ಅಮೇಠಿ ನಂಟು ಮುಗಿಯದು
ತಮ್ಮ ಮಾಜಿ ಕ್ಷೇತ್ರದಲ್ಲಿ ರಾಹುಲ್ ಭಾವುಕ ಮಾತು!
Team Udayavani, Jul 11, 2019, 5:00 AM IST
ಅಮೇಠಿ: “ಈ ಕ್ಷೇತ್ರ ನನ್ನ ಮನೆಯಿದ್ದಂತೆ. ಇಲ್ಲಿನ ಜನ ನನ್ನ ಕುಟುಂಬವಿದ್ದಂತೆ. ಇಲ್ಲಿಂದ ನಾನು ದೂರ ಉಳಿಯುವ ಪ್ರಶ್ನೆಯೇ ಇಲ್ಲ. ನಾನೀಗ ವಯನಾಡ್ ಸಂಸದನಾಗಿರಬಹುದು. ಆದರೆ, ಅಮೇಠಿಯೊಂದಿಗಿನ ದಶಕಗಳ ನಂಟು ಕೊನೆಯಾಗಲಾರದು.’ ಲೋಕಸಭಾ ಚುನಾವಣೆ ಬಳಿಕ ಮೊದಲ ಬಾರಿಗೆ ಅಮೇಠಿಗೆ ಭೇಟಿ ನೀಡಿದ ರಾಹುಲ್ ಗಾಂಧಿ ನುಡಿದಿರುವ ಮಾತುಗಳಿವು.
ಚುನಾವಣೆಯಲ್ಲಿ ತಮ್ಮ ಸಾಂಪ್ರದಾಯಿಕ ಕ್ಷೇತ್ರ ಅಮೇಠಿಯಂದ ಸ್ಪರ್ಧಿಸಿದ್ದ ರಾಹುಲ್, ಕೇಂದ್ರ ಸಚಿವೆ ಸ್ಮತಿ ಇರಾನಿ ವಿರುದ್ಧ 52,000 ಮತಗಳ ಅಂತರದಿಂದ ಸೋತಿದ್ದರು.
ಫಲಿತಾಂಶದ ಬಳಿಕ ಮೊದಲ ಬಾರಿಗೆ ಅಮೇಠಿಗೆ ಬುಧವಾರ ಭೇಟಿ ನೀಡಿದ ಅವರು, ಪಕ್ಷದ ಕಾರ್ಯಕ್ರಮವೊಂದರಲ್ಲಿ ಮಾತನಾಡಿ, ಕ್ಷೇತ್ರದ ಕಾಂಗ್ರೆಸ್ ನಾಯಕರು ಜನರಿಂದ ದೂರ ಉಳಿದಿದ್ದೇ ತಮ್ಮ ಸೋಲಿಗೆ ಕಾರಣವಾಯಿತು. ತಾವು ಇಲ್ಲಿ ಸೋತಿದ್ದರೂ ಅಮೇಠಿಯ ಅಭಿವೃದ್ಧಿಯಲ್ಲಿ ಯಾವುದೇ ಹಿನ್ನಡೆಯಾಗಬಾರದು ಎಂದು ಹೇಳಿದ್ದಾರೆ.
ರಾಹುಲ್ಗೆ 1 ಕೋಟಿ ಟ್ವಿಟರ್ ಹಿಂಬಾಲಕರು
ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಟ್ವಿಟರ್ ಫಾಲೋವರ್ಗಳ ಸಂಖ್ಯೆ ಬುಧವಾರ 1 ಕೋಟಿ ದಾಟಿದೆ. ಈ ಮೈಲುಗಲ್ಲು ತಲುಪಿದ ಹಿನ್ನೆಲೆಯಲ್ಲಿ ತಮ್ಮ ಎಲ್ಲಾ ಫಾಲೋವರ್ಗಳಿಗೂ ರಾಹುಲ್ ಧನ್ಯವಾದ ಅರ್ಪಿಸಿದ್ದಾರೆ. “1 ಕೋಟಿ ಫಾಲೋವರ್ಗಳು, ನಿಮ್ಮೆಲ್ಲರಿಗೂ ಧನ್ಯವಾದಗಳು. ನಾನು ಈ ಸಂಭ್ರಮವನ್ನು ಅಮೇಠಿಯ ಕಾಂಗ್ರೆಸ್ ಕಾರ್ಯಕರ್ತರ ಜೊತೆ ಆಚರಿಸುತ್ತೇನೆ’ ಎಂದು ಟ್ವೀಟ್ ಮಾಡಿದ್ದಾರೆ. ಕಳೆದ ವರ್ಷ ಶಶಿ ತರೂರ್ ಕಾಂಗ್ರೆಸ್ನಲ್ಲಿ ಅತಿ ಹೆಚ್ಚು ಟ್ವಿಟರ್ ಫಾಲೋವರ್ಗಳನ್ನು ಹೊಂದಿರುವ ನಾಯಕ ಎಂದು ಕರೆಸಿಕೊಂಡಿದ್ದರು. ರಾಹುಲ್ ಗಾಂಧಿ ಈಗ ಅವರನ್ನು ಹಿಂದಿಕ್ಕಿದ್ದಾರೆ. ಪ್ರಧಾನಿ ಮೋದಿ 4.80 ಕೋಟಿ ಫಾಲೋವರ್ಗಳನ್ನು ಹೊಂದುವ ಮೂಲಕ, ದೇಶದಲ್ಲಿ ಅತಿ ಹೆಚ್ಚು ಫಾಲೋವರ್ಗಳನ್ನು ಹೊಂದಿರುವ ನಾಯಕ ಎಂಬ ಪಟ್ಟವನ್ನು ಕಾಯ್ದುಕೊಂಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಏ.26ರಂದು 2ನೇ ಹಂತದ ಚುನಾವಣೆ;ರಾಹುಲ್, ತರೂರ್, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ
EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…
Singapore ಏರ್ ಲೈನ್ಸ್ ಪೈಲಟ್ ನಂತೆ ಪೋಸ್ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!
Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ
JEE; ಮಹಾರಾಷ್ಟ್ರ ರೈತನ ಮಗ ಮೇನ್ ಟಾಪರ್
MUST WATCH
ಹೊಸ ಸೇರ್ಪಡೆ
ಏ.26ರಂದು 2ನೇ ಹಂತದ ಚುನಾವಣೆ;ರಾಹುಲ್, ತರೂರ್, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ
Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್
LS Polls: ರಾಜ್ಯದಲ್ಲಿ ಕಾಂಗ್ರೆಸ್ ವಿರೋಧಿ ಅಲೆ: ರಾಘವೇಂದ್ರ
Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ
Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…