ಮಂತ್ರಾಲಯಕ್ಕೆ ಭೇಟಿ ನೀಡಿದ ಗಾಂಧಿ ವಂಶದ ಮೊದಲ ಕುಡಿ
ಮಂತ್ರಾಲಯದಲ್ಲೇ ವಾಸ್ತವ್ಯ ; ರಾಯರ ಮಂತ್ರ ಪಠಿಸಿದ ರಾಹುಲ್
Team Udayavani, Oct 21, 2022, 7:05 AM IST
ರಾಯಚೂರು: ಭಾರತ್ ಜೋಡೋ ಯಾತ್ರೆ ಗುರುವಾರ ಸಂಜೆ ಮಂತ್ರಾಲಯ ತಲುಪಿದ್ದು, ಈ ವೇಳೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಶ್ರೀ ರಾಘವೇಂದ್ರ ಸ್ವಾಮಿಗಳ ದರ್ಶನ ಪಡೆದರು. ರಾಯರ ದರ್ಶನ ಪಡೆದ ಗಾಂಧಿ ವಂಶದ ಮೊದಲ ಕುಡಿ ಎನ್ನುವುದು ವಿಶೇಷವಾಗಿತ್ತು.
ಮಠದ ಆಡಳಿತಾಧಿಕಾರಿಗಳು ಹೂವಿನ ಹಾರ ಹಾಕಿ ಬರಮಾಡಿಕೊಂಡರೆ, ವಿದ್ಯಾಪೀಠದ ಅಧ್ಯಾಪಕರು ಮಂತ್ರೋಚ್ಛಾರ ಮಾಡುವ ಮೂಲಕ ಅದ್ಧೂರಿಯಾಗಿ ಸ್ವಾಗತಿಸಿದರು. ಗುರುವಾರ ಸಂಜೆ ಸಾಂಪ್ರದಾಯಿಕ ಉಡುಗೆಯಾದ ಪಂಚೆ, ಶಲ್ಯ ತೊಟ್ಟು ಆಗಮಿಸಿದ ರಾಹುಲ್, ಮೊದಲಿಗೆ ಮಂಚಾಲಮ್ಮ ದೇವಿಗೆ ಮಂಗಳಾರತಿ ಮಾಡಿ ಪೂಜೆ ಸಲ್ಲಿಸಿದರು. ಬಳಿಕ ಶ್ರೀ ರಾಯರ ಮೂಲ ಬೃಂದಾವನ ದರ್ಶನ ಪಡೆದು ಪೂಜೆ ಸಲ್ಲಿಸಿದರು.
ಈ ವೇಳೆ ಶ್ರೀ ಮಠದ ಪೀಠಾಧಿಪತಿ ಸುಬುಧೇಂದ್ರ ತೀರ್ಥರು ರಾಹುಲ್ ಗಾಂಧಿ ಅವರಿಗೆ ಮಂತ್ರಾಕ್ಷತೆ ನೀಡಿ ಆಶೀರ್ವದಿಸಿದರು. ಜತೆಗೆ ಪೂಜ್ಯಾಯ ರಾಘವೇಂದ್ರಾಯ ಮಂತ್ರವನ್ನು ರಾಹುಲ್ ಗಾಂಧಿ ಅವರಿಂದ ಹೇಳಿಸಿದರು. ಬಳಿಕ ಪೇಟ ತೋಡಿಸಿ ಆಶೀರ್ವದಿಸಿದರು. ನಂತರ ಶ್ರೀಗಳ ಜತೆ ಕೆಲ ಕಾಲ ಉಭಯ ಕುಶಲೋಪರಿ ನಡೆಸಿದ ರಾಹುಲ್ ಗಾಂಧಿ ಅವರಿಗೆ ಶ್ರೀಗಳು ಮಠದ ಅಭಿವೃದ್ಧಿ ಕಾರ್ಯಗಳ ವಿಡಿಯೋ ತೋರಿಸಿ ವಿವರಿಸಿದರು.
ಈ ವೇಳೆ ಪ್ರತಿಕ್ರಿಯಿಸಿದ ಶ್ರೀಗಳು, ಒಳ್ಳೆಯ ಉದ್ದೇಶಕ್ಕಾಗಿ ಪಾದಯಾತ್ರೆ ನಡೆಸುತ್ತಿದ್ದು, ಯಶಸ್ವಿಯಾಗಿ ಸಾಗಲಿ. ಮಂತ್ರಾಲಯ ಮಠಕ್ಕೆ ಎಲ್ಲ ಪಕ್ಷಗಳ ನಾಯಕರು ಭೇಟಿ ನೀಡಿದ್ದಾರೆ. ಈಗ ರಾಹುಲ್ ಗಾಂಧಿ ಅವರು ಭೇಟಿ ನೀಡಿದ್ದು ಖುಷಿಯ ವಿಚಾರ ಎಂದರು.
ಗುರುವಾರವಾದ ಕಾರಣ ಮಠಕ್ಕೆ ಬರುವ ಭಕ್ತರ ಸಂಖ್ಯೆ ಹೆಚ್ಚಾಗಿತ್ತು. ರಾಹುಲ್ ಗಾಂಧಿ ಅವರನ್ನು ನೋಡಲು ಜನ ನೂಕುನುಗ್ಗಲು ಮಾಡಿದರು. ಜನರನ್ನು ನಿಯಂತ್ರಿಸಲು ಪೊಲೀಸರು ಪರದಾಡುವಂತಾಯಿತು. ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ಎಐಸಿಸಿ ಕಾರ್ಯದರ್ಶಿ ಎನ್.ಎಸ್.ಬೋಸರಾಜ್ ಸೇರಿದಂತೆ ಅನೇಕ ಮುಖಂಡರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ
CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ
ಏ.26ರಂದು 2ನೇ ಹಂತದ ಚುನಾವಣೆ;ರಾಹುಲ್, ತರೂರ್, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ
EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…
Singapore ಏರ್ ಲೈನ್ಸ್ ಪೈಲಟ್ ನಂತೆ ಪೋಸ್ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!