ನಂಜನಗೂಡು-ವಯನಾಡ್ ರೈಲು ಯೋಜನೆಗೆ ನೆರವು ನೀಡಿ
Team Udayavani, Dec 5, 2019, 12:55 AM IST
ಹೊಸದಿಲ್ಲಿ: ಕರ್ನಾಟಕದ ನಂಜನಗೂಡು – ವಯನಾಡು-ನಿಲಂಬೂರ್ ರೈಲ್ವೇ ಯೋಜನೆ ಕಾಮಗಾರಿ ಹಲವಾರು ವರ್ಷಗಳಿಂದ ಕುಂಟುತ್ತಾ ಸಾಗಿದೆ. ಈ ಕಾಮಗಾರಿ ಆದಷ್ಟು ಬೇಗ ಪೂರ್ಣಗೊಳಿಸಲು ಕೇಂದ್ರ ಸರಕಾರ ಕೇರಳಕ್ಕೆ ಸಹಾಯ ಮಾಡಬೇಕು ಎಂದು ವಯನಾಡು ಸಂಸದ ರಾಹುಲ್ ಗಾಂಧಿ ಬುಧವಾರ ಲೋಕಸಭೆಯಲ್ಲಿ ಆಗ್ರಹಿಸಿದರು.
ಆ ಭಾಗದಲ್ಲಿ ರೈಲ್ವೇ ಸಂಪರ್ಕ ಏನೇನೂ ಪ್ರಗತಿಯಾಗಿಲ್ಲ. ಬಂಡೀಪುರ ರಾಷ್ಟ್ರೀಯ ಹೆದ್ದಾರಿಯನ್ನು ರಾತ್ರಿ ವೇಳೆ ಮುಚ್ಚಿದ್ದನ್ನು ಪ್ರಸ್ತಾವಿಸಿ, ಜನರಿಗೆ ಸಂಚಾರಕ್ಕೆ ಅನನುಕೂಲವಾಗಿದೆ. ಹೀಗಾಗಿ ಆ ಭಾಗದ ಜನರು ತೀರಾ ಅಗತ್ಯದ ಸಮಯದಲ್ಲೂ ಒಂದು ಸ್ಥಳದಿಂದ ಮತ್ತೂಂದು ಸ್ಥಳಕ್ಕೆ ಹೋಗಲು ಪರದಾಡಬೇಕಾಗುತ್ತದೆ. ಆದರೂ ಈ ಕಾಮಗಾರಿ ಹಲವಾರು ವರ್ಷಗಳಿಂದ ಪ್ರಗತಿ ಕಾಣುತ್ತಿಲ್ಲ ಎಂದರು.
ಈ ರೈಲ್ವೇ ಮಾರ್ಗ ಕಾರ್ಯಾರಂಭ ಮಾಡಿದರೆ ವಯನಾಡಿನಿಂದ ಬೆಂಗಳೂರು ಮತ್ತು ತಿರುವನಂತಪುರಂ ನಡುವಿನ ಪ್ರಯಾಣದ ಅವಧಿ ತಗ್ಗುತ್ತದೆ. ಜತೆಗೆ ವಯನಾಡು ಭಾಗದ ಜನರಿಗೆ ಹೊಸ ಉದ್ಯೋಗಾವಕಾಶಗಳು ದೊರೆಯುತ್ತವೆ. ಈ ರೈಲ್ವೇ ಮಾರ್ಗ ಆ ಭಾಗದ ಜನರ ಬಹುದಿನಗಳ ಕನಸು. ಆದರೆ ಅದು ಈಡೇರುತ್ತಿಲ್ಲ. ಸಾಮಾಜಿಕ ಮತ್ತು ಆರ್ಥಿಕ ಪ್ರಾಮುಖ್ಯ ಕಾರಣದಿಂದಾಗಿ ಈ ರೈಲ್ವೇ ಮಾರ್ಗ ಅತ್ಯಗತ್ಯ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಏ.26ರಂದು 2ನೇ ಹಂತದ ಚುನಾವಣೆ;ರಾಹುಲ್, ತರೂರ್, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ
EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…
Singapore ಏರ್ ಲೈನ್ಸ್ ಪೈಲಟ್ ನಂತೆ ಪೋಸ್ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!
Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ
JEE; ಮಹಾರಾಷ್ಟ್ರ ರೈತನ ಮಗ ಮೇನ್ ಟಾಪರ್
MUST WATCH
ಹೊಸ ಸೇರ್ಪಡೆ
Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು
ಚನ್ನಮ್ಮನ ಕಿತ್ತೂರು: ಮಹಾನ್ ಯೋಗಿಗಳು-ಸೂಫಿ ಸಂತರ ನಾಡಿದು- ಶಿಲೇದಾರ
Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ
ಮೊದಲ ಬಾರಿ ಕುಂದಾನಗರಿಯಲ್ಲಿ ಪ್ರಧಾನಿ ಮೋದಿ ವಾಸ್ತವ್ಯ; 28ಕ್ಕೆ ಸಮಾವೇಶ
ಬಿಸಿಲ ಝಳದಿಂದ ಮೈದಾನಗಳು ಖಾಲಿ; ಮಕ್ಕಳ ಆಟಕ್ಕೂ ಉರಿ ಬಿಸಿಲು ಅಡ್ಡಿ!