ನೋಟು ನಿಷೇಧ ಆರ್ಥಿಕತೆ ಮೇಲೆ ನಡೆಸಿದ ಭಯೋತ್ಪಾದಕ ದಾಳಿ : ರಾಹುಲ್ ಗಾಂಧಿ
Team Udayavani, Nov 8, 2019, 5:12 PM IST
ನವದೆಹಲಿ : ನೋಟ್ ಬ್ಯಾನ್ ಆರ್ಥಿಕತೆ ಮೇಲೆ ಮಾಡಿದ ಭಯೋತ್ಪಾದಕ ದಾಳಿ ಎಂದು ಕಾಂಗ್ರೆಸ್ ಪಕ್ಷದ ನಾಯಕ ರಾಹುಲ್ ಗಾಂಧಿ ಟೀಕೆ ಮಾಡಿದ್ದಾರೆ. ಅಲ್ಲದೇ ಕೇಂದ್ರ ಸರಕಾರದ ಈ ಕ್ರಮ ನಾಶದ ಸಂಕೇತ ಎಂದು ಹೇಳಿದ್ದಾರೆ.
ನೋಟು ನಿಷೇಧವಾಗಿ ಇಂದಿಗೆ ಮೂರು ವರ್ಷ ಕಳೆದಿದ್ದು, ಎನ್ಡಿಎ ಸರಕಾರದ ಈ ನಡೆ ಭಯೋತ್ಪಾದಕ ದಾಳಿಯಂತಿದೆ ಎಂದು ರಾಹುಲ್ ಅವರು ಟ್ವೀಟ್ ಮಾಡಿದ್ದಾರೆ. ಅವರು ಟ್ವಿಟರ್ನಲ್ಲಿ ಹೇಳಿದ್ದಿಷ್ಟು “ನೋಟು ರದ್ದತಿಯಂತಹ ಭಯೋತ್ಪಾದಕ ದಾಳಿ ನಡೆದು ಇಂದಿಗೆ 3 ವರ್ಷ ಕಳೆದಿವೆ. ಇದು ಭಾರತೀಯ ಆರ್ಥಿಕತೆಯನ್ನು ನಾಶಗೊಳಿಸಿದ್ದು, ಹಲವಾರು ಜೀವಗಳನ್ನು ಬಲಿ ತೆಗೆದುಕೊಂಡಿದೆ. ಲಕ್ಷಾಂತರ ಸಣ್ಣ ಉದ್ಯಮಿಗಳು ಅಮಾನ್ಯಿàಕರಣದಿಂದ ಸಂಕಷ್ಟಕ್ಕೆ ಸಿಲುಕಿದ್ದು, ಸಹಸ್ರಾರು ಭಾರತೀಯರನ್ನು ನಿರುದ್ಯೋಗಿಗಳನ್ನಾಗಿ ಮಾಡಿದೆ’ ಎಂದಿದ್ದಾರೆ.
ಅಣ್ಣನಿಗೆ ತಂಗಿಯ ಸಾಥ್
ರಾಹುಲ್ ಗಾಂಧಿ ಟ್ವೀಟ್ಗೆ ಕಾಂಗ್ರೆಸ್ನ ವರಿಷ್ಠೆ ಪ್ರಿಯಾಂಕಾ ವಾದ್ರಾ ಅವರೂ ಪ್ರತಿಕ್ರಿಯಿಸಿದ್ದು, ನೋಟು ನಿಷೇಧ ದೇಶಕ್ಕೆ ವಿಪತ್ತಾಗಿ ಕಾಡಿದ್ದು, ಇದರ ಜವಾಬ್ದಾರಿಯನ್ನು ಬಿಜೆಪಿ ಸರಕಾರ ಹೊರಲು ಬಯಸುತ್ತದಯೇ ಎಂದು ಪ್ರಶ್ನಿಸಿದ್ದಾರೆ. ನೋಟು ರದ್ದತಿ ನಮ್ಮ ಆರ್ಥಿಕತೆಯನ್ನು ನಾಶಪಡಿಸಿದೆ ಎಂದು ಅವರೂ ಸರಕಾರದ ವಿರುದ್ಧ ಕಿಡಿಕಾರಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Delhi LG: ಕೇರಳ ಚರ್ಚುಗಳಿಗೆ ದಿಲ್ಲಿ ಗೌರ್ನರ್ ಭೇಟಿ; ಆಯೋಗಕ್ಕೆ “ಕೈ’ ದೂರು
Odisha: ಎನ್ಕೌಂಟರ್; ಇಬ್ಬರು ನಕ್ಸಲರ ಹತ್ಯೆ
Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..
IPL ಅಕ್ರಮ ಪ್ರಸಾರ ಕೇಸ್; ನಟಿ ತಮನ್ನಾಗೆ ಸಂಕಷ್ಟ: ಸೈಬರ್ ಸೆಲ್ ನೋಟಿಸ್
Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ
MUST WATCH
ಹೊಸ ಸೇರ್ಪಡೆ
IPL: ಎಲ್ಲೆ ಮೀರಿ ವಿಕೆಟ್ ಸಂಭ್ರಮಾಚರಣೆಡೆಲ್ಲಿ ವೇಗಿ ರಸಿಕ್ ಸಲಾಂಗೆ ಛೀಮಾರಿ
IPL: ಇಂಪ್ಯಾಕ್ಟ್ ಪ್ಲೇಯರ್ ನಿಯಮಕ್ಕೆ ಅಕ್ಷರ್ ಪಟೇಲ್ ಕೂಡ ವಿರೋಧ
Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ
Sumalatha Ambareesh: ಟ್ವೀಟ್ನಲ್ಲಿ ಸಂಸದೆ ಸುಮಲತಾ ಅಂಬರೀಶ್ ವಿವೇಕದ ಪಾಠ
B.S.Yediyurappa: ಶಾಸಕ ಪ್ರಭು ಚವ್ಹಾಣ ಹೆಸರು ಹೇಳುತ್ತಿದ್ದಂತೆ ಬಿಎಸ್ವೈ ಗರಂ