಕಳೆದ ಎರಡು ವರ್ಷಗಳಲ್ಲಿ ರಾಹುಲ್ ಗಾಂಧಿ ಆರು ಬಾರಿ ವಿದೇಶ ಪ್ರವಾಸ ಕೈಗೊಂಡಿದ್ದು, ಆ ಸಂದರ್ಭದಲ್ಲಿ ಅವರು ಎಸ್ ಪಿಜಿ (ಸ್ಪೆಷಲ್ ಪ್ರೊಟೆಕ್ಷನ್ ಗ್ರೂಪ್) ಭದ್ರತೆಯನ್ನು ಪಡೆದುಕೊಂಡಿರಲಿಲ್ಲವಾಗಿತ್ತು. ಹಾಗಾಗಿ ರಾಹುಲ್ ಗಾಂಧಿ ವಿದೇಶ ಪ್ರವಾಸ ಸಂದರ್ಭದಲ್ಲಿ ಎಸ್ ಪಿಜಿ ಭದ್ರತೆಯನ್ನು ಪಡೆಯದೇ ಏನನ್ನು ಮುಚ್ಚಿಡಲು ಪ್ರಯತ್ನಿಸುತ್ತಿದ್ದಾರೆ ಎಂದು ಪ್ರಶ್ನಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್
Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ
Ramakrishna Mission: ರಾಮಕೃಷ್ಣ ಮಠ, ಮಿಷನ್ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ
Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್
Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…
MUST WATCH
ಹೊಸ ಸೇರ್ಪಡೆ
Lok Sabha Polls: “ಮೋದಿ ಮತ್ತೂಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ
Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್
Modi ಕಲ್ಪನೆಯ ವಿಕಸಿತ ಭಾರತಕ್ಕಾಗಿ ಕೋಟ ಅವರನ್ನು ಗೆಲ್ಲಿಸೋಣ: ಅಣ್ಣಾ ಮಲೈ
ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್
LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ