ರಾಹುಲ್‌ ದಿಗಿಲುಗೊಳ್ಳುವ ವ್ಯಕ್ತಿ

ಬರಾಕ್‌ ಒಬಾಮಾ ಕೃತಿ "ಎ ಪ್ರಾಮಿಸ್ಡ್ ಲ್ಯಾಂಡ್‌'ನಲ್ಲಿ ಉಲ್ಲೇಖ

Team Udayavani, Nov 14, 2020, 6:30 AM IST

ರಾಹುಲ್‌ ದಿಗಿಲುಗೊಳ್ಳುವ ವ್ಯಕ್ತಿ

ಕಡತ ಚಿತ್ರ

ಹೊಸದಿಲ್ಲಿ: ಅಮೆರಿಕದ ಮಾಜಿ ಅಧ್ಯಕ್ಷ ಬರಾಕ್‌ ಒಬಾಮಾರ ರಾಜಕೀಯ ಜೀವನಾನುಭವದ ಕುರಿತ ಕೃತಿ “ಎ ಪ್ರಾಮಿಸ್ಡ್ ಲ್ಯಾಂಡ್‌’ ಈಗ ಭಾರತದಲ್ಲಿ ಬಲು ಚರ್ಚೆಯಾಗುತ್ತಿದೆ. ಆ ಪುಸ್ತಕದಲ್ಲಿ ಒಬಾಮಾ ಕಾಂಗ್ರೆಸ್‌ನ ಮಾಜಿ ಅಧ್ಯಕ್ಷ ರಾಹುಲ್‌ ಗಾಂಧಿ ಬಗ್ಗೆ ಬರೆದಿರುವ ಸಾಲುಗಳು ಇದಕ್ಕೆ ಕಾರಣ. ರಾಹುಲ್‌ ಹಾಗೂ ತಮ್ಮ ನಡುವಿನ ಭೇಟಿಯ ಬಗ್ಗೆ ನೆನಪಿಸಿಕೊಳ್ಳುತ್ತಾ ಒಬಾಮಾ, “ರಾಹುಲ್‌ ಶಿಕ್ಷಕರನ್ನು ಮೆಚ್ಚಿಸಲು ಹಂಬಲಿಸುವ ಆದರೆ, ಒಂದು ವಿಷಯವನ್ನು ಆಳವಾಗಿ ಕಲಿತುಕೊಳ್ಳಬೇಕೆಂಬ ಉತ್ಸಾಹ ಮತ್ತು ಅಭಿರುಚಿ ಇಲ್ಲದ ವಿದ್ಯಾರ್ಥಿಯಂತೆ ದಿಗಿಲುಗೊಳ್ಳುವ, ಅಪಕ್ವ ಗುಣ ಇರುವ ವ್ಯಕ್ತಿ’ ಎಂದಿದ್ದಾರೆ ಒಬಾಮಾ.

ಸಹಜವಾಗಿಯೇ, ಈ ಸಂಗತಿ ಸೋಶಿಯಲ್‌ ಮೀಡಿಯಾಗಳಲ್ಲಿ ಟ್ರೆಂಡ್‌ ಆಗಿದ್ದು, ಒಂದೆಡೆ ಬಿಜೆಪಿಯ ಬೆಂಬಲಿಗರು ಈ ವಿಷಯವನ್ನು ಟ್ರಾಲ್‌ ಮಾಡುತ್ತಿದ್ದರೆ, ಕಾಂಗ್ರೆಸ್‌ ಬೆಂಬಲಿಗರು ಒಬಾಮಾ ಮೇಲೆ ಮುನಿಸಿಕೊಂಡಿದ್ದಾರೆ. ಒಂದು ಚಿಕ್ಕ ಭೇಟಿಯಲ್ಲಿ ಒಬ್ಬ ವ್ಯಕ್ತಿಯ ವ್ಯಕ್ತಿತ್ವವನ್ನು ಅದ್ಹೇಗೆ ಅಳೆಯಲು ಸಾಧ್ಯ ಎಂದು ಪ್ರಶ್ನಿಸುತ್ತಿದ್ದಾರೆ. ನ.17ರಂದು ಪುಸ್ತಕ ಬಿಡುಗಡೆಯಾಗಲಿದೆ. ಇದು ಮೊದಲನೇ ಭಾಗವಾಗಿದೆ. “ಕ್ರೌನ್‌ ಪಬ್ಲಿಷಿಂಗ್‌ ಗ್ರೂಪ್‌’ ಕೃತಿಯನ್ನು ಹೊರತರಲಿದೆ. ಒಬಾಮಾ ಕೃತಿಯಲ್ಲಿ ಡಾ. ಮನಮೋಹನ್‌ ಸಿಂಗ್‌ ಹಾಗೂ ಕಾಂಗ್ರೆಸ್‌ ಅಧ್ಯಕ್ಷೆ ಸೋನಿಯಾ ಗಾಂಧಿಯವರ ಬಗ್ಗೆಯೂ ಉಲ್ಲೇಖವಿದೆ. ಆದರೆ ಅಮೆರಿಕದ ಮಾಜಿ ಅಧ್ಯಕ್ಷರು ಡಾ| ಮನಮೋಹನ್‌ ಸಿಂಗ್‌ ಹಾಗೂ ಸೋನಿಯಾರ ಬಗ್ಗೆ ಗುಣಾತ್ಮಕ ವಿಮರ್ಶೆ ಮಾಡಿದ್ದಾರೆ.

“ನಮಗೆ ಚಾರ್ಲಿ ಕ್ರಿಸ್ಟ್‌ ಮತ್ತು ರಹಂ ಇಮ್ಯಾನುವೆಲ್‌ರಂಥ ಪುರುಷರ ಸೌಂದರ್ಯದ ಬಗ್ಗೆ ಹೇಳಲಾಗುತ್ತದೆ. ಆದರೆ ಮಹಿಳೆಯ ಸೌಂದರ್ಯದ ಬಗ್ಗೆ ಅಲ್ಲ. ಈ ವಿಚಾರದಲ್ಲಿ ಒಂದೆರಡು ಅಪವಾದಗಳಿರಬಹುದು, ಉದಾಹರಣೆಗೆ ಇದರಲ್ಲಿ ಸೋನಿಯಾ ಗಾಂಧಿ ಕೂಡ ಇದ್ದಾರೆ’ ಎಂದು ಗುಣಗಾನ ಮಾಡಿದ್ದಾರೆ ಒಬಾಮಾ. ಇನ್ನು ಡಾ| ಮನಮೋಹನ್‌ ಸಿಂಗ್‌ರಲ್ಲಿ ಅನುದ್ವಿಗ್ನ ಪ್ರಾಮಾಣಿಕತೆ (ಇಂಪ್ಯಾಸಿವ್‌ ಇಂಟೆಗ್ರಿಟಿ) ಇದೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

2015ರಲ್ಲಿ ಒಬಾಮಾ “ಟೈಮ್‌’ ನಿಯತಕಾಲಿಕಕ್ಕೆ ಬರೆದ ಲೇಖನದಲ್ಲಿ ಪ್ರಧಾನಿ ನರೇಂದ್ರ ಮೋದಿಯವರನ್ನು ಕೊಂಡಾಡಿದ್ದು ಈಗ ಚರ್ಚೆಯಾಗತೊಡಗಿದೆ. “ಬಡತನದಿಂದ ಪ್ರಧಾನಮಂತ್ರಿ ಹುದ್ದೆಯವರೆಗೆ ಸಾಗಿ ಬಂದ ಮೋದಿಯವರ ಸಾಧನೆಯ ದಾರಿ ಭಾರತದ ವೈವಿಧ್ಯವನ್ನು ತೋರಿಸುತ್ತದೆ. ಮೋದಿ ಬಾಲಕನಾಗಿದ್ದಾಗ ತಂದೆಯವರಿಗೆ ಟೀ ಮಾರಲು ನೆರವಾಗುತ್ತಿದ್ದರು. ಅವರು ಈಗ ಜಗತ್ತಿನ ಅತ್ಯಂತ ದೊಡ್ಡ ಪ್ರಜಾಪ್ರಭುತ್ವ ರಾಷ್ಟ್ರದ ನಾಯಕ’ ಎಂದು ಬಣ್ಣಿಸಿದ್ದರು.

ಗೂಗಲ್‌ ಸರ್ಚ್‌ ಹೆಚ್ಚಳ
ಒಬಾಮಾರ ಪುಸ್ತಕದ ಆಯ್ದ ಭಾಗಗಳು ಹೊರಬೀಳುತ್ತಿದ್ದಂತೆಯೇ, ಭಾರತೀಯರೆಲ್ಲ ರಾಹುಲ್‌ ಹಾಗೂ ಮನಮೋಹನ್‌ ಸಿಂಗ್‌ ಕುರಿತು ಒಬಾಮಾ ಹೇಳಿದ ಪದಗಳ ಅರ್ಥವನ್ನು ಹುಡುಕಲಾರಂಭಿಸಿದ್ದಾರೆ. “ಇಂಪ್ಯಾಸಿವ್‌’ ಅಂದರೇನು, “ಇಂಟೆಗ್ರಿಟಿ’ ಅಂದರೇನು ಎನ್ನುವ ಗೂಗಲ್‌ ಸರ್ಚ್‌ ಹೆಚ್ಚಾಗಿದೆಯಂತೆ.

ಟಾಪ್ ನ್ಯೂಸ್

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ;  ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ

IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ;  ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ

17

Team India: ಟಿ20 ವಿಶ್ವಕಪ್‌ ತಂಡ ರಾಹುಲ್‌ಗೆ ಚಾನ್ಸ್‌, ಹಾರ್ದಿಕ್‌ ಪಾಂಡ್ಯಗೆ ಕೊಕ್‌?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-NG

JEE; ಮಹಾರಾಷ್ಟ್ರ ರೈತನ ಮಗ ಮೇನ್‌ ಟಾಪರ್‌

Kerala: ಗಲ್ಲು ಶಿಕ್ಷೆಗೆ ಗುರಿಯಾದ ಮಗಳನ್ನು11 ವರ್ಷಗಳ ಬಳಿಕ ಭೇಟಿಯಾದ ತಾಯಿ!

Kerala: ಗಲ್ಲು ಶಿಕ್ಷೆಗೆ ಗುರಿಯಾದ ಮಗಳನ್ನು11 ವರ್ಷಗಳ ಬಳಿಕ ಭೇಟಿಯಾದ ತಾಯಿ!

1-weewewqe

Emotional; 11 ವರ್ಷ ಬಳಿಕ ಗಲ್ಲಿಗೆ ಗುರಿಯಾದ ಮಗಳನ್ನು ಭೇಟಿಯಾದ ತಾಯಿ!

Ashwin Vaishnav

Train ಪ್ರಯಾಣಿಕರಿಗೆ ಇನ್ನು 20 ರೂ.ಗಳಲ್ಲಿ ಊಟ!

Supreme Court

Supreme Court; ಖಾಸಗಿ ಆಸ್ತಿಯನ್ನು ಸ್ವಾಧೀನ ಮಾಡಬಹುದೇ? 

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.