ವ್ಯಾಕ್ಸಿನ್ ಸ್ಟ್ರ್ಯಾಟಜಿ ನೋಟು ಅಮಾನ್ಯೀಕರಣಕಿಂತ ಏನೂ ಕಡಿಮೆ ಇಲ್ಲ : ರಾಹುಲ್ ಕಿಡಿ
Team Udayavani, Apr 21, 2021, 1:20 PM IST
ನವ ದೆಹಲಿ : ಕೋವಿಡ್ ಸೋಂಕು ದೇಶದಲ್ಲಿ ಮತ್ತೆ ಆತಂಕವನ್ನು ಸೃಷ್ಟಿ ಮಾಡಿದೆ. ದಿನ ನಿತ್ಯ ಕೋವಿಡ್ ಪ್ರಕರಣಗಳು ಹೆಚ್ಚಳವಾಗುತ್ತಿದ್ದು, ಕೇಂದ್ರ ಸರ್ಕಾರವನ್ನು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಮತ್ತೆ ತರಾಟೆಗೆ ತೆಗೆದುಕೊಂಡಿದ್ದಾರೆ.
ಈ ಬಗ್ಗೆ ಟ್ವೀಟ್ ಮಾಡಿರುವ ರಾಹುಲ್ ಗಾಂಧಿ, ಕೇಂದ್ರ ಸರ್ಕಾರದ ವ್ಯಾಕ್ಸಿನ್ ಸ್ಟ್ರ್ಯಾಟಜಿ ನೋಟು ಅಮಾನ್ಯೀಕರಣಕಿಂತ ಏನೂ ಕಡಿಮೆ ಇಲ್ಲ ಎಂದು ಅವರು ಆಕ್ರೋಶ ವ್ಯಕ್ತ ಪಡಿಸಿದ್ದಾರೆ.
ಸಾಮಾನ್ಯ ಜನಸಮೂಹವು ಸರದಿಯಲ್ಲಿ ನಿಲ್ಲುತ್ತಿದೆ, ಹಣ, ಆರೋಗ್ಯ ಮತ್ತು ಜೀವನದ ನಷ್ಟವನ್ನು ಅನುಭವಿಸುತ್ತಿದೆ. ಮತ್ತು ಕೊನೆಯಲ್ಲಿ, ಕೆಲವೇ ಕೈಗಾರಿಕೋದ್ಯಮಿಗಳು ಮಾತ್ರ ಪ್ರಯೋಜನ ಪಡೆಯುತ್ತಿದ್ದಾರೆ ಎಂದು ಗಾಂಧಿ ಕಿಡಿ ಕಾರಿದ್ದಾರೆ.
केंद्र सरकार की वैक्सीन रणनीति नोटबंदी से कम नहीं-
* आम जन लाइनों में लगेंगे
* धन, स्वास्थ्य व जान का नुक़सान झेलेंगे
* और अंत में सिर्फ़ कुछ उद्योगपतियों का फ़ायदा होगा।— Rahul Gandhi (@RahulGandhi) April 21, 2021
ಇನ್ನು, ಕಾಂಗ್ರೆಸ್ ನ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕ ಗಾಂಧಿ ವಾದ್ರಾ ಕೂಡ ಬಿಜೆಪಿಯನ್ನುತರಾಟೆಗೆ ತೆಗೆದುಕೊಂಡಿದ್ದಾರೆ.
ಓದಿ : ಕೋವಿಡ್ ನನ್ನು ಲಘುವಾಗಿ ತೆಗೆದುಕೊಳ್ಳಲು ಸಾಧ್ಯವಿಲ್ಲ : ಪ್ರಿಯಾಂಕ ಚೋಪ್ರಾ
ದೇಶದಲ್ಲಿ ಕೋವಿಡ್ ಸಂಕಷ್ಟವಿರುವಾಗ, ವೈದ್ಯಕೀಯ ಆಮ್ಲಜನಕ, ಮತ್ತು ಆಸ್ಪತ್ರೆಯ ಹಾಸಿಗೆಗಳ ಕೊರತೆಗಾಗಿ ಜನರು ಕಷ್ಟ ಪಡುತ್ತಿರುವಾಗ, ಚುನಾವಣಾ ಪ್ರಚಾರದಲ್ಲಿ ಕೇಂದ್ರ ನಾಯಕರು ನಗುತ್ತಿದ್ದರು ಎಂದು ಪ್ರಿಯಾಂಕಾ ಹೇಳಿದ್ದಾರೆ.
ಇನ್ನು, ದೇಶದಲ್ಲಿ ನೀಡಲಾಗುತ್ತಿರುವ ಕೋವಿಡ್ ಲಸಿಕೆ ಪ್ರಮಾಣವು ಬುಧವಾರ 13,01,19,310 ದಾಟಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ತಿಳಿಸಿದೆ.
ಪ್ರಸ್ತುತ ಕೋವಿಡ್ ಸಾಂಕ್ರಾಮಿಕ ರೋಗದ ಎರಡನೇ ಅಲೆಯ ಪರಿಣಾಮದಿಂದಾಗಿ ಭಾರತವು ಕಳೆದ 24 ಗಂಟೆಗಳಲ್ಲಿ ಸುಮಾರು 3 ಲಕ್ಷ ಹೊಸ ಕೋವಿಡ್ ಸೋಂಕಿನ ಪ್ರಕರಣಗಳು ವರದಿಯಾಗಿವೆ.
ಕೇಂದ್ರ ಆರೋಗ್ಯ ಸಚಿವಾಲಯದ ಪ್ರಕಾರ, 2,95,041 ಹೊಸ ಕೋವಿಡ್ 19 ಪ್ರಕರಣಗಳು ಮತ್ತು 2,023 ಸಾವುಗಳು ವರದಿಯಾಗಿವೆ, ಒಟ್ಟು ಪ್ರಕರಣಗಳನ್ನು 1,56,16,130 ಕ್ಕೆ ಏರಿಕೆಯಾಗಿದೆ. ಇದರಲ್ಲಿ 21,57,538 ಸಕ್ರಿಯ ಪ್ರಕರಣಗಳಿವೆ ಎಂದು ಸಚಿವಾಲಯ ತಿಳಿಸಿದೆ.
ಓದಿ : ಹೈಕೋರ್ಟ್ ಸೂಚನೆ ಹಿನ್ನೆಲೆಯಲ್ಲಿ ಕರ್ತವ್ಯಕ್ಕೆ ಮರಳಿದ ಸಾರಿಗೆ ನೌಕರರು
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ
CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ
ಏ.26ರಂದು 2ನೇ ಹಂತದ ಚುನಾವಣೆ;ರಾಹುಲ್, ತರೂರ್, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ
EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…
Singapore ಏರ್ ಲೈನ್ಸ್ ಪೈಲಟ್ ನಂತೆ ಪೋಸ್ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!
MUST WATCH
ಹೊಸ ಸೇರ್ಪಡೆ
Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ
Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ
Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !
EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ
Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ