ಕಾಂಗ್ರೆಸ್ ಅಧ್ಯಕ್ಷ ಗಾದಿಗೆ ಶೀಘ್ರ ರಾಹುಲ್
Team Udayavani, Oct 14, 2017, 9:30 AM IST
ಹೊಸದಿಲ್ಲಿ: ‘ರಾಹುಲ್ ಗಾಂಧಿ ಶೀಘ್ರದಲ್ಲಿಯೇ ಕಾಂಗ್ರೆಸ್ ಅಧ್ಯಕ್ಷರಾಗಲಿದ್ದಾರೆ’ ಹೀಗೆಂದು ಸ್ಪಷ್ಟವಾಗಿ ಹೇಳಿದ್ದು ಅವರ ತಾಯಿ, ಹಾಲಿ ಅಧ್ಯಕ್ಷೆ ಸೋನಿಯಾ ಗಾಂಧಿ. ಶುಕ್ರವಾರ ‘ಎನ್ಡಿಟಿವಿ’ ಜತೆಗೆ ಮಾತನಾಡಿದ ಅವರು, ‘ರಾಹುಲ್ ಯಾವಾಗ ಅಧ್ಯಕ್ಷರಾಗಲಿದ್ದಾರೆ ಎಂದು ಹಲವು ವರ್ಷಗಳಿಂದ ಪ್ರಶ್ನೆಗಳನ್ನು ಕೇಳಲಾಗುತ್ತಿದೆ. ಅದು ಶೀಘ್ರ ನಿಜವಾಗಲಿದೆ ಎಂದರು. ಪಕ್ಷದ ನಾಯಕರು ಈಗಾಗಲೇ ಮಾಹಿತಿ ನೀಡಿರುವ ಪ್ರಕಾರ ಮಾಸಾಂತ್ಯದಲ್ಲಿಯೇ ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಅಧ್ಯಕ್ಷ ಸ್ಥಾನಕ್ಕೆ ಏರಲಿದ್ದಾರೆ. ಈ ಬಗ್ಗೆ ಕಾಂಗ್ರೆಸ್ನ ಕಾರ್ಯಕಾರಿ ಸಮಿತಿ ಸಭೆ ಸೇರಿ ಅಧಿಕೃತವಾಗಿ ನಿರ್ಣಯ ಕೈಗೊಳ್ಳಲಿದೆ.
ಹತ್ತೂಂಬತ್ತು ವರ್ಷಗಳಿಂದ ಪಕ್ಷದ ಚುಕ್ಕಾಣಿ ಹಿಡಿದಿರುವ ಸೋನಿಯಾ ಗಾಂಧಿ 2004 ಮತ್ತು 2009ರಲ್ಲಿ ಕಾಂಗ್ರೆಸ್ ನೇತೃತ್ವದ ಯುಪಿಎ ಸರಕಾರವನ್ನು ಅಧಿಕಾರಕ್ಕೆ ತರುವಲ್ಲಿ ಪ್ರಮುಖ ಪಾತ್ರ ವಹಿಸಿದ್ದರು. ಇತ್ತೀಚಿನ ದಿನಗಳಲ್ಲಿ ಅವರು ಅನಾರೋಗ್ಯ ಪೀಡಿತರಾಗಿರುವುದರಿಂದಲೂ ಕಾಂಗ್ರೆಸ್ ವಲಯದಲ್ಲಿ ರಾಹುಲ್ ಅಧ್ಯಕ್ಷರಾಗ ಬೇಕೆಂಬ ಬೇಡಿಕೆ ಹೆಚ್ಚಿತ್ತು. ಸೋನಿಯಾ ಅವರು ಕಾಂಗ್ರೆಸ್ ಕಾರ್ಯಕಾರಿ ಸಮಿತಿಯ ನೇತೃತ್ವ ವಹಿಸುವುದನ್ನು ಮುಂದುವರಿಸಲಿದ್ದಾರೆ.
ಪ್ರಣವ್ ಅಸಮಾಧಾನಗೊಂಡಿದ್ದರು: ಸಿಂಗ್
‘ನನ್ನನ್ನು ಪ್ರಧಾನಿ ಮಾಡಿದ್ದರಿಂದ ಪ್ರಣವ್ಗೆ ಬೇಸರವಾಗಿದ್ದು ನಿಜ. ಆದರೆ, ಈ ವಿಚಾರದಲ್ಲಿ ನನ್ನ ಪಾತ್ರವೇನೂ ಇರಲಿಲ್ಲ ಹಾಗೂ ನಾನು ಅನಿ ವಾರ್ಯತೆಯಲ್ಲಿ ಸಿಲುಕಿದ್ದೆ ಎಂಬುದೂ ಅವರಿಗೆ ಗೊತ್ತಿತ್ತು. ಹಾಗಾಗಿ ನನ್ನನ್ನು ಪ್ರಧಾನಿ ಹುದ್ದೆಗೆ ಏರಿಸಿದರೂ ನಮ್ಮಿಬ್ಬರ ನಡುವಿನ ಆತ್ಮೀಯತೆಗೆ ಧಕ್ಕೆಯಾಗಲಿಲ್ಲ. ಈ ಪ್ರೀತಿ ಕೊನೆಯವರೆಗೂ ಇರುತ್ತದೆ’ ಎಂದು ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಹೇಳಿದರು. ಅವರು ಮಾಜಿ ರಾಷ್ಟ್ರಪತಿ ಪ್ರಣವ್ ಮುಖರ್ಜಿ ಅವರ ‘ದಿ ಕೊಯ ಲಿಷನ್ ಇಯರ್ಸ್: 1996-2012’ ಪುಸ್ತಕ ಬಿಡುಗಡೆ ಸಮಾರಂಭದಲ್ಲಿ ಮಾತನಾಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು
ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ
Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ
Tragedy: ಛತ್ತೀಸ್ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ
Vande Bharat Metro ರೈಲು ಸೇವೆ ಜುಲೈಯಿಂದ ಶುರು? ವಿಶೇಷತೆಗಳೇನು?
MUST WATCH
ಹೊಸ ಸೇರ್ಪಡೆ
ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು
Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್
ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ
ನಾರಿ ಶಕ್ತಿ ವಿರೋಧಿಸುವ ಕಾಂಗ್ರೆಸ್ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ
Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ