ಸಾರ್ವಜನಿಕವಾಗಿ ಸಾವರ್ಕರ್ ಟೀಕಿಸಿದ ರಾಹುಲ್ ಈಗ ಅದಕ್ಕೆ ಬೆಲೆ ತೆರುತ್ತಿದ್ದಾರೆ

ರಾಜೀವ್ ಗಾಂಧಿ ಟೀಕಿಸಿದ ಪ್ರಧಾನಿ ಮೋದಿ ಬೆನ್ನಿಗೆ ನಿಂತ ಶಿವಸೇನೆ

Team Udayavani, May 9, 2019, 3:19 PM IST

Rahul-Gandhi-1-726

ಮುಂಬಯಿ: ಪ್ರಧಾನಿ ನರೇಂದ್ರ ಮೋದಿ ತಮ್ಮ ಚುನಾವಣಾ ಸಭೆಯೊಂದರಲ್ಲಿ ಮಾಜೀ ಪ್ರಧಾನಿ ದಿವಂಗತ ರಾಜೀವ ಗಾಂಧಿ ಅವರನ್ನು ‘ಭ್ರಷ್ಟಾಚಾರಿ ನಂ.1’ ಎಂದು ಟೀಕಿಸಿರುವುದರ ವಿರುದ್ಧ ರಾಜಕೀಯ ವಲಯದಲ್ಲಿ ಪರ-ವಿರೋಧ ಅಭಿಪ್ರಾಯಗಳು ವ್ಯಕ್ತವಾಗುತ್ತಿದೆ.

ಭಾರತೀಯ ಜನತಾ ಪಕ್ಷ ನೇತೃತ್ವದ ರಾಷ್ಟ್ರೀಯ ಪ್ರಜಾಸತ್ತಾತ್ಮಕ ರಂಗದ (NDA) ಪ್ರಮುಖ ಅಂಗ ಪಕ್ಷವಾದ ಶಿವಸೇನೆ ಇದೀಗ ಪ್ರಧಾನಿ ಅವರ ಈ ಹೇಳಿಕೆಯನ್ನು ಸಮರ್ಥಿಸಿಕೊಂಡಿದೆ ಮಾತ್ರವಲ್ಲದೇ ಈ ಮೂಲಕ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಅವರ ಮೇಲೆ ತನ್ನ ಟೀಕಾ ಪ್ರಹಾರವನ್ನು ಮುಂದುವರೆಸಿದೆ.

ತನ್ನ ಪಕ್ಷದ ಮುಖವಾಣಿ ಆಗಿರುವ ಸಾಮ್ನಾದ ಸಂಪಾದಕೀಯದಲ್ಲಿ ಈ ವಿಷಯವನ್ನು ಪ್ರಸ್ತಾಪಿಸಿದ್ದು, ರಾಹುಲ್ ಗಾಂಧಿ ಅವರು ಸಾರ್ವಜನಿಕವಾಗಿ ಸಾವರ್ಕರ್ ಅವರನ್ನು ಟೀಕಿಸಿದ್ದರ ಪರಿಣಾಮವೇ ಇದು ಎಂದು ಅದರಲ್ಲಿ ಬರೆಯಲಾಗಿದೆ.

ರಾಹುಲ್ ಗಾಂಧಿ ಅವರು ತನ್ನ ಸಾರ್ವಜನಿಕ ಸಭೆಗಳಲ್ಲಿ ಪ್ರಧಾನ ಮಂತ್ರಿಯನ್ನು ‘ಕಳ್ಳ’ ಎಂದು ಕರೆಯುತ್ತಾರೆ ಇದೂ ಸಾಲದೆಂಬಂತೆ ಅವರು ಸಾರ್ವಜನಿಕವಾಗಿ ಸ್ವಾತಂತ್ರ್ಯ ಸೇನಾನಿ ವೀರ ಸಾವರ್ಕರ್ ಅವರನ್ನು ಅವಮಾನಿಸುತ್ತಿರುತ್ತಾರೆ. ತನ್ನ ಈ ಎಲ್ಲಾ ವರ್ತನೆಗಳಿಗೆ ರಾಹುಲ್ ಇದೀಗ ‘ತಕ್ಕ ಬೆಲೆ’ ತೆರುತ್ತಿದ್ದಾರೆ ಎಂದು ಸಾಮ್ನಾ ತನ್ನ ಸಂಪಾದಕೀಯದಲ್ಲಿ ಅಭಿಪ್ರಾಯಪಟ್ಟಿದೆ.

‘ರಾಹುಲ್ ಅವರು ತಮ್ಮ ಭಾಷಣಗಳಲ್ಲಿ ಪ್ರಧಾನಿ ಮೋದಿಯವರನ್ನು ‘ಕಳ್ಳ’ ಎಂದು ಕರೆದಿದ್ದಕ್ಕೆ ಮೋದಿ ಅವರು ರಾಹುಲ್ ಅವರನ್ನು ಕರೆದು ಚಹಾ ನೀಡಬೆಕೆಂದು ಯಾರಾದರೂ ಅಪೇಕ್ಷಿಸುತ್ತಾರೆಯೇ? ಹೌದು, ಒಂದು ವೇಳೆ ರಾಜೀವ್ ಗಾಂಧಿ ಅವರನ್ನು ಪ್ರಧಾನಿ ಅವರು ಟೀಕಿಸಿರುವುದು ತಪ್ಪೆಂದೇ ಅಂದುಕೊಳ್ಳೋಣ ಆದರೆ ರಾಹುಲ್ ಅವರು ವೀರ ಸಾವರ್ಕರ್ ಅವರ ಬಗ್ಗೆ ಸಾರ್ವಜನಿಕವಾಗಿ ಕೀಳಾಗಿ ಮಾತನಾಡುವುದು ಅವೆಲ್ಲದಕ್ಕಿಂತಲೂ ದೊಡ್ಡ ತಪ್ಪು’ ಎಂದು ಸಾಮ್ನಾ ಸಂಪಾದಕೀಯದಲ್ಲಿ ಬರೆಯಲಾಗಿದೆ.

ರಾಹುಲ್ ‍ಗಾಂಧಿ ಅವರು ವೀರ ಸಾವರ್ಕರ್ ಅವರ ಕುರಿತಾಗಿ ಮಾಡಿರುವ ಗೇಲಿ ಹಾಗೂ ಸಾವರ್ಕರ್ ಅವರು ಬ್ರಿಟಿಷರಿಗೆ ಶರಣಾಗಿ ಬಂಧಮುಕ್ತರಾದರು ಎಂದು ಅವರನ್ನು ರಾಹುಲ್ ವಿಶ್ಲೇಷಿಸಿದ ರೀತಿ ದೇಶದ ಎಲ್ಲಾ ಸ್ವಾತಂತ್ರ್ಯ ಹೋರಾಟಗಾರರಿಗೆ ಮಾಡಿದ ಅವಮಾನ ಎಂದು ಸಾಮ್ನಾ ಖಾರವಾಗಿ ಅಭಿಪ್ರಾಯಪಟ್ಟಿದೆ.

ಟಾಪ್ ನ್ಯೂಸ್

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

1-WQEWQEWQ

Eshwarappa ಅವರಿಂದ ನಾನೇನು ಕಲಿಯಬೇಕಾಗಿಲ್ಲ: ಗೀತಾ ಶಿವರಾಜ್ ಕುಮಾರ್

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ

Lokayukta

Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

1-asaa

Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Delhi LG: ಕೇರಳ ಚರ್ಚುಗಳಿಗೆ ದಿಲ್ಲಿ ಗೌರ್ನರ್‌ ಭೇಟಿ; ಆಯೋಗಕ್ಕೆ “ಕೈ’ ದೂರು

Delhi LG: ಕೇರಳ ಚರ್ಚುಗಳಿಗೆ ದಿಲ್ಲಿ ಗೌರ್ನರ್‌ ಭೇಟಿ; ಆಯೋಗಕ್ಕೆ “ಕೈ’ ದೂರು

Odisha: ಎನ್‌ಕೌಂಟರ್‌; ಇಬ್ಬರು ನಕ್ಸಲರ ಹತ್ಯೆ

Odisha: ಎನ್‌ಕೌಂಟರ್‌; ಇಬ್ಬರು ನಕ್ಸಲರ ಹತ್ಯೆ

1-asaa

Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..

1-qwqwewqe

IPL ಅಕ್ರಮ ಪ್ರಸಾರ ಕೇಸ್; ನಟಿ ತಮನ್ನಾಗೆ ಸಂಕಷ್ಟ: ಸೈಬರ್ ಸೆಲ್ ನೋಟಿಸ್

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

IPL: ಎಲ್ಲೆ ಮೀರಿ ವಿಕೆಟ್‌ ಸಂಭ್ರಮಾಚರಣೆಡೆಲ್ಲಿ ವೇಗಿ ರಸಿಕ್‌ ಸಲಾಂಗೆ ಛೀಮಾರಿ

IPL: ಎಲ್ಲೆ ಮೀರಿ ವಿಕೆಟ್‌ ಸಂಭ್ರಮಾಚರಣೆಡೆಲ್ಲಿ ವೇಗಿ ರಸಿಕ್‌ ಸಲಾಂಗೆ ಛೀಮಾರಿ

IPL: ಇಂಪ್ಯಾಕ್ಟ್ ಪ್ಲೇಯರ್‌ ನಿಯಮಕ್ಕೆ ಅಕ್ಷರ್‌ ಪಟೇಲ್‌ ಕೂಡ ವಿರೋಧ

IPL: ಇಂಪ್ಯಾಕ್ಟ್ ಪ್ಲೇಯರ್‌ ನಿಯಮಕ್ಕೆ ಅಕ್ಷರ್‌ ಪಟೇಲ್‌ ಕೂಡ ವಿರೋಧ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

12

B.S.Yediyurappa: ಶಾಸಕ ಪ್ರಭು ಚವ್ಹಾಣ ಹೆಸರು ಹೇಳುತ್ತಿದ್ದಂತೆ ಬಿಎಸ್‌ವೈ ಗರಂ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.