Rahul Gandhi: ರೈತರೊಂದಿಗೆ ಸೇರಿ ಗದ್ದೆ ಉತ್ತು, ನಾಟಿ ಮಾಡಿದ ರಾಹುಲ್ ಗಾಂಧಿ
Team Udayavani, Jul 8, 2023, 12:29 PM IST
ಸೋಣಿಪತ್: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಶನಿವಾರ ಬೆಳಗ್ಗೆ ರೈತರೊಂದಿಗೆ ಬೆರೆತು ನಾಟಿ ಕಾರ್ಯದಲ್ಲಿ ತೊಡಗಿ ಗಮನ ಸೆಳೆದರು. ಹರ್ಯಾಣದ ಸೋಣಿಪತ್ ನ ಮದಿನಾ ಗ್ರಾಮದಲ್ಲಿ ರಾಹುಲ್ ನಾಟಿ ಮಾಡಿದರು.
ಅವರು ಹಿಮಾಚಲ ಪ್ರದೇಶಕ್ಕೆ ಹೋಗುತ್ತಿದ್ದಾಗ ಭತ್ತದ ಗದ್ದೆಯೊಂದರ ವಾಹನ ನಿಲ್ಲಿಸಿ ಪ್ಯಾಂಟ್ ಸುತ್ತಿಕೊಂಡು ಅದರೊಳಗೆ ಹೆಜ್ಜೆ ಹಾಕಿದರು.
ಗದ್ದೆಯೊಂದರಲ್ಲಿ ಭತ್ತ ನಾಟಿಯಾಗುತ್ತಿರುವುದನ್ನು ಕಂಡ ಕಾಂಗ್ರೆಸ್ ಮುಖಂಡ ರಾಹುಲ್ ಕಾರನ್ನು ನಿಲ್ಲಿಸಿದರು. ಹೊಲಕ್ಕೆ ತೆರಳಿ ಟ್ರ್ಯಾಕ್ಟರ್ ಮೂಲಕ ಉಳುಮೆ ಮಾಡಿ ರೈತರೊಂದಿಗೆ ಸೇರಿ ಭತ್ತ ನಾಟಿ ಮಾಡಿದರು.
ಅಲ್ಲದೆ ರೈತರೊಂದಿಗೆ ಕೃಷಿ ಕಾರ್ಮಿಕರೊಂದಿಗೆ ಮಾತನಾಡುವುದು ಕಂಡು ಬಂತು.
2024ರ ಲೋಕಸಭಾ ಚುನಾವಣೆಗೆ ಸಿದ್ದತೆ ನಡೆಸುತ್ತಿರುವ ಕಾಂಗ್ರೆಸ್ ನಾಯಕ ರಾಹುಲ್, ದೇಶದ ಹಲೆವೆಡೆ ವಿವಿಧ ಸ್ಥರ ಜನರೊಂದಿಗೆ ಬೆರೆಯುತ್ತಿದ್ದಾರೆ.
ಅವರು ಇತ್ತೀಚೆಗೆ ದೆಹಲಿಯ ಕರೋಲ್ ಬಾಗ್ ಪ್ರದೇಶದಲ್ಲಿ ಬೈಕ್ ಮೆಕ್ಯಾನಿಕ್ ಕಾರ್ಯಾಗಾರಕ್ಕೆ ಭೇಟಿ ನೀಡಿದ್ದರು. ವರ್ಕ್ಶಾಪ್ ನಲ್ಲಿ ಮೆಕ್ಯಾನಿಕ್ ಗಳೊಂದಿಗೆ ಗಾಂಧಿ ಸಂಭಾಷಣೆ ನಡೆಸಿದರು. ಅಲ್ಲದೆ ಮುರಿದ ಮೋಟಾರ್ ಸೈಕಲ್ ಗಳನ್ನು ಸರಿಪಡಿಸಲು ಪ್ರಯತ್ನಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು
Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು
ಕಾಂಗ್ರೆಸ್ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ
Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು
ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು
MUST WATCH
ಹೊಸ ಸೇರ್ಪಡೆ
Father; ಚಂದ್ರು ನಿರ್ಮಾಣದ ‘ಫಾದರ್’ ಚಿತ್ರಕ್ಕೆ ಮುಹೂರ್ತ
Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ
Hassan ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ
ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್
Lok Sabha Elections: ಸೋಲು,ಗೆಲುವಿನ ಲೆಕ್ಕಾಚಾರ