ಕಾಂಗ್ರೆಸ್ ಧರಣಿ ವೇಳೆ ರಾಹುಲ್ “ಧ್ಯಾನಸ್ಥ’!
Team Udayavani, Oct 30, 2019, 9:41 PM IST
ನವದೆಹಲಿ:ಆರ್ಥಿಕ, ಹಿಂಜರಿತ, ನಿರುದ್ಯೋಗ, ಕೃಷಿ ಬಿಕ್ಕಟ್ಟು, ಪ್ರಸ್ತಾವಿತ ಆರ್ಸಿಇಪಿ ಒಪ್ಪಂದದ ಪ್ರತಿಕೂಲ ಪರಿಣಾಮಗಳು ಸೇರಿದಂತೆ ಕೇಂದ್ರದ ಮೋದಿ ನೇತೃತ್ವದ ಸರ್ಕಾರದ ನೀತಿಗಳ ವಿರುದ್ಧ ಬೀದಿಗಿಳಿಯಲು ಕಾಂಗ್ರೆಸ್ ಸಜ್ಜಾಗಿದೆ.
ಅದರಂತೆ, ನವೆಂಬರ್ 5ರಿಂದ 15ರವರೆಗೆ ದೇಶವ್ಯಾಪಿ ಪ್ರತಿಭಟನೆಗಳನ್ನು ನಡೆಸುವುದಾಗಿ ಕಾಂಗ್ರೆಸ್ ಘೋಷಿಸಿದೆ. ಆದರೆ, ಈ ಸಂದರ್ಭದಲ್ಲಿ ಪಕ್ಷದ ಪ್ರಮುಖ ನಾಯಕ ರಾಹುಲ್ ಗಾಂಧಿ ಮಾತ್ರ ವಿದೇಶದಲ್ಲಿ ಧ್ಯಾನಸ್ಥರಾಗಿರಲಿದ್ದಾರೆ!
ರಾಹುಲ್ ಅವರು ಈ ಹಿಂದೆಯೂ ಹಲವು ಬಾರಿ ಧ್ಯಾನ ಮಾಡಲೆಂದು ವಿದೇಶಕ್ಕೆ ತೆರಳಿದ್ದಾರೆ. ಈ ಬಾರಿಯೂ ಅವರು ಧ್ಯಾನಕ್ಕಾಗಿ ವಿದೇಶಕ್ಕೆ ತೆರಳಲಿದ್ದಾರೆ ಎಂದು ಪಕ್ಷ ತಿಳಿಸಿದೆ. ಆದರೆ, ಪಕ್ಷ ನಡೆಸಲಿರುವ ಇಡೀ ಕಾರ್ಯಕ್ರಮವನ್ನು ರಾಹುಲ್ ನಿರ್ದೇಶನ ಹಾಗೂ ಸಮಾಲೋಚನೆಯ ಮೇರೆಗೆ ರೂಪಿಸಲಾಗಿದೆ ಎಂದು ವಕ್ತಾರ ರಣದೀಪ್ ಸುಜೇìವಾಲಾ ತಿಳಿಸಿದ್ದಾರೆ.
ದೇಶಾದ್ಯಂತ 35 ಸುದ್ದಿಗೋಷ್ಠಿ
ನ.5ರಿಂದ 15ರವರೆಗೆ ಎಲ್ಲ ರಾಜ್ಯಗಳ ರಾಜಧಾನಿಗಳು ಹಾಗೂ ಜಿಲ್ಲಾ ಕೇಂದ್ರಗಳಲ್ಲಿ ಕೇಂದ್ರ ಸರ್ಕಾರದ ದುರಾಡಳಿತ ವಿರೋಧಿಸಿ ಪ್ರತಿಭಟನೆ ನಡೆಯಲಿದೆ. ದೇಶಾದ್ಯಂತ ಒಟ್ಟು 35 ಸುದ್ದಿಗೋಷ್ಠಿಗಳನ್ನೂ ಆಯೋಜಿಸಲಾಗುತ್ತದೆ ಎಂದು ಕಾಂಗ್ರೆಸ್ ನಾಯಕ ಕೆ.ಸಿ.ವೇಣುಗೋಪಾಲ್ ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಕೈಗೆ ಪಿತ್ರೋಡಾರ್ಜಿತ ಸಂಕಟ! ಬಿಜೆಪಿಗೆ ಸಿಕ್ಕಿದ ಹೊಸ ಅಸ್ತ್ರ ; ಕಂಗೆಟ್ಟ ಕಾಂಗ್ರೆಸ್
Madhya Pradesh Rally; ಕೈಯಿಂದ ಮೀಸಲಾತಿ ಕಸಿಯುವ ಯತ್ನ: ಪ್ರಧಾನಿ ಮೋದಿ
Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್ ಗಾಂಧಿ
Rajveer Diler: ಹೃದಯಾಘಾತದಿಂದ ಬಿಜೆಪಿ ಸಂಸದ ರಾಜ್ವೀರ್ ದಿಲೇರ್ ನಿಧನ
Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್
MUST WATCH
ಹೊಸ ಸೇರ್ಪಡೆ
Kundapura: ಕಳಚಿದ ಕೊಂಡಿ: ಭಾಗವತ ಸುಬ್ರಹ್ಮಣ್ಯ ಧಾರೇಶ್ವರ ಇನ್ನಿಲ್ಲ
Lok Sabha Election 2024; ನಿಮ್ಮ ಮತವನ್ನು ಮಾರಿಕೊಳ್ಳಬೇಡಿ: ಗಣ್ಯರ ಮನವಿ
Daily Horoscope: ಉದ್ಯೋಗದಲ್ಲಿ ಮೇಲಧಿಕಾರಿಗಳಿಗೆ ತೃಪ್ತಿ, ಅಪೇಕ್ಷಿತ ಆರ್ಥಿಕ ನೆರವು ಲಭ್ಯ
Modi ಹಸಿ ಸುಳ್ಳು: ಸಿಎಂ ಸಿದ್ದರಾಮಯ್ಯ ಕೆಂಡ; ಒಬಿಸಿ, ಎಸ್ಸಿ ಮೀಸಲಾತಿ ಹೇಳಿಕೆಗೆ ವಿರೋಧ
Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ