ಮಾನಸ ಸರೋವರ ಯಾತ್ರೆಗೆ “ಶಿವಭಕ್ತ’ ರಾಹುಲ್
Team Udayavani, Aug 30, 2018, 10:22 AM IST
ಹೊಸದಿಲ್ಲಿ: ಲೋಕಸಭೆ ಮತ್ತು ಮೂರು ರಾಜ್ಯಗಳ ವಿಧಾನಸಭೆ ಚುನಾವಣೆ ಸಮೀಪಿಸುತ್ತಿರು ವಂತೆಯೇ “ಶಿವ ಭಕ್ತ’ ರಾಹುಲ್ ಗಾಂಧಿ ಕೈಲಾಸ ಮಾನಸ ಸರೋವರ ಯಾತ್ರೆ ಕೈಗೊಳ್ಳಲಿದ್ದಾರೆ. ಎಲ್ಲವೂ ಅಂದುಕೊಂಡಂತೆ ನಡೆದರೆ ಇದೇ 31ರಂದು ರಾಹುಲ್ ಯಾತ್ರೆ ಆರಂಭಿಸುತ್ತಾರೆ ಎಂದು ಹೇಳಲಾಗಿದೆ.
ಇತ್ತೀಚೆಗೆ ರಾಮಲೀಲಾ ಮೈದಾನದಲ್ಲಿ ನಡೆದ “ಜನ್ ಆಕ್ರೋಶ್’ ರ್ಯಾಲಿಯಲ್ಲಿ ಮಾತನಾಡಿದ್ದ ರಾಹುಲ್, ಕರ್ನಾಟಕ ವಿಧಾನಸಭೆ ಚುನಾವಣೆ ವೇಳೆ ನಾನು ಸಂಚರಿಸುತ್ತಿದ್ದ ವಿಮಾನದಲ್ಲಿ ತಾಂತ್ರಿಕ ದೋಷ ಕಂಡುಬಂದಿತ್ತು. ಆ ಸಮಯದಲ್ಲಿ ನಾನು ಕೈಲಾಸ ಮಾನಸಸರೋವರ ಯಾತ್ರೆ ಕೈಗೊಳ್ಳುವುದಾಗಿ ಹರಕೆ ಮಾಡಿಕೊಂಡಿದ್ದೆ. ಸದ್ಯದಲ್ಲೇ ಯಾತ್ರೆ ಕೈಗೊಳ್ಳುತ್ತೇನೆ ಎಂದು ಹೇಳಿದ್ದರು.
ಇಷ್ಟು ದಿನ ಸಮಯ ಹೊಂದಿಸಲಾಗದ ರಾಹುಲ್ ಗಾಂಧಿ ಅಂತೂ ಈಗ ದಿನಾಂಕ ನಿಗದಿಗೊಳಿಸಿದಂತಿದೆ. ರಾಹುಲ್ ಗಾಂಧಿ ಕಚೇರಿ ಯಾತ್ರೆಯ ಬಗ್ಗೆ ವಿದೇಶಾಂಗ ಇಲಾಖೆಗೆ ಮನವಿ ಸಲ್ಲಿಸಿದೆ. ಆ.31ರಂದು ಹೊಸದಿಲ್ಲಿಯಿಂದ ಹೊರಡಲಿದ್ದಾರೆ. ನೇಪಾಲ ಮೂಲಕವಾಗಿ ಯಾತ್ರೆ ಕೈಗೊಳ್ಳಲಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Brahmos; ಫಿಲಿಪ್ಪೀನ್ಸ್ಗೆ ಬ್ರಹ್ಮೋಸ್: ಭಾರತದ ಮೊದಲ ರಫ್ತು
EC ಚುನಾವಣ ಆಯೋಗ ಅಲ್ಲ, ಬಿಜೆಪಿ ಆಯೋಗ: ಮಮತಾ ಬ್ಯಾನರ್ಜಿ ಟೀಕಾಸ್ತ್ರ
ED; ನಾನು ತಿಂದದ್ದು ಮೂರೇ ಮಾವು: ಕೋರ್ಟ್ಗೆ ಕೇಜ್ರಿವಾಲ್ ಮಾಹಿತಿ
Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!
Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು