ಶಾಸಕರ ಖರೀದಿಗೆ ಪ‹ಧಾನಿಯೇ ಕುಮ್ಮಕ್ಕು: ರಾಹುಲ್ ಗಾಂಧಿ
Team Udayavani, May 20, 2018, 6:50 AM IST
ನವದೆಹಲಿ: “ಕರ್ನಾಟಕದಲ್ಲಿ ಬಿಜೆಪಿ ಸರ್ಕಾರ ಅಧಿಕಾರ ಉಳಿಸಿಕೊಳ್ಳುವಂತಾಗಲು ಶಾಸಕರ ಖರೀದಿಗೆ ಪ್ರಧಾನಿ
ನರೇಂದ್ರ ಮೋದಿಯವರೇ ಕುಮ್ಮಕ್ಕು ನೀಡಿದ್ದಾರೆ’ ಎಂದು ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಆರೋಪಿಸಿದ್ದಾರೆ.
ಮುಖ್ಯಮಂತ್ರಿ ಸ್ಥಾನಕ್ಕೆ ಬಿ.ಎಸ್.ಯಡಿಯೂರಪ್ಪ ರಾಜೀನಾಮೆ ನೀಡಿದ ಕೂಡಲೇ ಕಾಂಗ್ರೆಸ್ ಪ್ರಧಾನ ಕಚೇರಿಯಲ್ಲಿ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ರಾಹುಲ್, ಈ ಪ್ರಕರಣದಿಂದ ಆರ್ಎಸ್ಎಸ್ ಮತ್ತು ಬಿಜೆಪಿ ಪಾಠ ಕಲಿಯಬೇಕು ಎಂದು ಹೇಳಿದ್ದಾರೆ. ಭ್ರಷ್ಟಾಚಾರದ ವಿರುದ್ಧ ಹೋರಾಟ ನಡೆಸುವ ಪ್ರಧಾನಿ ಮೋದಿಯವರೇ ಭ್ರಷ್ಟಾಚಾರಿ. ಪ್ರಧಾನಿಯವರು ದೇಶಕ್ಕಿಂತ ಮತ್ತು ಸುಪ್ರೀಂಕೋರ್ಟ್ಗಿಂತ ದೊಡ್ಡವರಲ್ಲ ಎಂದೂ ರಾಹುಲ್ ಹೇಳಿದ್ದಾರೆ. ಕಾಂಗ್ರೆಸ್ ಮತ್ತು ಜೆಡಿಎಸ್ ಶಾಸಕರು ಬಿಜೆಪಿ ನಾಯಕರು ತೋರಿದ ಆಮಿಷಕ್ಕೆ ಬಲಿಯಾಗದೆ ಒಗ್ಗಟ್ಟು ತೋರಿಸಿದ್ದು ಸರಿಯಾಗಿಯೇ ಇದೆ ಎಂದೂ ಹೇಳಿದ್ದಾರೆ.
ಮನವಿಯೇ ಬಂದಿರಲಿಲ್ಲ: ಬೆಂಗಳೂರಿನಿಂದ ಕೊಚ್ಚಿಗೆ ಕಾಂಗ್ರೆಸ್-ಜೆಡಿಎಸ್ ಶಾಸಕರನ್ನು ಕರೆದೊಯ್ಯಲು ಚಾರ್ಟರ್ಡ್ ವಿಮಾನ ವ್ಯವಸ್ಥೆ ಮಾಡಲು ಮನವಿಯೇ ಸಲ್ಲಿಕೆಯಾಗಿರಲಿಲ್ಲ. ಹೀಗೆಂದು ನಾಗರಿಕ ವಿಮಾನಯಾನ ಮಹಾ ನಿರ್ದೇಶ ನಾಲಯ (ಡಿಜಿಸಿಎ) ಶನಿವಾರ ಸ್ಪಷ್ಟನೆ ನೀಡಿದೆ. ಶಾಸಕರು ಬೆಂಗಳೂರಿನಿಂದ ಕೊಚ್ಚಿಗೆ ತೆರಳಲು ಚಾರ್ಟರ್ಡ್ ವಿಮಾನದ ವ್ಯವಸ್ಥೆಗೆ ಅನುವು ಮಾಡಿಕೊಡಬೇಕು ಎಂದು ಕೇಳಿದ್ದರೂ ಮನವಿ ತಿರಸ್ಕರಿಸಲಾಗಿತ್ತು ಎಂದು ಜೆಡಿಎಸ್ ಗುರುವಾರ ಆರೋಪ ಮಾಡಿದ್ದಕ್ಕೆ ಈ ಸ್ಪಷ್ಟನೆ ನೀಡಿದೆ.
ಕೇಂದ್ರ ನಾಗರಿಕ ವಿಮಾನ ಯಾನ ಖಾತೆ ಸಹಾಯಕ ಸಚಿವ ಜಯಂತ್ ಸಿನ್ಹಾ ಟ್ವೀಟ್ ಮಾಡಿ, ಡಿಜಿಸಿಎಗೆ ಅಂಥ ಕೋರಿಕೆಯೇ ಬಂದಿಲ್ಲ. ದೇಶದ ಒಳಗಿನ ಚಾರ್ಟರ್ಡ್ ವಿಮಾನಗಳ ಬಳಕೆಗೆ ನಿರ್ದೇಶನಾಲಯದ ಅನುಮತಿ ಬೇಕಾಗಿಲ್ಲ. ಇದರ ಹೊರತಾಗಿಯೂ ಸಮಗ್ರ ವರದಿ ಸಲ್ಲಿಸುವಂತೆ ಆದೇಶಿಸಲಾಗಿದೆ ಎಂದು ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Doordarshan; ವ್ಯಾಪಕ ಟೀಕೆಗೆ ಕಾರಣವಾದ ಡಿಡಿ ನ್ಯೂಸ್ ಹೊಸ ಲೋಗೋ
ಅಂಡಾಶಯದ ಕ್ಯಾನ್ಸರ್ ನಿಂದ 30 ರ ಹರೆಯದಲ್ಲಿ ಖ್ಯಾತ ಫ್ಯಾಷನ್ ಇನ್ ಫ್ಲುಯೆನ್ಸರ್ ನಿಧನ
Lok Sabha Election 2024: ಝಾರ್ಖಂಡ್, ಛತ್ತೀಸ್ಗಢದಲ್ಲಿ ಗೆಲುವು ಯಾರಿಗೆ?
ಗ್ಯಾಂಗ್ ಸ್ಟರ್ ಬಿಷ್ಣೋಯಿ ಹೆಸರಿನಿಂದ ಸಲ್ಮಾನ್ ಮನೆಯಿಂದ ಕ್ಯಾಬ್ ಬುಕ್: ಯುವಕ ಅರೆಸ್ಟ್
Snake: 50 ಅಡಿ ಉದ್ದದ ದೈತ್ಯ ಹಾವು “ವಾಸುಕಿ’!
MUST WATCH
ಹೊಸ ಸೇರ್ಪಡೆ
PM ಮೋದಿ ಸಾಗುತ್ತಿದ್ದ ವೇಳೆ ‘ಚೊಂಬು’ ತೋರಿಸಲೆತ್ನಿಸಿದ ಮೊಹಮ್ಮದ್ ನಲಪಾಡ್
Kalaburagi; ಭಾರೀ ಮಳೆ: ಆಳಂದದಲ್ಲಿ ಸಿಡಿಲು ಬಡಿದು ಬಾಲಕ ಸಾವು
Udupi: ನಿಟ್ಟೂರಿನಲ್ಲಿ ಬಸ್ ಢಿಕ್ಕಿಯಾಗಿ ಬೈಕ್ ಸವಾರ ದಾರುಣ ಸಾವು
Congress ಟ್ಯಾಕ್ಸ್ ಸಿಟಿಯನ್ನು ಟ್ಯಾಂಕರ್ ಸಿಟಿ ಮಾಡಿದೆ: ಬೆಂಗಳೂರಿನಲ್ಲಿ ಮೋದಿ
Kollywood: 18 ವರ್ಷದ ಬಳಿಕ ಪತಿ ಸೂರ್ಯ ಜೊತೆ ನಟಿಸಲಿದ್ದಾರೆ ಜ್ಯೋತಿಕಾ